ಶವ ಸಂಸ್ಕಾರಕ್ಕೆ ತೆರಳಿದ್ದವರ ಮೇಲೆ ಹೆಜ್ಜೇನು ದಾಳಿ; 40ಕ್ಕೂ ಅಧಿಕ ಮಂದಿ ಗಾಯ!

Published : Jul 06, 2024, 06:16 PM ISTUpdated : Jul 07, 2024, 12:39 PM IST
ಶವ ಸಂಸ್ಕಾರಕ್ಕೆ ತೆರಳಿದ್ದವರ ಮೇಲೆ ಹೆಜ್ಜೇನು ದಾಳಿ; 40ಕ್ಕೂ ಅಧಿಕ ಮಂದಿ ಗಾಯ!

ಸಾರಾಂಶ

ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿಯಿಂದ ಸುಮಾರು 42 ಮಂದಿ ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಗ್ರಾಮದಲ್ಲಿ ನೆಡದಿದೆ.

ಚಾಮರಾಜನಗರ (ಜು.6): ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿಯಿಂದ ಸುಮಾರು 42 ಮಂದಿ ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಗ್ರಾಮದಲ್ಲಿ ನೆಡದಿದೆ.

ಗ್ರಾಮದ ಮಹಾದೇವಯ್ಯ ಎಂಬುವವರು ಮೃತಪಟ್ಟಿದ್ದರು. ಮೃತರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ ಕುಟುಂಬಸ್ಥರು, ಗ್ರಾಮದ ಜನರು. ಗ್ರಾಮದ ಜಮೀನಿನಲ್ಲಿ ಅಂತ್ಯ ಸಂಸ್ಕಾರದ ವೇಳೆ ಬೆಂಕಿ ಹಾಕಿದ್ದಾರೆ. ಆದರೆ ಪಕ್ಕದ ಮರದಲ್ಲಿ ಹೆಜ್ಜೇನು ಗೂಡು ಕಟ್ಟಿರುವುದು ಗಮನಿಸಿಲ್ಲ. ಬೆಂಕಿ ಹಾಕಿದ ಬಳಿಕ ಎದ್ದ ದಟ್ಟ ಹೊಗೆ ಜೇನುಗೂಡಿಗೆ ತಟ್ಟಿದೆ. ಇದರಿಂದ ಮರದ ಹೆಜ್ಜೇನು ಹುಳುಗಳು ಏಕಾಏಕಿ ಜನರ ಮೇಲೆ ದಾಳಿ ನಡೆಸಿವೆ.

ವದಂತಿಗಳಿಗೆ ತೆರೆ; ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯದ ಬಗ್ಗೆ ಹೊಸ ಅಪ್ಡೇಟ್ ಇಲ್ಲಿದೆ

 ಹೆಜ್ಜೇನು ದಾಳಿಯಾಗುತ್ತಿದ್ದಂತೆ ದಿಕ್ಕಪಾಲಾಗಿ ಓಡಿದ ಜನರು. ಆದರೂ ಹೆಜ್ಜೇನು ದಾಳಿಗೆ ಸುಮಾರು 42 ಮಂದಿ ಅಸ್ತವ್ಯಸ್ತಗೊಂಡಿದ್ದಾರೆ. ಆ ಪೈಕಿ ಸುಮಾರು 19 ಜನರು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಮಾಹಿತಿ ತಿಳಿದು ಆಸ್ಪತ್ರೆಗೆ ಡಿಎಚ್‌ಒ ಚಿದಂಬರಂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್