ಬಿಜೆಪಿ ಸರ್ಕಾರದ ಮಾನದಂಡದಲ್ಲೇ ನೆರೆ ಪರಿಹಾರ ನೀಡಿ: ಬೊಮ್ಮಾಯಿ

Published : Jul 29, 2023, 07:15 AM IST
ಬಿಜೆಪಿ ಸರ್ಕಾರದ ಮಾನದಂಡದಲ್ಲೇ ನೆರೆ ಪರಿಹಾರ ನೀಡಿ: ಬೊಮ್ಮಾಯಿ

ಸಾರಾಂಶ

ಕಷ್ಟದಲ್ಲಿರುವ ರೈತರಿಗೂ ರಾಜ್ಯ ಸರ್ಕಾರ ನೈತಿಕ ಧೈರ್ಯ ಹೇಳಬೇಕಾಗಿದೆ. ಆದರೆ ಕಾಂಗ್ರೆಸ್‌ ನವರು ಬೇರೆ ಬೇರೆ ಗದ್ದಲದಲ್ಲಿ ಇದ್ದಾರೆ. ಮಳೆಯಿಂದಾಗಿ ಉತ್ತರ ಕರ್ನಾಟಕದ ಒಳನಾಡು ಪ್ರದೇಶಗಳಲ್ಲಂತೂ ಸಾಕಷ್ಟು ಹಾನಿಯಾಗಿದೆ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  

ಹಾವೇರಿ(ಜು.29):  ರಾಜ್ಯದಲ್ಲಿ ಪ್ರವಾಹದ ಭೀತಿಯಲ್ಲಿರುವ ಜನರನ್ನು ತಕ್ಷಣವೇ ಸ್ಥಳಾಂತರ ಮಾಡಬೇಕು. ಮಳೆಯಿಂದಾಗಿ ಈವರೆಗೆ 40ಕ್ಕೂ ಹೆಚ್ಚು ಸಾವಾಗಿದೆ. ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಕೊಡುತ್ತಿದ್ದ ಮಾನದಂಡದ ಮೇಲೆಯೇ ಪರಿಹಾರ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಷ್ಟದಲ್ಲಿರುವ ರೈತರಿಗೂ ರಾಜ್ಯ ಸರ್ಕಾರ ನೈತಿಕ ಧೈರ್ಯ ಹೇಳಬೇಕಾಗಿದೆ. ಆದರೆ ಕಾಂಗ್ರೆಸ್‌ ನವರು ಬೇರೆ ಬೇರೆ ಗದ್ದಲದಲ್ಲಿ ಇದ್ದಾರೆ. ಮಳೆಯಿಂದಾಗಿ ಉತ್ತರ ಕರ್ನಾಟಕದ ಒಳನಾಡು ಪ್ರದೇಶಗಳಲ್ಲಂತೂ ಸಾಕಷ್ಟು ಹಾನಿಯಾಗಿದೆ ಎಂದು ತಿಳಿಸಿದ್ದಾರೆ. 

ಕಾಂಗ್ರೆಸ್‌ ಶಾಸಕರು, ಸಚಿವರ ಮಧ್ಯೆ ಸಮನ್ವಯತೆಯೇ ಇಲ್ಲ: ಬೊಮ್ಮಾಯಿ

ಸಚಿವರಾರೂ ಅತ್ತ ಧಾವಿಸಿ ಕೆಲಸ ಮಾಡುತ್ತಿಲ್ಲ. ಕೂಡಲೇ ಅಂಥ ಮನೆಗಳಿಗೆ ಸಚಿವರು ಭೇಟಿ ನೀಡಿ ನಷ್ಟಆದ ಮನೆಗಳಿಗೆ 3 ಲಕ್ಷ ರು.ಯಿಂದ 5 ಲಕ್ಷ ರು.ವರೆಗೆ ಪರಿಹಾರ ಕೊಡಬೇಕು. ಹೆಕ್ಟೇರ್‌ಗೆ 13,000 ಬೆಳೆನಾಶದ ಪರಿಹಾರ ಕೊಡಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!