ಕೋವಿಡ್‌ ಟೆಸ್ಟ್‌ ವರದಿ ಒಂದೇ ದಿನದಲ್ಲಿ ನೀಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

Kannadaprabha News   | Asianet News
Published : May 14, 2021, 08:13 AM ISTUpdated : May 14, 2021, 08:29 AM IST
ಕೋವಿಡ್‌ ಟೆಸ್ಟ್‌ ವರದಿ ಒಂದೇ ದಿನದಲ್ಲಿ ನೀಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಸಾರಾಂಶ

* ವರದಿ ನೀಡಲು ವಿಳಂಬ ಮಾಡಿದ ಲ್ಯಾಬ್‌ ವಿರುದ್ಧ ಕಾನೂನು ರೀತಿ ಕ್ರಮ  * 24 ಗಂಟೆಗಳಲ್ಲೇ ವರದಿ ನೀಡುವಂತೆ ಸೂಕ್ತ ಆದೇಶ ಹೊರಡಿಸಿ, ಕ್ರಮ ಕೈಗೊಳ್ಳಬೇಕು * ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಹೈಕೋರ್ಟ್‌ ಆದೇಶ 

ಬೆಂಗಳೂರು(ಮೇ.14): ಕೊರೋನಾ ಪರೀಕ್ಷಾ ವರದಿ 24 ಗಂಟೆಗಳಲ್ಲಿ ಲಭ್ಯವಾಗಬೇಕು ಎಂದು ಈ ಹಿಂದೆ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ.

ಕೊರೋನಾ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌ ಓಕ ಮತ್ತು ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

"

ರಾಜ್ಯ ಸರ್ಕಾರ ಎಲ್ಲ ಲ್ಯಾಬ್‌ಗಳು 24 ಗಂಟೆಗಳಲ್ಲೇ ವರದಿ ನೀಡುವಂತೆ ಸೂಕ್ತ ಆದೇಶ ಹೊರಡಿಸಿ, ಕ್ರಮ ಕೈಗೊಳ್ಳಬೇಕು. ವರದಿಯನ್ನು ನೀಡಲು ವಿಳಂಬ ಮಾಡಿದ ಲ್ಯಾಬ್‌ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿತು.

ಲಸಿಕೆ ನೀಡಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ವಿಚಾರಣೆ ವೇಳೆ, ಹೈಕೋರ್ಟ್‌ ಸಿಬ್ಬಂದಿ (ಚಾಲಕ) ಸಾವನ್ನಪ್ಪಿರುವ ಕುರಿತು ಪ್ರಸ್ತಾಪಿಸಿದ ಪೀಠ, ಸೋಂಕಿತ ಚಾಲಕ ಸಿಬ್ಬಂದಿ ಮೇ 10ರಂದು ನಗರದ ಸಿ ವಿ ರಾಮನ್‌ ಜನರಲ್‌ ಆಸ್ಪತ್ರೆಯಲ್ಲಿ ಆರ್‌ಟಿಪಿಸಿಆರ್‌ ಪರೀಕ್ಷೆಗೆ ಸ್ವ್ಯಾಬ್‌ ಕೊಟ್ಟಿದ್ದಾರೆ. ಆದರೆ ಮೇ 12ರಂದು ಸೋಂಕಿತ ಸಿಬ್ಬಂದಿ ಸಾವನ್ನಪ್ಪುವವರೆಗೂ ವರದಿ ನೀಡಿಲ್ಲ ಎಂದು ಉಲ್ಲೇಖಿಸಿ, ನ್ಯಾಯಾಲಯ ಈ ಹಿಂದಿನ ವಿಚಾರಣೆ ವೇಳೆ, 24 ಗಂಟೆಗಳಲ್ಲಿ ಪರೀಕ್ಷಾ ವರದಿ ಲಭ್ಯವಾಗುವಂತೆ ಲ್ಯಾಬ್‌ಗಳಿಗೆ ಸೂಕ್ತ ನಿರ್ದೇಶನ ನೀಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಆದರೆ, ನ್ಯಾಯಾಲಯದ ಆದೇಶವೇ ಪಾಲನೆಯಾಗಿಲ್ಲ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!