ಕರ್ನಾಟಕದಿಂದ ಮಹದಾಯಿ ನದಿ ತಿರುವು ಕಾಮಗಾರಿ: ಗೋವಾ ಆರೋಪ

Published : Nov 18, 2022, 01:00 AM IST
ಕರ್ನಾಟಕದಿಂದ ಮಹದಾಯಿ ನದಿ ತಿರುವು ಕಾಮಗಾರಿ: ಗೋವಾ ಆರೋಪ

ಸಾರಾಂಶ

ಕಳಸಾ ಬಂಡೂರಿ ಕಾಮಗಾರಿ ಪ್ರದೇಶಕ್ಕೆ ಗೋವಾ ಫಾರ್ವಡ್‌ ಪಕ್ಷದ ಅಧ್ಯಕ್ಷ ಸರದೇಸಾಯಿ ಭೇಟಿ, ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಿಸಲು ಸಿಎಂ ಸಾವಂತ್‌ ಮೌನ: ಆಕ್ರೋಶ 

ಪಣಜಿ(ನ.18): ಗೋವಾ ಮಾಜಿ ಉಪಮುಖ್ಯಮಂತ್ರಿ ಹಾಗೂ ಗೋವಾ ಫಾರ್ವರ್ಡ್‌ ಪಾರ್ಟಿ ಅಧ್ಯಕ್ಷ ವಿಜಯ ಸರದೇಸಾಯಿ ಅವರು ನಿನ್ನೆ(ಗುರುವಾರ) ಕರ್ನಾಟಕದ ಮಹದಾಯಿ ನದಿ (ಕಳಸಾ-ಬಂಡೂರಿ) ಪಾತ್ರಕ್ಕೆ ಭೇಟಿ ನೀಡಿದರು. ಈ ವೇಳೆ ಅವರು, ‘ಕರ್ನಾಟಕವು ನದಿ ಯನ್ನು ತಿರುಗಿಸುವ ಯತ್ನ ನಡೆಸಿದೆ. ಆದರೂ ಗೋವಾ ಸರ್ಕಾರ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬೇಕೆಂದು ಸುಮ್ಮನಿದೆ. ಗೋವಾ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ನದಿ ತಿರುವು ಯೋಜನೆ ತಡೆಯಬೇಕು’ ಎಂದು ಆಗ್ರಹಿಸಿದರು.

ಕಳಸಾ ಬಂಡೂರಿ ಕಾಮಗಾರಿ ಸ್ಥಳವಾದ ಕಣಕುಂಬಿಗೆ ಆಗಮಿಸಿದ್ದ ಅವರು, ಕರ್ನಾಟಕ ನದಿ ತಿರುವು ಕಾಮಗಾರಿ ನಡೆಸುತ್ತಿರುವ ದ್ಯೋತಕ ಎಂದು ಹೇಳಿಕೊಂಡು ಕೆಲವು ಫೋಟೋಗಳನ್ನೂ ಬಿಡುಗಡೆ ಮಾಡಿದರು.

ಸರ್ಕಾರದಿಂದ ಮಹದಾಯಿ ಮೂಲಸ್ವರೂಪವೇ ಬದಲು: ಎನ್‌.ಎಚ್‌. ಕೋನರಡ್ಡಿ

‘ಕರ್ನಾಟಕವು ಮಹದಾಯಿ ಕಾಮಗಾರಿ ನಡೆಸುತ್ತಿದ್ದರೂ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಸುಮ್ಮನಿದ್ದಾರೆ. ಇನ್ನು ಕೆಲವೇ ತಿಂಗಳಲ್ಲಿ ಕರ್ನಾಟಕದಲ್ಲಿ ಚುನಾವಣೆ ಇದೆ. ಹೀಗಾಗಿ ಬಿಜೆಪಿಯನ್ನು ಅಲ್ಲಿ ಗೆಲ್ಲಿಸುವ ಸಲುವಾಗಿ ಸಾವಂತ್‌ ಅವರು ಕಾಮಗಾರಿಗೆ ಅವಕಾಶ ನೀಡುತ್ತಿದ್ದಾರೆ. ಕನ್ನಡ ಭವನಕ್ಕೆ ಗೋವಾದಲ್ಲಿ ಜಮೀನನ್ನೂ ನೀಡುತ್ತಿದ್ದಾರೆ. ಹೀಗೇ ಮಾಡುತ್ತ ಹೋದರೆ ಗೋವನ್ನರು ನೀರಿಗಾಗಿ ಬಾಯಿ ಬಿಡುವ ಸ್ಥಿತಿ ಎದುರಾಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು. ಬಳಿಕ ಗೋವಾ ಸರ್ಕಾರದ ಮುಖ್ಯ ಕಾರ‍್ಯದರ್ಶಿ ಅವರೊಂದಿಗೆ ಮಾತನಾಡಿ, ಮಧ್ಯಪ್ರವೇಶಿಸಲು ಆಗ್ರಹಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ