ಬಾರ್ ಗಳಿಗೆ ದೇವರ ಹೆಸರು ನಿಷಿದ್ಧ

Published : Nov 07, 2019, 07:14 AM IST
ಬಾರ್ ಗಳಿಗೆ ದೇವರ ಹೆಸರು ನಿಷಿದ್ಧ

ಸಾರಾಂಶ

ಮದ್ಯ ಮಾರಾಟ ಕೇಂದ್ರಗಳ ನಾಮಫಲಕ ಗಳಿಂದ ದೇವರ ಹೆಸರು ತೆರವುಗೊಳಿಸುವ ಬಗ್ಗೆ ಕಾನೂನು ಮತ್ತು ಅಬಕಾರಿ ಇಲಾಖೆಯ ಅಭಿಪ್ರಾಯ ಪಡೆಯುವಂತೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.

ಬೆಂಗಳೂರು [ನ.07]: ಬಾರ್ ಹಾಗೂ ಮದ್ಯ ಮಾರಾಟ ಮಳಿಗೆಗಳಿಗೆ ದೇವರ ಹೆಸರು ಇಡುವುದಕ್ಕೆ ನಿಷೇಧ ಹೇರಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. 

ಮದ್ಯ ಮಾರಾಟ ಕೇಂದ್ರಗಳ ನಾಮಫಲಕ ಗಳಿಂದ ದೇವರ ಹೆಸರು ತೆರವುಗೊಳಿಸುವ ಬಗ್ಗೆ ಕಾನೂನು ಮತ್ತು ಅಬಕಾರಿ ಇಲಾಖೆಯ ಅಭಿಪ್ರಾಯ ಪಡೆಯುವಂತೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.

ಸಾಕಷ್ಟು ಬಾರ್ ಅಥವಾ ಮದ್ಯ ಮಾರಾಟ ಕೇಂದ್ರಗಳಿಗೆ ಮಹಾ ಗಣಪತಿ, ರಾಘವೇಂದ್ರ, ಮಂಜು ನಾಥ, ವೆಂಕಟೇಶ್ವರ ಎಂಬಿತ್ಯಾದಿ ದೇವರ ಹೆಸರುಗಳನ್ನು ಇಡಲಾಗಿರುತ್ತದೆ. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದರ ಜತೆಗೆ ದೇವರಿಗೆ ಅಗೌರವ ಸೂಚಿಸಿದಂತಾ  ಗುತ್ತದೆ. ಹೀಗಾಗಿ ಇನ್ನು ಮುಂದೆ ಬಾರ್‌ಗಳಿಗೆ ದೇವರ ಹೆಸರು ಇಡದಂತೆ ನಿಷೇಧವೇರಲು ಹಾಗೂ ಹಾಲಿ ಇರುವ ಹೆಸರುಗಳನ್ನು ತೆಗೆಸಿಹಾಕಲು ಸಂಬಂಧ ಪಟ್ಟ ಕಾಯ್ದೆಗೆ ತಿದ್ದುಪಡಿ ಮಾಡಲು ಸಹ ಇಲಾಖೆ ಚಿಂತನೆ ನಡೆಸಿದೆ.

ಈ ಬಗ್ಗೆ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಾರ್‌ಗಳಿಗೆ ದೇವರ ಹೆಸರು ಇಡುವುದು ಅಭಾಸ ಎನಿಸುತ್ತದೆ. ಹೀಗಾಗಿ ಇದನ್ನು ತೆರವುಗೊಳಿಸಲು ಏನು ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಕಾನೂನು ಇಲಾಖೆ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಭಿಪ್ರಾಯ ಮಂಡಿಸು ವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇಂತಹ ಚಿಂತನೆ ಇರುವುದು ಸತ್ಯ. ಆದರೆ ಯಾವ ರೀತಿ ಮುಂದು ವರಿಯಬೇಕು ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ಹೇಳಿದರು. ಅಲ್ಲದೆ, ಬಾರ್‌ಗಳಿಗೆ ದೇವರ ಹೆಸರು ಇಡುವುದು ಸರಿಯಲ್ಲ ಎಂಬುದು ನನ್ನ ಅಭಿಪ್ರಾಯ. ಒಂದು ವೇಳೆ ಇದಕ್ಕೆ ಜನರಿಂದಲೂ ಬೆಂಬಲ ದೊರೆತರೆ ಕಾನೂನು ತಿದ್ದುಪಡಿ ಮಾಡಿಯಾದರೂ ನಿಷೇಧ ಮಾಡುತ್ತೇವೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದೇನೆ ಎಂದು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ