ಮಂತ್ರಾಲಯಕ್ಕೆ ಹೋಗುವೆ, ರಾಯರ ಆಶೀರ್ವಾದ ಪಡೆಯುತ್ತೇನೆ: ಸಿದ್ದರಾಮಯ್ಯ

Published : Jul 21, 2024, 10:03 AM ISTUpdated : Jul 22, 2024, 10:44 AM IST
ಮಂತ್ರಾಲಯಕ್ಕೆ ಹೋಗುವೆ, ರಾಯರ ಆಶೀರ್ವಾದ ಪಡೆಯುತ್ತೇನೆ: ಸಿದ್ದರಾಮಯ್ಯ

ಸಾರಾಂಶ

ಮಂತ್ರಾಲಯ ಶ್ರೀ ನನ್ನ ಬಗ್ಗೆ ಒಳ್ಳೆಯ ಮಾತನಾಡಿ ಆಶೀರ್ವದಿಸಿದ್ದಾರೆ. ನಾನು ಮಂತ್ರಾಲಯ ಶ್ರೀಗಳಿಗೆ ಚಿರಋಣಿಯಾಗಿರುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಬೆಂಗಳೂರು (ಜು.20): ಇದುವರೆಗೂ ನಾನು ಮಂತ್ರಾಲಯಕ್ಕೆ ಹೋಗಿಲ್ಲ. ಮಂತ್ರಾಲಯ ಶ್ರೀ ಆಹ್ವಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಮಂತ್ರಾಲಯಕ್ಕೆ ತೆರಳಿ ರಾಯರ ಆಶೀರ್ವಾದ ಪಡೆಯುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂತ್ರಾಲಯ ಶ್ರೀ ನನ್ನ ಬಗ್ಗೆ ಒಳ್ಳೆಯ ಮಾತನಾಡಿ ಆಶೀರ್ವದಿಸಿದ್ದಾರೆ. ನಾನು ಮಂತ್ರಾಲಯ ಶ್ರೀಗಳಿಗೆ ಚಿರಋಣಿಯಾಗಿರುವೆ ಎಂದರು.

ಭೋವಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ: ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ ವಡ್ಡರ ಅಭಿವೃದ್ಧಿ ನಿಗಮವಾಗಿ ಹೆಸರು ಬದಲಾಯಿಸಿ ಹೆಚ್ಚುವರಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಚಿತ್ರದುರ್ಗ ಭೋವಿ ಗುರುಪೀಠದಲ್ಲಿ ಶನಿವಾರ ಆಯೋಜಿಸಿದ್ದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ ದೀಕ್ಷಾ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಆಲಮಟ್ಟಿ ಡ್ಯಾಂಗೆ ಅಪಾರ ಪ್ರಮಾಣದ ಒಳ ಹರಿವು: ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಭೀತಿ!

ಕಾನೂನು ರೀತಿ ಸಾಧ್ಯವಿರುವ ಎಲ್ಲವನ್ನೂ ಮಾಡಿಕೊಡುತ್ತೇನೆ. ಸಾಮಾಜಿಕವಾಗಿ ಹಾಗೂ ಕಾನೂನು ರೀತಿ ಹಿಂದೇಟು ಹಾಕುವುದಿಲ್ಲ. ನನ್ನ ಹೆಸರು ಸಿದ್ದರಾಮ, ಮನೆ ದೇವರು ಸಿದ್ದರಾಮ, ಭೋವಿ ಗುರುಪೀಠದ ಶ್ರೀಗಳ ಹೆಸರು ಇಮ್ಮಡಿ ಸಿದ್ದರಾಮೇಶ್ವರ. ಭೋವಿ ಸಮಾಜಕ್ಕೆ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ನಿಗಮ ಮಾಡಿಕೊಟ್ಟಿದೆ ಎಂದರು.

ಭೋವಿ ಸಮಾಜದಲ್ಲಿ ಬಹಳಷ್ಟು ಜನ ಅವಿದ್ಯಾವಂತರಿದ್ದಾರೆ. ಕಸುಬಿನಿಂದ ವಿದ್ಯಾವಂತರಾಗಲು ಸಾಧ್ಯವಾಗಿಲ್ಲ. ದಲಿತ, ಹಿಂದುಳಿದ ವರ್ಗಕ್ಕೆ ಸೇರಿದ ಅನೇಕ ಜನರು ವಿದ್ಯಾವಂತರಾಗಲು ಸಾಧ್ಯವಾಗಿಲ್ಲ. ಶಿಕ್ಷಣ ಮಾತ್ರ ಶೋಷಿತ ಸಮುದಾಯಗಳಲ್ಲಿ ಆರ್ಥಿಕ, ಸಾಮಾಜಿಕ ಶಕ್ತಿ ತುಂಬ ಬಲ್ಲದು. ಇಂದು ಎಲ್ಲರಿಗೂ ಉಚಿತ ಶಿಕ್ಷಣ, ಹಾಸ್ಟೆಲ್ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಶಿಕ್ಷಣ ಮೂಲಭೂತ ಹಕ್ಕಾಗಿದೆ. ಇಷ್ಟಾದರೂ ಸ್ವಾತಂತ್ರ್ಯ ಬಂದು 77 ವರ್ಷಗಳಲ್ಲಿ ಇನ್ನೂ ಕೂಡಾ ಶೇ.75ರಷ್ಟು ಅಷ್ಟೇ ಅಕ್ಷರಸ್ಥರಾಗಲು ಸಾಧ್ಯವಾಗಿದೆ. ಉಳಿದ 25% ಜನ ಅವಿದ್ಯಾವಂತರಾಗಿದ್ದಾರೆ ಎಂದರು.

ಮೋದಿ, ನಿರ್ಮಲಾ ರಾಜೀನಾಮೆ ಕೊಟ್ರೆ ಸಿಎಂ ರಾಜೀನಾಮೆ ಕೊಡ್ತಾರೆ: ಸಚಿವ ಆರ್‌.ಬಿ.ತಿಮ್ಮಾಪೂರ

ಭೋವಿ ಸಮಾಜ ಪರಿಶಿಷ್ಟರಲ್ಲಿ ಬರಲಿದ್ದು 2013ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಶೋಷಿತರಲ್ಲಿ ಸಾಮಾಜಿಕ, ಆರ್ಥಿಕ ಶಕ್ತಿ ತುಂಬಲು ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿಗೆ ತಂದೆವು. ಈ ವರ್ಷ ಈ ಕಾಯ್ದೆಯಡಿ 39,121 ಕೋಟಿ ಯಷ್ಟು ಹಣವನ್ನು ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಮೀಸಲು ಇಟ್ಟಿದ್ದೇವೆ. ರಾಜ್ಯದ ಅಭಿವೃದ್ಧಿಗೆ 1,60,000 ಸಾವಿರ ಕೋಟಿ ಖರ್ಚು ಮಾಡಿದರೆ, ಪರಿಶಿಷ್ಟ ಜಾತಿ ವರ್ಗದವರಿಗೆ 24.1% ಮೀಸಲಿಡಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ