
ಉಡುಪಿ (ಸೆ.19): ಕಡಲತೀರದಲ್ಲಿ ಈಜಾಡುವಾಗ ಅಲೆಗಳ ಹೊಡೆತಕ್ಕೆ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ ನಡೆದಿದೆ.
ಬೆಂಗಳೂರು ನಿವಾಸಿಗಳಾದ ಗುಪ್ತಾ ಪ್ರಶಾಂತ್ ಚಂದ್ರಶೇಖರ್, ಋತುರಾಜ್, ರೀತು, ಆರುಷಿ ಬನ್ಸಾಲ್ ಎಂಬುವರನ್ನು ರಕ್ಷಿಸಲಾಗಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರವಾಸ ಬಂದಿದ್ದ ಯುವಕರು. ಸಮುದ್ರದಲ್ಲಿ ಅಲೆಗಳ ಅಬ್ಬರ ಎಚ್ಚಾಗಿದ್ದರೂ ಈಜಾಡಲು ಕಡಲಿಗೆ ಇಳಿದಿದ್ದರು. ಈಜಾಡುವ ವೇಳೆ ಅಪ್ಪಳಿಸಿರುವ ಬೃಹತ್ ಅಲೆಗಳ ಹೊಡೆತಕ್ಕೆ ಕೊಚ್ಚಿಹೋಗಿದ್ದಾರೆ. ಈ ವೇಳೆ ಲೈಫ್ ಗಾರ್ಡ್ ಸಿಬ್ಬಂದಿ ನೋಡಿ ತಕ್ಷಣ ರಕ್ಷಣೆಗೆ ಮುಂದಾಗಿದ್ದಾರೆ. ಅಷ್ಟರಲ್ಲಾಗಲೇ ಅಸ್ವಸ್ಥಗೊಂಡಿದ್ದ ಯುವಕರನ್ನು ರಕ್ಷಿಸಿ ಗೋಕರ್ಣದ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈಗಾಗಲೇ ಪ್ರವಾಸಿಗರಿಗೆ ಎಚ್ಚರಿಕೆ ನೀಡಿದ್ದರೂ ನಿರ್ಲಕ್ಷ್ಯದಿಂದ ಇಂಥ ಘಟನೆಗಳು ಮರುಕಳಿಸುತ್ತಿವೆ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಗೋಕರ್ಣ ಪೊಲೀಸರು.
ದಕ್ಷಿಣ ಭಾರತದ ಅದ್ಭುತ ತಾಣಗಳಿವು… ಮಿಸ್ ಮಾಡದೇ ಒಂದ್ಸಲನಾದ್ರೂ ಹೋಗಿ ಬನ್ನಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ