ಗೋಕರ್ಣ ದೇಗುಲ ರಾಮಚಂದ್ರಾಪುರ ಮಠದ ವಶಕ್ಕೆ

By Web DeskFirst Published Nov 3, 2018, 12:32 PM IST
Highlights

ಸರ್ಕಾರದ ಸುಪರ್ದಿಯಲ್ಲಿದ್ದ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು  ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲಾಗಿದೆ.  ಗೋಕರ್ಣ ದೇವಾಲಯವನ್ನು ಮಠಕ್ಕೆ ಸೋಮವಾರದೊಳಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ದೇಗುಲವನ್ನು ಮಠಕ್ಕೆ ಹಸ್ತಾಂತರಿಸಲಾಗಿದೆ. 

ಕಾರವಾರ: ಸುಪ್ರೀಂಕೋರ್ಟ್ ಆದೇಶದ  ಹಿನ್ನೆಲೆಯಲ್ಲಿ ಸರ್ಕಾರದ ಸುಪರ್ದಿಯಲ್ಲಿದ್ದ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು  ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲಾಗಿದೆ. 

ಗೋಕರ್ಣ ದೇವಾಲಯವನ್ನು ಮಠಕ್ಕೆ ಸೋಮವಾರದೊಳಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ದೇಗುಲವನ್ನು ಮಠಕ್ಕೆ ಹಸ್ತಾಂತರಿಸಲಾಗಿದೆ. 

ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ ಬಿ.ಎಸ್ .ನಾಗರತ್ನಮ್ಮ ಈ ಬಗ್ಗೆ ಆದೇಶ ನೀಡಿದ್ದರು.  ಕೊಲ್ಲೂರು  ದೇವಾಲಯದ ಆಡಳಿತಾಧಿಕಾರಿಯಾಗಿರುವ ಹಾಲಪ್ಪ ಅವರನ್ನೇ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತಾಧಿಕಾಯಾಗಿ ಸರ್ಕಾರ ನೇಮಿಸಿತ್ತು. 

ಹಾಲಪ್ಪ ಶನಿವಾರ ಗೋಕರ್ಣಕ್ಕೆ ಆಗಮಿಸಿ ತಮ್ಮ ಆಡಳಿತದಲ್ಲಿದ್ದ ದೇವಾಲಯವನ್ನು ಮಠಕ್ಕೆ ಹಸ್ತಾಂತರ ಮಾಡಿದ್ದಾರೆ.  

click me!