ಗೋಕರ್ಣ ದೇಗುಲ ರಾಮಚಂದ್ರಾಪುರ ಮಠದ ವಶಕ್ಕೆ

Published : Nov 03, 2018, 12:32 PM ISTUpdated : Nov 03, 2018, 12:52 PM IST
ಗೋಕರ್ಣ ದೇಗುಲ ರಾಮಚಂದ್ರಾಪುರ ಮಠದ ವಶಕ್ಕೆ

ಸಾರಾಂಶ

ಸರ್ಕಾರದ ಸುಪರ್ದಿಯಲ್ಲಿದ್ದ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು  ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲಾಗಿದೆ.  ಗೋಕರ್ಣ ದೇವಾಲಯವನ್ನು ಮಠಕ್ಕೆ ಸೋಮವಾರದೊಳಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ದೇಗುಲವನ್ನು ಮಠಕ್ಕೆ ಹಸ್ತಾಂತರಿಸಲಾಗಿದೆ. 

ಕಾರವಾರ: ಸುಪ್ರೀಂಕೋರ್ಟ್ ಆದೇಶದ  ಹಿನ್ನೆಲೆಯಲ್ಲಿ ಸರ್ಕಾರದ ಸುಪರ್ದಿಯಲ್ಲಿದ್ದ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು  ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲಾಗಿದೆ. 

ಗೋಕರ್ಣ ದೇವಾಲಯವನ್ನು ಮಠಕ್ಕೆ ಸೋಮವಾರದೊಳಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ದೇಗುಲವನ್ನು ಮಠಕ್ಕೆ ಹಸ್ತಾಂತರಿಸಲಾಗಿದೆ. 

ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ ಬಿ.ಎಸ್ .ನಾಗರತ್ನಮ್ಮ ಈ ಬಗ್ಗೆ ಆದೇಶ ನೀಡಿದ್ದರು.  ಕೊಲ್ಲೂರು  ದೇವಾಲಯದ ಆಡಳಿತಾಧಿಕಾರಿಯಾಗಿರುವ ಹಾಲಪ್ಪ ಅವರನ್ನೇ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತಾಧಿಕಾಯಾಗಿ ಸರ್ಕಾರ ನೇಮಿಸಿತ್ತು. 

ಹಾಲಪ್ಪ ಶನಿವಾರ ಗೋಕರ್ಣಕ್ಕೆ ಆಗಮಿಸಿ ತಮ್ಮ ಆಡಳಿತದಲ್ಲಿದ್ದ ದೇವಾಲಯವನ್ನು ಮಠಕ್ಕೆ ಹಸ್ತಾಂತರ ಮಾಡಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ