
ಬೆಂಗಳೂರು (ಸೆ.22): ರಾಜ್ಯದಲ್ಲಿ ಪ್ರಮುಖ ಆದಾಯದ ಮೂಲವಾಗಿರುವ ಅಬಕಾರಿ ಇಲಾಖೆಯ ಆದಾಯವನ್ನು ಹೆಚ್ಚಳ ಮಾಡುವಲ್ಲಿ ರಾಜ್ಯ ಸರ್ಕಾರ ಚಿಂತನೆ ಮಾಡಿದಂತಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಮಹಾನಗರ, ನಗರಗಳು, ಪಟ್ಟಣಗಳು ಹಾಗೂ ಗ್ರಾಮೀಣ ಭಾಗದಲ್ಲಿರುವಂತಹ ಸೂಪರ್ ಮಾರ್ಕೆಟ್ಗಳಲ್ಲಿಯೂ ಮದ್ಯ ಮಾರಾಟದ ಬಗ್ಗೆ ಚರ್ಚೆ ಮಾಡಲಾಗಿದೆ ಎಂಬ ಸುಳಿವನ್ನು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ನೀಡಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸೂಪರ್ ಮಾರ್ಕೆಟ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು, ಈ ಪ್ರಸ್ತಾವನೆಯ ಚರ್ಚೆಯನ್ನು ಮಾಡಲಾಗಿದೆ. ಆದರೆ, ಈವರೆಗೆ ಜಾರಿಗೆ ತರುವ ಬಗ್ಗೆ ತೀರ್ಮಾನ ಆಗಿಲ್ಲ. ಸೂಪರ್ ಮಾರ್ಕೆಟ್ನಲ್ಲಿ ಮದ್ಯ ಮಾರಾಟ ಮಾಡುವುದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು. ಇದರ ಬಗ್ಗೆ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿದ್ದೇನೆ. ಇನ್ನೂ ಚರ್ಚೆಯ ಹಂತದಲ್ಲಿದೆಯೇ ಹೊರತು ತೀರ್ಮಾನ ಆಗಿಲ್ಲ ಎಂದು ತಿಳಿಸಿದರು.
ಕಾವೇರಿ ನೀರಿನ ವಿಚಾರದಲ್ಲಿ ಸಿಟ್ಟಿದ್ರೆ ಎಷ್ಟಾದ್ರೂ ಬೈಯಿರಿ, ಬೈಸಿಕೊಳ್ತೀವಿ: ಡಿಸಿಎಂ ಡಿ.ಕೆ. ಶಿವಕುಮಾರ್
ಮತ್ತೊಂದೆಡೆ ಗ್ರಾಮೀಣ ಪ್ರದೇಶಗಳಲ್ಲಿ ಮಾರ್ಕೆಟ್ಗಳು ಹಾಗೂ ಕಿರಾಣಿ (ಪ್ರಾವಿಷನ್ ಸ್ಟೋರ್ಸ್) ಅಂಗಡಿಗಳಲ್ಲಿ ಮಾರಾಟ ಮಾಡುತ್ತಾರೆ ಎಂಬ ದೂರುಗಳು ಕೇಳಿಬಂದಿವೆ. ಈಗಲೂ ಹಳ್ಳಿಗಳಲ್ಲಿ ಪರವಾನಗಿ ಇಲ್ಲದೆಯೇ ಮದ್ಯ ಮಾರಾಟ ಮಾಡುವವರ ಹಾವಳಿ ಹೆಚ್ಚಾಗುತ್ತಿದೆ. ಹೀಗಾಗಿ, ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಬೇಕಿದೆ. ಜನರು ಎಲ್ಲಾದರೂ ಮದ್ಯವನ್ನು ತೆಗೆದುಕೊಳ್ಳುತ್ತಾರೆ. ಆದರೆ, ಮುಖ್ಯವಾಗಿ ಜನರು ಖರೀದಿ ಮಾಡುವ ಮದ್ಯವು ಕಾನೂನಾತ್ಮಕವಾಗಿರಲಿ ಎಂದು ನೋಡುತ್ತಿದ್ದೇವೆ. ಇನ್ನು ಸಿಕ್ಕಾಪಟ್ಟೆ ಮದ್ಯ ಮಾರಾಟ ಮಾಡುವ ಉದ್ದೇಶ ಇಲ್ಲ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖೆಗೆ ಯಾವುದೇ ತೆರಿಗೆ ಸಂಗ್ರಹ ಟಾರ್ಗೆಟ್ ನೀಡಿಲ್ಲ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ