Metro Passengers: ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್, ಇನ್ಮುಂದೆ ಈ ಐದು ಆ್ಯಪ್‌ಗಳಲ್ಲಿ ಟಿಕೆಟ್ ಲಭ್ಯ!

Kannadaprabha News   | Kannada Prabha
Published : Jun 29, 2025, 12:06 PM IST
Namma metro

ಸಾರಾಂಶ

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಟಿಕೆಟ್ ಖರೀದಿ ಇನ್ನಷ್ಟು ಸುಲಭ. ಒಎನ್​​ಡಿಸಿ ಮೂಲಕ ಐದು ಹೊಸ ಆ್ಯಪ್‌ಗಳಲ್ಲಿ ಟಿಕೆಟ್ ಖರೀದಿಸಬಹುದು. ಜೊತೆಗೆ ಶೇ.20-30 ರಷ್ಟು ರಿಯಾಯಿತಿಯೂ ಲಭ್ಯ.

ಬೆಂಗಳೂರು (ಜೂ.29) : ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮವು ಒಎನ್​​ಡಿಸಿ (ಓಪನ್‌ ನೆಟ್‌ವರ್ಕ್‌ ಫಾರ್‌ ಡಿಜಿಟಲ್‌ ಕಾಮರ್ಸ್‌) ಮೂಲಕ ಐದು ಆ್ಯಪ್‌ಗಳಲ್ಲಿ ನಮ್ಮ ಮೆಟ್ರೋದ ಟಿಕೆಟ್‌ ಸೌಕರ್ಯ ಕಲ್ಪಿಸಲಿದೆ.

ಮೆಟ್ರೋ ಪ್ರಯಾಣಿಕರು ಸುಲಭವಾಗಿ ಟಿಕೆಟ್‌ ಖರೀದಿಸಲು ಮೆಟ್ರೋ ಟಿಕೆಟ್ ಅನ್ನು ಮೈಲ್ಸ್ ಆ್ಯಂಡ್ ಕಿಲೋಮೀಟರ್ ಟುಮ್ಯಾಕೋ, ರೆಡ್ ಬಸ್, ಔಟ್ ಪಾಥ್, ಹೈವೇ ಡಿಲೈಟ್ ಸೇರಿ ಒಟ್ಟು ಐದು ಆ್ಯಪ್​​ಗಳ ಮೂಲಕ ಖರೀದಿಸಬಹುದಾಗಿದೆ. ಈ ಆ್ಯಪ್​ಗಳು ಮೆಟ್ರೋ ಟಿಕೆಟ್ ಬುಕ್ ಮಾಡಿದರೆ, ಶೇ 20-30 ರಷ್ಟು ರಿಯಾಯಿತಿ ಕೂಡ ನೀಡುತ್ತಿವೆ.

ಪ್ರಸ್ತುತ ನಮ್ಮ ಮೆಟ್ರೋ, ವಾಟ್ಸ್​ಆ್ಯಪ್​ ಚಾಟ್ ಬಾಟ್ ಹಾಗೂ ಪೇಟಿಎಂನಲ್ಲಿ ಮಾತ್ರ ಮೆಟ್ರೋ ಟಿಕೆಟ್ ಖರೀದಿಗೆ ಅವಕಾಶವಿತ್ತು. ರ್ಯಾಪಿಡೋ ಹಾಗೂ ನಮ್ಮ ಯಾತ್ರಿ ಆ್ಯಪ್​​ಗಳಲ್ಲಿ ಮೆಟ್ರೋ ಟಿಕೆಟ್ ಟೆಸ್ಟಿಂಗ್ ನಡೆಸಲಾಗುತ್ತಿದೆ. ಟಿಕೆಟ್​ಗಾಗಿ ಪ್ರಯಾಣಿಕರು ಮೆಟ್ರೋ ನಿಲ್ದಾಣಗಳಲ್ಲಿ ಸರದಿ ನಿಲ್ಲುವುದನ್ನು ತಪ್ಪಿಸಲು ಬಿಎಂಆರ್​​ಸಿಎಲ್ ಈ ಕ್ರಮ ಕೈಗೊಂಡಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದರು.

ಇತ್ತೀಚೆಗೆ ನಿಗಮವು ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ಸ್ವಯಂ ಸೇವಾ ಟಿಕೆಟ್ ನೀಡುವ ಯಂತ್ರಗಳನ್ನು ಅಳವಡಿಸಿತ್ತು. ಇವು 30 ಸೆಕೆಂಡುಗಳಲ್ಲಿ ಟಿಕೆಟ್​ಗಳನ್ನು ಒದಗಿಸುತ್ತವೆ. ಈ ಮೂಲಕ ಪ್ರಯಾಣಿಕರ ದಟ್ಟಣೆ ವೇಳೆಯಲ್ಲಿ ಟಿಕೆಟ್‌ಗೆ ಉಂಟಾಗುವ ನೂಕುನುಗ್ಗಲು ತಡೆಗೆ ಬಿಎಂಆರ್‌ಸಿಎಲ್‌ ಕ್ರಮ ವಹಿಸಿದೆ.

ಜುಲೈ ಮಧ್ಯಂತರದಲ್ಲಿ ಹಳದಿ ಮಾರ್ಗ ಸಿಎಂಆರ್‌ಎಸ್‌ ತಪಾಸಣೆ?

ಮೆಟ್ರೋ ಸುರಕ್ಷತಾ ಆಯುಕ್ತರ ತಂಡ (ದಕ್ಷಿಣ) ಜುಲೈ ಮಧ್ಯಂತರದಲ್ಲಿ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋದ ಹಳದಿ ಮಾರ್ಗದ ಪರಿಶೀಲನೆ ನಡೆಸುವುದಾಗಿ ಮೂಲಗಳು ತಿಳಿಸಿವೆ.

ಆರ್‌.ವಿ.ರಸ್ತೆ - ಬೊಮ್ಮಸಂದ್ರ (18.8ಕಿಮೀ) ಸಂಪರ್ಕಿಸುವ ಮಾರ್ಗಕ್ಕೆ ಬಿಎಂಆರ್‌ಸಿಎಲ್‌ ಸ್ವತಂತ್ರ ಸುರಕ್ಷತಾ ಮೌಲ್ಯಮಾಪನ (ಐಎಸ್‌ಎ) ಪ್ರಮಾಣಪತ್ರವನ್ನು ಪಡೆದಿದೆ. ಇದಾದ ಬಳಿಕ ಅಂತಿಮವಾಗಿ ಬಹುತೇಕ ಜುಲೈ 15-16ರಂದು ಪರಿಶೀಲನೆ ನಡೆಯಬಹುದು ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ಹಳದಿ ಮಾರ್ಗದ ಕಾಮಗಾರಿ ಈಗಾಗಲೇ ಪೂರ್ಣವಾಗಿದ್ದು, ರೈಲು ಸಂಚಾರದ ಪ್ರಾಯೋಗಿಕ ಪರೀಕ್ಷೆಯೂ ಮುಕ್ತಾಯವಾಗಿದೆ. ಆರಂಭಿಕ ಸಂಚಾರಕ್ಕೆ ಅಗತ್ಯವಿರುವ ಒಟ್ಟಾರೆ ಮೂರು ರೈಲುಗಳ ಕೂಡ ಆಗಮಿಸಿವೆ. ಕಳೆದ ಸೆಪ್ಟೆಂಬರ್‌ನಲ್ಲೇ ಸಂಶೋಧನಾ ಗುಣಮಟ್ಟ ಮತ್ತು ವಿನ್ಯಾಸ ಸಂಸ್ಥೆ ( ಆರ್‌ಡಿಎಸ್‌ಒ) ಪ್ರಾಯೋಗಿಕ ಸಂಚಾರ ಮೂಲಕ ತಪಾಸಣೆ ನಡೆಸಿತ್ತು. ರೋಲಿಂಗ್ ಸ್ಟಾಕ್‌, ನಿಲ್ದಾಣಗಳ ತಪಾಸಣೆ ಆಗಿತ್ತು. ಆದರೆ ಸಿಗ್ನಲಿಂಗ್‌ ಸಂಬಂಧಿಸಿದ ಕೆಲ ತಪಾಸಣೆ ವಿಳಂಬವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!