ಬೆಂಗಳೂರಿಂದ ಬಾಂಗ್ಲಾಗೆ ಇದೇ ಮೊದಲ ಬಾರಿ ರೈಲು ಸೇವೆ ಆರಂಭ

Kannadaprabha News   | Asianet News
Published : Nov 25, 2020, 07:33 AM IST
ಬೆಂಗಳೂರಿಂದ ಬಾಂಗ್ಲಾಗೆ ಇದೇ ಮೊದಲ ಬಾರಿ ರೈಲು ಸೇವೆ ಆರಂಭ

ಸಾರಾಂಶ

ಬೆಂಗಳೂರು ಹಾಗೂ ಬಾಂಗ್ಲಾ ದೇಶದ ನಡುವೆ ಇದೇ ಮೊದಲ ಬಾರಿಗೆ ರೈಲು ಸೇವೆ ಆರಂಭ ಮಾಡಲಾಗಿದೆ. 

 ಬೆಂಗಳೂರು (ನ.25):  ನೈಋುತ್ಯ ರೈಲ್ವೆಯು ಇದೇ ಪ್ರಥಮ ಬಾರಿಗೆ ಬೆಂಗಳೂರು ರೈಲ್ವೆ ವಿಭಾಗದ ಹೊಸೂರು ರೈಲು ನಿಲ್ದಾಣದಿಂದ ಮಂಗಳವಾರ ಬಾಂಗ್ಲಾದೇಶದ ಬೆನಪೊಲೆ ರೈಲು ನಿಲ್ದಾಣಕ್ಕೆ ವಾಣಿಜ್ಯ ಸರಕು ಸಾಗಣೆ ರೈಲು ಕಾರ್ಯಾಚರಣೆ ಮಾಡಿತು.

ಹೊಸೂರು ರೈಲ್ವೆ ನಿಲ್ದಾಣದಲ್ಲಿ 25 ವ್ಯಾಗನ್‌ನಲ್ಲಿ ಅಶೋಕ ಲೇಲ್ಯಾಂಡ್‌ ಕಂಪನಿಗೆ ಸೇರಿದ 100 ಲಘು ವಾಣಿಜ್ಯ ವಾಹನಗಳನ್ನು ಹೊತ್ತ ಸರಕು ಸಾಗಣೆ ರೈಲಿಗೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶೋಕ್‌ ಕುಮಾರ್‌ ವರ್ಮಾ ಹಸಿರು ನಿಶಾನೆ ತೋರಿದರು. ಬಾಂಗ್ಲಾದೇಶದ ಬೆನಪೊಲೆ ರೈಲು ನಿಲ್ದಾಣ ಹೊಸೂರು ರೈಲು ನಿಲ್ದಾಣದಿಂದ 2,121 ಕಿ.ಮೀ. ದೂರದಲ್ಲಿದೆ.

ಕಮಾಂಡೋ ತರಬೇತಿ ಪಡೆದು, ಕತ್ತಲಲ್ಲಿ 30 ಕಿ.ಮೀ ನಡೆದು ಬಂದಿದ್ದ ಉಗ್ರರು!

ನೈಋುತ್ಯ ರೈಲ್ವೆ ಈ ಹಿಂದೆ ಪೆನಗೊಂಡ ರೈಲು ನಿಲ್ದಾಣದಿಂದ ನೇಪಾಳದ ನೌಟ್ನವಾಗೆ ಎರಡು ಸರಕು ಸಾಗಣೆ ರೈಲು ಕಾರ್ಯಾಚರಣೆ ಮಾಡಿತ್ತು. ಪ್ರಸಕ್ತ ಸಾಲಿನಲ್ಲಿ ದೇಶದ ಹಾಗೂ ಹೊರ ದೇಶದ ವಿವಿಧ ಸ್ಥಳಗಳಿಗೆ 128 ಸರಕು ಸಾಗಣೆ ರೈಲುಗಳನ್ನು ಕಾರ್ಯಾಚರಣೆ ಮಾಡಿದೆ.

ಆಟೋಮೊಬೈಲ್‌ ಸರಕುಗಳ ಸಾಗಣೆಗೆ ರಸ್ತೆ ಸಾರಿಗೆಗೆ ಹೋಲಿಕೆ ಮಾಡಿದರೆ ರೈಲು ಸಾರಿಗೆ ಸುರಕ್ಷಿತ ಹಾಗೂ ಸುಲಭವಾಗಿದೆ. ಅಲ್ಲದೆ, ನಿಗದಿತ ಸಮಯಕ್ಕೆ ಸರಕು ತಲುಪುವ ಬಗ್ಗೆ ನಿಗಾವಹಿಸಲು ಸಾಧ್ಯವಾಗುತ್ತದೆ ಎಂದು ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶೋಕ್‌ ಕುಮಾರ್‌ ವರ್ಮಾ ಹೇಳಿದರು.

ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಡಾ.ಎ.ಎನ್‌.ಕೃಷ್ಣಾ ರೆಡ್ಡಿ, ಹಿರಿಯ ವಿಭಾಗೀಯ ಕಾರ್ಯಾಚರಣೆ ವ್ಯವಸ್ಥಾಪಕ ಅಖಿಲ್‌ ಎಂ.ಶಾಸ್ತ್ರೀ, ಅಶೋಕ ಲೈಲ್ಯಾಂಡ್‌ ಉಪಾಧ್ಯಕ್ಷ ರಾಜೇಶ್‌ ಮಿತ್ತಲ್‌ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

- ನೈಋುತ್ಯ ರೈಲ್ವೆ ವ್ಯಪಸ್ಥಾಪಕರಿಂದ ರೈಲಿಗೆ ಹಸಿರು ನಿಶಾನೆ

- 100 ವಾಹನಗಳನ್ನು ಹೊತ್ತು ಸಂಚಾರ ಆರಂಭ

- 2121 ಕಿ.ಮೀ. ಸಂಚಾರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!