ರೈತರ ಆಕ್ರೋಶಕ್ಕೆ ಮಣಿದ ಸರ್ಕಾರ; 7 ತಾಸು ತ್ರೀಫೇಸ್‌ ವಿದ್ಯುತ್‌ ನೀಡಲು ಸರ್ಕಾರ ಸೂಚನೆ

Published : Oct 30, 2023, 04:48 AM IST
ರೈತರ ಆಕ್ರೋಶಕ್ಕೆ ಮಣಿದ ಸರ್ಕಾರ; 7 ತಾಸು ತ್ರೀಫೇಸ್‌ ವಿದ್ಯುತ್‌ ನೀಡಲು ಸರ್ಕಾರ ಸೂಚನೆ

ಸಾರಾಂಶ

ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಎಸ್ಕಾಂಗಳು ತ್ರೀಫೇಸ್‌ ವಿದ್ಯುತ್‌ ಪೂರೈಕೆ ಕಡಿತಗೊಳಿಸಿದ್ದವು. ನಂತರ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೊದಲಿನ 7 ತಾಸು ಬದಲು 5 ತಾಸು ನಿರಂತರ ತ್ರೀಫೇಸ್‌ ವಿದ್ಯುತ್‌ ಪೂರೈಸಲು ಹೇಳಿದ್ದರು. ಅದೂ ಸರಿಯಾಗಿ ಜಾರಿಗೆ ಬಾರದೆ, ರೈತರು ಪ್ರತಿಭಟನೆ ನಡೆಸಿದ್ದರು.

ಕೊಪ್ಪಳ (ಅ.30) :  ರೈತರ ಪಂಪ್‌ಸೆಟ್‌ಗಳಿಗೆ ಕೇವಲ ಐದು ಗಂಟೆ ವಿದ್ಯುತ್ ಪೂರೈಕೆ ಮಾಡುವ ಮೂಲಕ ರಾಜ್ಯದ ರೈತರ ಆಕ್ರೋಶಕ್ಕೆ ತುತ್ತಾಗಿದ್ದ ರಾಜ್ಯ ಸರ್ಕಾರ, ಈಗ ಮತ್ತೆ ಹಿಂದಿನಂತೆ 7 ಗಂಟೆ ವಿದ್ಯುತ್ ನೀಡಲು ಮುಂದಾಗಿದೆ. ಆದರೆ, ಆಯಾ ವಿಭಾಗಗಳಲ್ಲಿ ಲೋಡ್ ಆಧರಿಸಿ ಕ್ರಮ ವಹಿಸಲು ಸೂಚಿಸಲಾಗಿದೆ.

ರಾಜ್ಯಾದ್ಯಂತ ಎರಡು ಗಂಟೆ ವಿದ್ಯುತ್ ಕಡಿತ ಮಾಡುವ ಆದೇಶವನ್ನು ಮೌಖಿಕವಾಗಿ ಹಿಂದೆ ಪಡೆದಿರುವ ರಾಜ್ಯ ಸರ್ಕಾರ, ಎಸ್ಕಾಂಗಳಿಗೆ ಸ್ಥಳೀಯ ಹೊಂದಾಣಿಕೆಯ ಆಧಾರದಲ್ಲಿ ಏಳು ಗಂಟೆ ವಿದ್ಯುತ್ ಪೂರೈಕೆಯನ್ನು ಪ್ರಾರಂಭಿಸಬೇಕು ಮತ್ತು ಲೋಡ್ ಸಹ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಎಂದು ಸೂಚಿಸಿದೆ. ಜೆಸ್ಕಾಂ, ಹೆಸ್ಕಾಂ, ಬೆಸ್ಕಾಂ ಸೇರಿದಂತೆ ರಾಜ್ಯಾದ್ಯಂತ ಎಸ್ಕಾಂಗಳಲ್ಲಿ ಸ್ಟೇಷನ್ ಆಧಾರದಲ್ಲಿ ವಿದ್ಯುತ್ ಪೂರೈಕೆಯನ್ನು ಏಳು ಗಂಟೆಗೆ ಹೆಚ್ಚಳ ಮಾಡುವಂತೆ ಸೂಚಿಸಲಾಗಿದೆ.

 

ವಿದ್ಯುತ್ ಸಮಸ್ಯೆಯಿಂದ ರೈತರ ಯಮಯಾತನೆ: ಸಂಸದ ಸಂಗಣ್ಣ ಕರಡಿ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೊಪ್ಪಳದ ಜೆಸ್ಕಾಂ ಇಇ ಪಣಿರಾಜೇಶ, ಮೊದಲು ಕೊಪ್ಪಳ ತಾಲೂಕಿನಾದ್ಯಂತ ಅ.30ರಿಂದ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಬಳಿಕ, ಹಂತಹಂತವಾಗಿ ಇದನ್ನು ಜಿಲ್ಲೆಯ ಇತರ ಪ್ರದೇಶಗಳಿಗೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಮಧುಗಿರಿ - ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು