
ಬೆಂಗಳೂರು(ಆ.25): ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾ ಹೊರತು ಪಡಿಸಿ ಅನ್ಯ ದೇಶಗಳಿಂದ ರಾಜ್ಯ ಪ್ರವೇಶಿಸುವ ಜನರು ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆಗೆ ಮಾದರಿ ನೀಡಿ ನಿಲ್ದಾಣದಿಂದ ನಿರ್ಗಮಿಸಬಹುದು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಮೊದಲು ವಿದೇಶದಿಂದ ಬಂದವರು ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆಗೆ ಮಾದರಿ ನೀಡಿ ಫಲಿತಾಂಶ ಬರುವವರೆಗೆ ನಿಲ್ದಾಣ ಬಿಟ್ಟು ಹೋಗಲು ನಿರ್ಬಂಧ ವಿಧಿಸಲಾಗಿತ್ತು.
ಈಗ ಮಧ್ಯಪ್ರಾಚ್ಯ, ಯೂರೋಪ್ ಮತ್ತು ಯುನೈಟೆಡ್ ಕಿಂಗ್ಡಮ್ನಿಂದ ವಿಮಾನ ನಿಲ್ದಾಣ ಮೂಲಕ ರಾಜ್ಯ ಪ್ರವೇಶಿಸುವ ಪ್ರಯಾಣಿಕರು ನಿಲ್ದಾಣದಲ್ಲಿ ಮಾದರಿ ನೀಡಿ ತಮ್ಮ ಮನೆ ಅಥವಾ ಕಾರ್ಯಸ್ಥಾನಕ್ಕೆ ನಿರ್ಗಮಿಸಬಹುದಾಗಿದೆ. ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದಿಂದ ಆಗಮಿಸುತ್ತಿರುವವರು ನೆಗೆಟಿವ್ ವರದಿ ಬಂದರೆ ತಮ್ಮ ಪ್ರಯಾಣವನ್ನು ಮುಂದುವರಿಸಬಹುದಾಗಿದೆ.
ಲಸಿಕೆ ಪಡೆಯಿರಿ, ಕೋವಿಡ್ ಮಾರ್ಗಸೂಚಿ ಪಾಲಿಸಿ : ಉಪರಾಷ್ಟ್ರಪತಿ
ಕೊರೋನಾ ರೂಪಾಂತರಿ ವೈರಾಣು ರಾಜ್ಯ ಪ್ರವೇಶಿಸುವುದನ್ನು ತಡೆಯುವ ಉದ್ದೇಶದಿಂದ ಈ ಮೇಲಿನ ದೇಶಗಳಿಂದ ರಾಜ್ಯ ಪ್ರವೇಶಿಸುವವರು ವಿಮಾನ ಏರುವ ಮುಂಚಿನ ನೆಗೆಟಿವ್ ವರದಿ ಹೊಂದಿದ್ದರೂ ರಾಜ್ಯ ಪ್ರವೇಶಿಸಿದೊಡನೆ ಆರ್ಟಿಪಿಸಿಆರ್ ಪರೀಕ್ಷೆ ನಡೆಸುವುದನ್ನು ಕಡ್ಡಾಯ ಮಾಡಿ ಫೆಬ್ರವರಿಯಲ್ಲಿ ರಾಜ್ಯ ಸರ್ಕಾರ ಆದೇಶಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ