ಮದ್ಯ ಪ್ರಿಯರಿಗೆ ಗುಡ್‌ ನ್ಯೂಸ್‌ ನೀಡಿದ ಸರ್ಕಾರ..!

Published : Jun 30, 2024, 08:36 AM ISTUpdated : Jun 30, 2024, 08:44 AM IST
ಮದ್ಯ ಪ್ರಿಯರಿಗೆ ಗುಡ್‌ ನ್ಯೂಸ್‌ ನೀಡಿದ ಸರ್ಕಾರ..!

ಸಾರಾಂಶ

ಜು.1 ರಿಂದ ಅನ್ವಯವಾಗುವಂತೆ ಮದ್ಯದ ದರ ಪರಿಷ್ಕರಣೆ ನಡೆಸಲಾಗುವುದು ಎಂದು ಸರ್ಕಾರ ಅಧಿಸೂಚನೆಯನ್ನೂ ಹೊರಡಿಸಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ತಿಂಗಳ ಮಟ್ಟಿಗೆ ದರ ಪರಿಷ್ಕರಣೆ ಮಾಡದೆ, ಯಥಾಸ್ಥಿತಿ ಮುಂದುವರೆಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದರಿಂದಾಗಿ ಆ.1 ರಿಂದ ಪರಿಷ್ಕೃತ ದರಗಳು ಜಾರಿಯಾಗಲಿವೆ.

ಬೆಂಗಳೂರು(ಜೂ.30):  ಇತ್ತೀಚೆಗೆ ‘ಪ್ಯಾಕೇಟ್ ಹಾಲು’ ದರ ಹಾಗೂ ಪ್ರಮಾಣ ಹೆಚ್ಚಿಸಿದ್ದ ರಾಜ್ಯ ಸರ್ಕಾರ ಈಗ ‘ಆಲ್ಕೋಹಾಲು’ ದರ ಹೆಚ್ಚಳಕ್ಕೆ ಬ್ರೇಕ್‌ ಹಾಕಿದೆ. ಜು.1 ರಿಂದಲೇ ಮದ್ಯದ ದರಗಳನ್ನು ಪರಿಷ್ಕರಿಸಲು ಮುಂದಾಗಿದ್ದ ಅದು, ಇದೀಗ 1 ತಿಂಗಳ ಮಟ್ಟಿಗೆ ‘ವಿಳಂಬ’ ಧೋರಣೆ ಅನುಸರಿಸಲು ಮುಂದಾಗಿದೆ. ಇದರಿಂದಾಗಿ ಕಡಿಮೆ ದರದ ಮದ್ಯಗಳ ಬೆಲೆ ಹೆಚ್ಚಳ 1 ತಿಂಗಳು ತಡವಾಗಲಿದೆ.

ಜು.1 ರಿಂದ ಅನ್ವಯವಾಗುವಂತೆ ಮದ್ಯದ ದರ ಪರಿಷ್ಕರಣೆ ನಡೆಸಲಾಗುವುದು ಎಂದು ಸರ್ಕಾರ ಅಧಿಸೂಚನೆಯನ್ನೂ ಹೊರಡಿಸಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ತಿಂಗಳ ಮಟ್ಟಿಗೆ ದರ ಪರಿಷ್ಕರಣೆ ಮಾಡದೆ, ಯಥಾಸ್ಥಿತಿ ಮುಂದುವರೆಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದರಿಂದಾಗಿ ಆ.1 ರಿಂದ ಪರಿಷ್ಕೃತ ದರಗಳು ಜಾರಿಯಾಗಲಿವೆ.

ಎಣ್ಣೆ ಪ್ರಿಯರಿಗೆ ಶಾಕಿಂಗ್‌ ನ್ಯೂಸ್‌: ಕೆಲ ಅಗ್ಗದ ಮದ್ಯದ ದರ ಮತ್ತಷ್ಟು ದುಬಾರಿ..!

ಅಬಕಾರಿ ಇಲಾಖೆಯಲ್ಲಿ ರಾಜಸ್ವ ಸಂಗ್ರಹ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ನೆರೆ ಹೊರೆಯ ರಾಜ್ಯಗಳ ಮದ್ಯದ ದರಕ್ಕೆ ಹೋಲಿಸಿ ನಮ್ಮಲ್ಲೂ ದರ ಪರಿಷ್ಕರಣೆ’ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದ್ದರು. ಅಕ್ಕಪಕ್ಕದ ರಾಜ್ಯಗಳಲ್ಲಿ ‘ಬಡವ’ರು ಸೇವಿಸುವ ಮದ್ಯದ ದರಗಳು ಅಧಿಕವಾಗಿವೆ. ಆದರೆ ದುಬಾರಿ ಬೆಲೆಯ ಮದ್ಯಗಳ ದರ ಕರ್ನಾಟಕಕ್ಕಿಂತಲೂ ಸ್ವಲ್ಪ ಕಡಿಮೆಯಿದೆ. ಆದ್ದರಿಂದ ಸರಾಸರಿಗೆ ಅನುಗುಣವಾಗಿ ಮದ್ಯದ ದರ ಪರಿಷ್ಕರಣೆ ನಡೆಸಲು ಸರ್ಕಾರ ಮುಂದಾಗಿತ್ತು.

ರಾಜ್ಯದಲ್ಲಿ ಕಡಿಮೆ ದರದ ಮದ್ಯದ ಮಾರಾಟ ಪ್ರಮಾಣ ಹೆಚ್ಚಾಗಿರುವುದರಿಂದ ಈ ಮದ್ಯದ ದರ ಸ್ವಲ್ಪ ಹೆಚ್ಚಳವಾದರೂ ಸರ್ಕಾರದ ಬೊಕ್ಕಸಕ್ಕೆ ಪ್ರತಿ ತಿಂಗಳೂ ನೂರಾರು ಕೋಟಿ ರು. ಆದಾಯ ‘ಹರಿದು’ ಬರುತ್ತದೆ. ಈ ಹಿನ್ನೆಲೆಯಲ್ಲೇ ನೆರೆಹೊರೆಯ ರಾಜ್ಯಗಳ ಸರಾಸರಿಯಂತೆ ಮದ್ಯದ ದರ ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್