ಸರ್ವಪಕ್ಷಗಳ ಸಭೆ ಮುಕ್ತಾಯ: ಮಹತ್ವದ ಅಭಿಪ್ರಾಯ ತಿಳಿಸಿದ ರಾಜ್ಯಪಾಲ

By Suvarna NewsFirst Published Apr 20, 2021, 7:38 PM IST
Highlights

ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆ ಅಂತ್ಯವಾಗಿದೆ. ಸಭೆಯಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಮಹತ್ವದ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಬೆಂಗಳೂರು, (ಏ.20):  ರಾಜ್ಯದಲ್ಲಿ ಕೊರೋನಾ ಸ್ಥಿತಿಗತಿಗಳ ಕುರಿತು ಇಂದು (ಏ.20) ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.

ಸುಮಾರು 3 ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಆಡಳಿತ ಪಕ್ಷದ ನಾಯಕರುಗಳು ಭಾಗಿಯಾಗಿ ತಮ್ಮ-ತಮ್ಮ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ಸರ್ಕಾರಕ್ಕೆ ನೀಡಿದರು.

ಸರ್ವಪಕ್ಷ ಸಭೆ ಅಂತ್ಯ: ಲಾಕ್‌ಡೌನ್ ಸುಳಿವು ಕೊಟ್ರಾ ಸಿಎಂ?

ಇನ್ನು ಇದೇ ವೇಳೆ ರಾಜ್ಯಪಾಲ ವಜುಭಾಯಿ ವಾಲಾ ಸಹ ಮಾತನಾಡಿ, ಯಾವುದೇ ಕಠಿಣ ಕ್ರಮವನ್ನಾದರೂ ಕೈಗೊಳ್ಳುವಂತೆ ಸರ್ಕಾರ ಖಡಕ್  ಸೂಚನೆ ನೀಡಿದ್ದಾರೆ.

ಲಾಕ್​ ಡೌನ್ ಮಾಡುವುದಾದರೆ ಮಾಡಿ, ನಮಗೆ ಬೇಕಿರುವುದು ಆರೋಗ್ಯಪೂರ್ಣ ಕರ್ನಾಟಕ. ಲಾಕ್​ಡೌನ್​ ಸೇರಿ ಯಾವುದೇ ರೀತಿಯ ಕಠಿಣ ಕ್ರಮವನ್ನಾದರೂ ತೆಗೆದುಕೊಳ್ಳಿ ಎಂದು ರಾಜ್ಯಪಾಲರು ಸಭೆಯಲ್ಲಿ ತಿಳಿಸಿದ್ದಾರೆ.

ಈ ಪರಿಸ್ಥಿತಿಯ ಸವಾಲುಗಳನ್ನು ಎದುರಿಸಬೇಕಾಗಿದೆ. ಜನರು ಸಹ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಹೇಳಿದ್ದಾರೆ.
ಲಾಕ್​ಡೌನ್​ ಬಗ್ಗೆ ಜನರಿಗೆ ಹೆದರಿಕೆ ಇದೆ. ಕಾರ್ಮಿಕರ ಬಗ್ಗೆಯೂ ಯೋಚನೆ ಮಾಡಬೇಕು. ಯಾವುದೇ ನಿರ್ಧಾರ ತೆಗೆದುಕೊಳ್ಳಲೂ ಸಿಎಂ ಯಡಿಯೂರಪ್ಪ ಸ್ವತಂತ್ರವಾಗಿದ್ದಾರೆ ಎಂದಿದ್ದಾರೆ. ಇನ್ನು ಈ ಸಭೆಯಲ್ಲಿ ಯಡಿಯೂರಪ್ಪನವರೂ ಸಹ ಲಾಕ್​​ಡೌನ್ ಸಲಹೆಯನ್ನು ಸ್ವಾಗತಿಸಿದ್ದಾರೆ ಎನ್ನಲಾಗಿದೆ. ಸಚಿವರ ಜತೆ ಚರ್ಚಿಸುವುದಾಗಿಯೂ ತಿಳಿಸಿದ್ದಾರೆ.

click me!