ಮೇಕೆದಾಟು ಯೋಜನೆ: ಅಣ್ಣಾಮಲೈಗೆ ತಿರುಗೇಟು ಕೊಟ್ಟ ನೂತನ ಜಲಸಂಪನ್ಮೂಲ ಸಚಿವ

Published : Aug 08, 2021, 08:54 PM IST
ಮೇಕೆದಾಟು ಯೋಜನೆ: ಅಣ್ಣಾಮಲೈಗೆ ತಿರುಗೇಟು ಕೊಟ್ಟ ನೂತನ ಜಲಸಂಪನ್ಮೂಲ ಸಚಿವ

ಸಾರಾಂಶ

* ಕರ್ನಾಟಕದಲ್ಲಿ ಮೇಕೆದಾಟು ಯೋಜನೆ ಜಾರಿಗೆಗೆ ವಿರೋಧ  * ಅಣ್ಣಾಮಲೈಗೆ ತಿರುಗೇಟು ಕೊಟ್ಟ ನೂತನ ಜಲಸಂಪನ್ಮೂಲ ಸಚಿವ * ಕೆ.ಅಣ್ಣಾಮಲೈ ಹೋರಾಟದಲ್ಲಿ ಯಾವುದೇ ಅರ್ಥ ಇಲ್ಲ ಎಂದ ಕಾರಜೋಳ

ಬಾಗಲಕೋಟೆ, (ಆ.08): ಕರ್ನಾಟಕದಲ್ಲಿ ಮೇಕೆದಾಟು ಯೋಜನೆ ಜಾರಿಗೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ  ಅಣ್ಣಾಮಲೈಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿರುಗೇಟು ಕೊಟ್ಟಿದ್ದಾರೆ.

ಬಾಗಲಕೋಟೆಯಲ್ಲಿ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯ, ನಮ್ಮ ನೀರಿಗೆ ಸಂಬಂಧಿಸಿ ಕೆಲಸ ಮಾಡಲು ಯಾರ ಅಪ್ಪಣೆಯೂ ಬೇಕಿಲ್ಲ. ಕಾನೂನಾತ್ಮಕವಾಗಿ ಮೇಕೆದಾಟು ಯೋಜನೆ  ಜಾರಿ ಮಾಡುತ್ತೇವೆ. ಕುಡಿಯುವ ನೀರಿಗೆ ಬಳಸಿ, ವಿದ್ಯುತ್ ಉತ್ಪಾದನೆ ಮಾಡಿ ಬಳಿಕ ನೀರನ್ನು ನದಿಗೆ ಹರಿಬಿಡುತ್ತೇವೆ ಎಂದರು.

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ತಿರುಗೇಟು ಕೊಟ್ಟ ಸಿಎಂ ಬೊಮ್ಮಾಯಿ

ಕೆ.ಅಣ್ಣಾಮಲೈ ಹೋರಾಟದಲ್ಲಿ ಯಾವುದೇ ಅರ್ಥ ಇಲ್ಲದ ಅರ್ಥಹೀನವಾದ ಹೋರಾಟ. ನ್ಯಾಯ ಸಮ್ಮತವಾಗಿ ಮೇಕೆದಾಟು ಯೋಜನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ರಾಜ್ಯದಲ್ಲಿ ಉಂಟಾದ ಪ್ರವಾಹದ ಬಗ್ಗೆ ಪ್ರತಿಕ್ರಿಯಿಸಿ, ಪ್ರವಾಹ ಈಗಷ್ಟೇ ಕಡಿಮೆ ಆಗಿದೆ, ಇನ್ನೂ ಕೆಲವೆಡೆ ಕೆಸರಿದೆ. ಪ್ರವಾಹ ಹಾನಿ ಕುರಿತು ಏಳೆಂಟು ದಿನ ಸಂಪೂಣ೯ ಸವೆ೯ ಕಾಯ೯ ನಡೆಯಲಿದೆ. ಬಳಿಕ ಯಾವುದೇ ಚೆಕ್ ಅಥವಾ ಕ್ಯಾಶ್ ಮೂಲಕ ಪರಿಹಾರ ನೀಡೋದಿಲ್ಲ. ಈ ಬಾರಿ ಆರ್.ಟಿ.ಜಿ.ಎಸ್ ಮೂಲಕ ಪರಿಹಾರ ಹಾಕಲಾಗುತ್ತದೆ ಎಂದು ಹೇಳಿದರು.

ಪ್ರತಿ ಗ್ರಾಮದಲ್ಲೂ ಹಾನಿ ಬಗ್ಗೆ ಲಿಸ್ಟ್ ಮಾಡಿ ಹಚ್ಚಲಾಗುತ್ತೆ. ಯಾರಾದಾದ್ರೂ ಬಿಟ್ಟು ಹೋಗಿದ್ದರೆ ತಹಶೀಲ್ದಾರ್ ಇಲ್ಲವೇ ಡಿಸಿಗೆ ಅಜಿ೯ ನೀಡಲಿ.
ಪರಿಹಾರದಲ್ಲಿ ಗೊಂದಲವಾಗಬಾರದೆನ್ನುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Sharath R Ashok scuba diving: ಸಮುದ್ರದಾಳದಲ್ಲಿ ಆರ್ ಅಶೋಕ್ ಪುತ್ರನ ಗಿನ್ನೆಸ್ ಸಾಹಸ
Karnataka By-Election Results 2026 LIVE: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಆರಂಭದಲ್ಲೇ ಸ್ಟ್ರಾಂಗ್ ರೂಮ್ ಬೀಗ ನಾಪತ್ತೆ!