ಸರ್ಕಾರಿ ನೌಕರರ ಮಕ್ಕಳಿಗೆ ಸರ್ಕಾರಿ ಶಾಲೆ ಕಡ್ಡಾಯ ಮಸೂದೆ?

Kannadaprabha News   | Asianet News
Published : Mar 20, 2020, 10:11 AM IST
ಸರ್ಕಾರಿ ನೌಕರರ ಮಕ್ಕಳಿಗೆ ಸರ್ಕಾರಿ ಶಾಲೆ ಕಡ್ಡಾಯ ಮಸೂದೆ?

ಸಾರಾಂಶ

ಸರ್ಕಾರಿ ನೌಕರಿಯಲ್ಲಿರುವವ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಬೇಕು ಎನ್ನುವ ಮಸೂದೆ ಜಾರಿ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ. 

ವಿಧಾನ ಪರಿಷತ್‌ [ಮಾ.20]:  ಸರ್ಕಾರಿ ನೌಕರರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುವುದನ್ನು ಕಡ್ಡಾಯಗೊಳಿಸುವ ಸಂಬಂಧ ಸಲ್ಲಿಸಿರುವ ಖಾಸಗಿ ಮಸೂದೆಯನ್ನು ಶುಕ್ರವಾರ ಮಂಡಿಸದಿದ್ದರೆ ಸಭಾಪತಿಗಳ ಮುಂದೆ ಪ್ರತಿಭಟನೆ ಮಾಡುವುದಾಗಿ ಕಾಂಗ್ರೆಸ್‌ ಸದಸ್ಯ ರಘು ಆಚಾರ್‌ ಹೇಳಿದ ಪ್ರಸಂಗ ನಡೆಯಿತು.

ಸಂವಿಧಾನದ ಮೇಲೆ ಮಾತನಾಡುವ ಸಂದರ್ಭದಲ್ಲಿ ಸಂವಿಧಾನ 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಬೇಕು, ಆರೋಗ್ಯ ರಕ್ಷಣೆ ನೀಡಬೇಕೆಂದು ಹೇಳುತ್ತದೆ, ಆದರೆ ಅದನ್ನು ನಾವು ಒದಗಿಸಿದ್ದೇವೆಯೇ ಎಂದು ಪ್ರಶ್ನಿಸಿಕೊಳ್ಳಬೇಕಾಗಿದೆ ಎಂದರು.

ಮಕ್ಕಳ ಶಿಕ್ಷಣ ಕುರಿತು ಬಸವರಾಜ ಹೊರಟ್ಟಿಅವರ ಜೊತೆ ತಾವು ಕೈ ಜೋಡಿಸಿ ಸಿದ್ಧಪಡಿಸಿರುವ ಈ ಮಸೂದೆಯನ್ನು ಈವರೆಗೆ ಮಂಡಿಸಿಲ್ಲ, ಹಾಗಾಗಿ ಶುಕ್ರವಾರ ಸದನದಲ್ಲಿ ಮಂಡಿಸಲೇಬೇಕು ಎಂದು ಆಗ್ರಹಿಸಿದರು.

Video: ಇಲ್ ನೋಡ್ರಿ, ನಮ್ಮ ಸರ್ಕಾರಿ ಶಾಲೆ ಮಕ್ಳು ಕೊರೋನಾ ಬಗ್ಗೆ ಎಷ್ಟ್ ಚೆಂದ ಜಾಗೃತಿ ಮೂಡಿಸ್ಯಾರ..!..

ಇದಕ್ಕೂ ಮುನ್ನ ಮಾತನಾಡಿದ ರಘು ಆಚಾರ್‌, ಎಲ್ಲ ಸದಸ್ಯರು ಸಂವಿಧಾನದ ಬಗ್ಗೆ ಸಾಕಷ್ಟುಮಾತನಾಡಿದ್ದಾರೆ. ಹಾಗಾಗಿ ತಾವು ಹೆಚ್ಚಿಗೆ ಮಾತನಾಡುವುದಿಲ್ಲ. ಈವರೆಗೆ ಸಂವಿಧಾನದಲ್ಲಿ ಆಗಿರುವ ತಿದ್ದುಪಡಿ ಪ್ರಕಾರ ನಾವೆಲ್ಲ ಎಷ್ಟುಜನ ನಡೆದುಕೊಂಡಿದ್ದೇವೆ ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಮೊದಲು ಮೇಲ್ಮನೆಯಲ್ಲಿ ನಡೆಯುತ್ತಿರುವ ಚರ್ಚೆಗಳು ಸಾಕಷ್ಟುಉತ್ತಮವಾಗಿರುತ್ತಿತ್ತು. ಆದರೆ ಈಗ ಆ ಕಡೆ ಇಬ್ಬರು, ಈ ಕಡೆ ಇಬ್ಬರು ಎದ್ದು ನಿಂತು ಮಾತನಾಡುತ್ತಾರೆ. ಹೀಗಾಗಿ ಸದನಕ್ಕೆ ಬರುವ ಆಸಕ್ತಿಯೇ ಕಡಿಮೆಯಾಗಿದೆ. ಸಂವಿಧಾನದ ಬಗ್ಗೆ ಇಷ್ಟೆಲ್ಲ ಮಾತನಾಡುವ ನಾವು ಎಷ್ಟುಜನ ವಾಹನಗಳ ಬೆಲ್ಟ್‌ ಹಾಕಿಕೊಂಡು ಬಂದಿದ್ದೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!
CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ