ಸಾಲದ ಕಂತು ಪಾವತಿ ಅವಧಿ ವಿಸ್ತರಣೆ: ರಾಜ್ಯ ಸರ್ಕಾರ ಘೋಷಣೆ

Published : May 21, 2021, 08:02 PM ISTUpdated : May 21, 2021, 08:11 PM IST
ಸಾಲದ ಕಂತು ಪಾವತಿ ಅವಧಿ ವಿಸ್ತರಣೆ: ರಾಜ್ಯ ಸರ್ಕಾರ ಘೋಷಣೆ

ಸಾರಾಂಶ

* ಸಾಲದ ಮರುಪಾವತಿ ಅವಧಿ ವಿಸ್ತರಣೆ * ಸಹಕಾರ ಸಂಘಗಳಲ್ಲಿ ಪಡೆದಿರುವ  ಸಾಲದ ಕಂತು ಪಾವತಿ ವಿಸ್ತರಣೆ * ಲಾಕ್‌ಡೌನ್‌ ವಿಸ್ತರಣೆಗೊಳಿಸಿರುವ ಹಿನ್ನೆಲೆಯಲ್ಲಿ ಈ ತೀರ್ಮಾನಕೈಗೊಂಡ ಸರ್ಕಾರ

ಬೆಂಗಳೂರು, (ಮೇ.21): ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರೈತರ ಸಾಲ‌ ಮರುಪಾವತಿ ಸಮಸ್ಯೆಯನ್ನು ನಿವಾರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ರೈತರು ಸಹಕಾರ ಸಂಘಗಳಲ್ಲಿ ಪಡೆದಿರುವ ಸಾಲದ ಮರು ಪಾವತಿ ಕಂತು ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಇಂದು (ಶುಕ್ರವಾರ) ಅಧಿಕೃತ ಆದೇಶ ಹೊರಡಿಸಿದೆ.

ಕರ್ನಾಟಕದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ವಿಸ್ತರಣೆ: ಸಿಎಂ ಅಧಿಕೃತ ಘೋಷಣೆ

 ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್‌ಡೌನ್ ಮಾಡಿ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದರು. ಇದರ ಬೆನ್ನಲ್ಲೇ ಇದೀಗ ಸಾಲದ ಕಂತು ಪಾವತಿ ದಿನಾಂಕವನ್ನು ವಿಸ್ತರಿಸಲಾಗಿದೆ.

ಸಾಲದ ಕಂತು ಪಾವತಿಯನ್ನು ಏಪ್ರಿಲ್ 1 ರಿಂದ ಜೂನ್ 31ರವರೆಗೆ  ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಲಾಕ್‌ಡೌನ್‌ನಿಂದಾಗಿ ಯಾವುದೇ ಕೆಲಸವಿಲ್ಲದೇ ಮನೆಯಲ್ಲಿ ಕುಳಿತುಕೊಳ್ಳಬೇಕಾಗಿದೆ. ಇದರಿಂದ ರಾಜ್ಯ ಸರ್ಕಾರ ಈ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ
ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ