
ಬೆಂಗಳೂರು (ಏ. 28): ಪಾದರಾಯನಪುರ ಗಲಭೆ ಪ್ರಕರಣದಿಂದಾಗಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದರಿಂದ ರಾಮನಗರ ಜಿಲ್ಲೆ ಹೊರತು ಹೊರತು ಪಡಿಸಿ ಇನ್ನುಳಿದ ಕೊರೋನಾ ಮುಕ್ತ 9 ಜಿಲ್ಲೆಯಲ್ಲಿ ಕೈಗಾರಿಕೆಗಳ ಪ್ರಾರಂಭಕ್ಕೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಅನುಮತಿ ನೀಡಿದ್ದಾರೆ.
ಇತ್ತೀಚೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹೊರಡಿಸಿದ ಸುತ್ತೋಲೆ ಅನುಸಾರ ಇದೀಗ ಕಂದಾಯ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿದೆ.
ಕೊರೋನಾ ಮುಕ್ತ ಜಿಲ್ಲೆಗಳಾಗಿರುವ ಯಾದಗಿರಿ, ರಾಯಚೂರು, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಚಾಮರಾಜನಗರ, ಹಾವೇರಿ ಮತ್ತು ಹಾಸನದಲ್ಲಿ ಕೈಗಾರಿಕೆಗಳಿಗೆ ಅನುಮತಿ ನೀಡಲಾಗಿದೆ. ಅಗತ್ಯ ವಸ್ತುಗಳ ಉತ್ಪನ್ನ, ವೈದ್ಯಕೀಯ ಕ್ಷೇತ್ರಗಳ ಉತ್ಪನ್ನಗಳ ಉತ್ಪಾದನೆಗೆ ಅವಕಾಶ ನೀಡಲಾಗಿದೆ. ಆಹಾರ ಉತ್ಪನ್ನ ಕೈಗಾರಿಕೆಗಳು ಗಣಿಗಾರಿಕೆ, ಕಲ್ಲಿದ್ದಲು ಉತ್ಪನ್ನ ಮತ್ತು ಅವುಗಳ ಸಾಗಾಣಿಕೆ ವಿನಾಯಿತಿಯನ್ನು ನೀಡಲಾಗಿದೆ.
ಉಡುಪಿ ಈಗ ಗ್ರೀನ್ ಝೋನ್, ಆದರೂ ಸಡಿಲವಾಗದ ಲಾಕ್ಡೌನ್
ಸಂಬಂಧಪಟ್ಟಸಂಸ್ಥೆಯು ಜಿಲ್ಲೆಯ ಸಂಬಂಧಪಟ್ಟಅಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಎಷ್ಟರ ಮಟ್ಟಿಗೆ ಸಿಬ್ಬಂದಿಯನ್ನು ಹಾಜರು ಮಾಡಲಾಗುವುದು ಎಂಬುದರ ಬಗ್ಗೆ ಸ್ವಯಂ ದೃಢೀಕೃತ ಪತ್ರವನ್ನು ಕೈಗಾರಿಕೆಗಳು ನೀಡಬೇಕು ಎಂದು ಸುತ್ತೋಲೆಯನ್ನು ತಿಳಿಸಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ಕೈಗಾರಿಕೆಗಳು ಪ್ರಾರಂಭವಾಗಬೇಕಿತ್ತು. ಆದರೆ, ಅಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದರಿಂದ ಲಾಕ್ಡೌನ್ ನಿಯಮ ಅನ್ವಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ