ಒಂದೇ ವರ್ಷದಲ್ಲಿ 130 ಕೋಟಿ ಜನಕ್ಕೆ ಲಸಿಕೆ: ಆರ್‌ಸಿ

Kannadaprabha News   | Asianet News
Published : May 31, 2021, 08:32 AM ISTUpdated : May 31, 2021, 09:49 AM IST
ಒಂದೇ ವರ್ಷದಲ್ಲಿ 130 ಕೋಟಿ ಜನಕ್ಕೆ ಲಸಿಕೆ: ಆರ್‌ಸಿ

ಸಾರಾಂಶ

ಕೋವಿಡ್‌ಗೆ ಒಂದೇ ವರ್ಷದಲ್ಲಿ ದೇಶದ 130 ಕೋಟಿ ಜನರಿಗೆ ಲಸಿಕೆ ನೀಡಬೇಕು ಎಂದು ಸರ್ಕಾರದ ಪಣ ಜಗತ್ತಿನ ಎಲ್ಲ ಭಾಗದಲ್ಲಿಯೂ ಹೆಚ್ಚು ಹೆಚ್ಚು ಜನ ಲಸಿಕೆ ಪಡೆದಾಗ ಮಾತ್ರ ನಾವು ಕೋವಿಡ್‌ ಅನ್ನು ಜಯಿಸಬಹುದು ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಹೇಳಿಕೆ

 ಬೆಂಗಳೂರು (ಮೇ.31):  ಈ ಹಿಂದೆ ಸಾಂಕ್ರಾಮಿಕ ಕಾಯಿಲೆಗಳಾದ ಪೋಲಿಯೋ, ಹೆಪಟೈಟಿಸ್‌ ಬಿ ಮುಂತಾದವು ಬಂದಾಗ ಅದಕ್ಕೆ ಲಸಿಕೆ ಕಂಡುಹಿಡಿದು ಎಲ್ಲರಿಗೂ ಲಸಿಕೆ ನೀಡುವಾಗ 15 ರಿಂದ 20 ವರ್ಷವಾಗಿತ್ತು. ಆದರೆ ಕೋವಿಡ್‌ಗೆ ಒಂದೇ ವರ್ಷದಲ್ಲಿ ದೇಶದ 130 ಕೋಟಿ ಜನರಿಗೆ ಲಸಿಕೆ ನೀಡಬೇಕು ಎಂದು ಸರ್ಕಾರ ಪಣ ತೊಟ್ಟಿದೆ ಎಂದು ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ.

ಭಾನುವಾರ ‘ನಮ್ಮ ಬೆಂಗಳೂರು ಪ್ರತಿಷ್ಠಾನ’ ಆಯೋಜಿಸಿದ್ದ ‘ಬೆಂಗಳೂರು ಫೈಟ್ಸ್‌ ಕೊರೋನಾ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಜಗತ್ತಿನ ಎಲ್ಲ ಭಾಗದಲ್ಲಿಯೂ ಹೆಚ್ಚು ಹೆಚ್ಚು ಜನ ಲಸಿಕೆ ಪಡೆದಾಗ ಮಾತ್ರ ನಾವು ಕೋವಿಡ್‌ ಅನ್ನು ಜಯಿಸಬಹುದು. ಎಲ್ಲರೂ ಲಸಿಕೆ ಪಡೆಯದೇ ಕೋವಿಡ್‌ನಿಂದ ಜಗತ್ತು ಸುರಕ್ಷಿತವಾಗಿರಲು ಸಾಧ್ಯವಿಲ್ಲ. ಭಾರತದಲ್ಲಿ ಆಮ್ಲಜನಕ, ಹಾಸಿಗೆ ಸಮಸ್ಯೆಗಳು ಕೊನೆಗೊಂಡಿದ್ದು, ಇದೀಗ ಲಸಿಕೆ ಅಭಿಯಾನ, ಸಮುದಾಯ ಪ್ರತಿರೋಧ ಶಕ್ತಿ ಮೂಡಿಸುವತ್ತ ಸರ್ಕಾರ ಗಮನ ಹರಿಸಿದೆ. ಮುಂದೆ ಬರಬಹುದಾದ ಕೋವಿಡ್‌ ಅಲೆಗಳಿಂದ ಲಸಿಕೆಯ ಮೂಲಕ ರಕ್ಷಣೆ ಪಡೆಯುವ ಉದ್ದೇಶ ನಮ್ಮದು ಎಂದು ಹೇಳಿದರು.

ದೇಶದಲ್ಲಿ ಲಸಿಕೆ ಅಭಿಯಾನ; ಭಾರತ ಸೋಲ್ತಾ, ಗೆಲ್ತಾ? .

ಮೊದಲ ಅಲೆಯ ವೇಳೆ ಸೆಪ್ಟೆಂಬರ್‌ನಲ್ಲಿ ಗರಿಷ್ಠ ಎಂದರೆ ದಿನಕ್ಕೆ ಒಂದು ಲಕ್ಷ ಪ್ರಕರಣ ದೇಶದಲ್ಲಿ ವರದಿಯಾಗುತ್ತಿತ್ತು. ನಂತರ ಜನವರಿ, ಫೆಬ್ರವರಿ ಹೊತ್ತಿಗೆ ಭಾರತ ಕೋವಿಡ್‌ ಜಯಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ಹಾಗೂ ತಜ್ಞರು ಅಭಿಪ್ರಾಯಪಟ್ಟಿದ್ದರು. ಆದರೆ ಏಪ್ರಿಲ್‌ನಲ್ಲಿ ನಾಟಕೀಯ ರೀತಿಯಲ್ಲಿ ಸೋಂಕು ಭಾರಿ ಪ್ರಮಾಣದಲ್ಲಿ ಏರಿಕೆಯಾಯಿತು. ಇದರಿಂದಾಗಿ ಹಾಸಿಗೆ, ಆಮ್ಲಜನಕಕ್ಕೆ ಪರದಾಡುವ ಸ್ಥಿತಿ ಬಂದಿತ್ತು ಎಂದರು.

ಲಸಿಕೆ ಅಭಿಯಾನಕ್ಕೆ ಚುರುಕು-ಸುಧಾಕರ್‌:  ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್‌, ಈ ವರ್ಷದ ಡಿಸೆಂಬರ್‌ ಒಳಗೆ ರಾಜ್ಯದ ಎಲ್ಲರಿಗೂ ಕೋವಿಡ್‌ ಲಸಿಕೆಯ ಎರಡು ಡೋಸ್‌ ನೀಡುತ್ತೇವೆ. ಮುಂದಿನ ದಿನಗಳಲ್ಲಿ ಲಸಿಕಾ ಅಭಿಯಾನವನ್ನು ಇನಷ್ಟುವ್ಯಾಪಕಗೊಳಿಸುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ತಿಳಿಸಿದರು.

ಕೋವಿಡ್‌ ಅಲೆಯನ್ನು ತಪ್ಪಿಸುವಲ್ಲಿ ಸಮುದಾಯದ ಪಾತ್ರ ಮಹತ್ವದ್ದು. ಲಸಿಕೆ ಅಭಿಯಾನದಲ್ಲಿ ಪಾಲ್ಗೊಳ್ಳುವುದರ ಜೊತೆ ಜೊತೆಗೆ ಕೋವಿಡ್‌ ತಡೆಯುವ ಶಿಷ್ಟಾಚಾರಗಳನ್ನು ಸದಾ ಪಾಲಿಸಬೇಕು. ಸಮುದಾಯದ ಸಹಕಾರ ಇಲ್ಲದಿದ್ದರೆ ಕೋವಿಡ್‌ ವಿರುದ್ಧದ ಹೋರಾಟ ಯಶಸ್ವಿ ಆಗುವುದಿಲ್ಲ. ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಆರ್ಥಿಕತೆಗೆ ಏಟು ಬೀಳುವಂತಾಗಬಾರದು ಎಂದು ಅಭಿಪ್ರಾಯಪಟ್ಟರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ