ರಾಜ್ಯದಲ್ಲಿ ಹೆಚ್ಚುತ್ತಿದೆ ಕೊರೋನಾ : ಶೀಘ್ರ ಹೊಸ ಮಾರ್ಗಸೂಚಿ

Kannadaprabha News   | Asianet News
Published : Apr 02, 2021, 12:21 PM ISTUpdated : Apr 02, 2021, 02:04 PM IST
ರಾಜ್ಯದಲ್ಲಿ ಹೆಚ್ಚುತ್ತಿದೆ ಕೊರೋನಾ : ಶೀಘ್ರ ಹೊಸ ಮಾರ್ಗಸೂಚಿ

ಸಾರಾಂಶ

ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದರಿಂದ ಸರ್ಕಾರ ನೂತನ ಮಾರ್ಗಸೂಚಿಗಳನ್ನು ಶೀಘ್ರವೇ ಬಿಡುಗಡೆ ಮಾಡುತ್ತಿದೆ. 

ಬೆಂಗಳೂರು (ಏ.02):  ಕೊರೋನಾ ಕೇಸ್‌ಗಳು ರಾಜ್ಯದಲ್ಲಿ ಮತ್ತೆ ಮತ್ತೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿಗಳು ಸಿದ್ಧವಾಗುತ್ತಿದೆ. 

ಈ ಬಗ್ಗೆ ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ಕಳೆದ ಎರಡು ದಿನಗಳಿಂದ ಕೊರೋನಾ ಕೇಸ್‌ಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆ ಮುಖ್ಯಮಂತ್ರಿಗಳೂ ಸಭೆ ಕರೆದಿದ್ದು ಎಲ್ಲಾ ವಿಚಾರಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದರು. 

ಅಲ್ಲದೇ ಯಾವ ರೀತಿ ಮಾರ್ಗ ಸೂಚಿಗಳನ್ನು ಅನುಸರಿಸಬೇಕು ಎಂದು ಕೆಲವೇ ಗಂಟೆಗಳಲ್ಲಿ ತಿಳಿಸಲಾಗುವುದು ಎಂದು ಸುಧಾಕರ್ ಹೇಳಿದರು. ಈ ಬಗ್ಗೆ ಮುಖ್ಯಮಂತ್ರಿಗಳೇ ಅಧಿಕೃತ ಮಾರ್ಗಸೂಚಿ ಬಿಡುಗಡೆ ಮಾಡುತ್ತಾರೆಂದು ಹೇಳಿದರು. 

ಸರ್ಕಾರಿ ನೌಕರರ ಕೋವಿಡ್‌ ಚಿಕಿತ್ಸೆ ವೆಚ್ಚ ಮರುಪಾವತಿಗೆ ನಿರ್ಧಾರ

ಇಂದು ಸೆಂಟ್ರಲ್ ಕ್ಯಾಬಿನೆಟ್ ಸೆಕ್ರೆಟರಿ ಸಭೆ ನಡೆಯುತ್ತಿದ್ದು, ಕೋವಿಡ್ ಸಂಬಂಧ ನಿಯಂತ್ರಣದ ಬಗ್ಗೆ ಚರ್ಚೆ ನಡೆಯುತ್ತಿದೆ. ಅದರ ಮಾಹಿತಿ ಕೂಡ ಅಧಿಕೃತವಾಗಿ ಹೊರಗೆ ಬರಲಿದೆ ಎಂದರು.

"

ತಾಂತ್ರಿಕ ಸಲಹಾ ಸಮಿತಿಯ ವರದಿಯ ಜೊತೆಗೆ ನಾವು ಭೇಟಿಯಾಗಿದ್ದೆವು. ಮುಖ್ಯ ಕಾರ್ಯದರ್ಶಿಗಳ ಮಾರ್ಗಸೂಚಿ ಅಂತಿಮವಾಗಲಿದೆ. ಈಗಾಗಲೇ ಶಾಲೆಗಳಲ್ಲಿ ಪರೀಕ್ಷೆ ನಡೆಸುವುದು, ತರಗತಿಗಳ ಬಗ್ಗೆಯೂ ಶಿಕ್ಷಣ ಸಚಿವರು ತಿಳಿಸಿದ್ದಾರೆ ಎಂದು ಸಚಿವ ಸುಧಾಕರ್ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!