ಪದವೀಧರರು ಸ್ವತಂತ್ರವಾಗಿ ಬದುಕುವುದನ್ನ ಕಲಿಯಿರಿ; ನಿರ್ಮಲಾನಂದನಾಥ ಸ್ವಾಮೀಜಿ

Published : May 14, 2025, 07:02 AM IST
ಪದವೀಧರರು ಸ್ವತಂತ್ರವಾಗಿ ಬದುಕುವುದನ್ನ ಕಲಿಯಿರಿ; ನಿರ್ಮಲಾನಂದನಾಥ ಸ್ವಾಮೀಜಿ

ಸಾರಾಂಶ

 ಪದವೀಧರರು ಸ್ವತಂತ್ರವಾಗಿ ಬದುಕುವುದನ್ನು ಕಲಿಯಬೇಕು. ಪಾಲಕರು ಹಾಗೂ ಸಮಾಜದ ಒಳಿತನ್ನು ಬಯಸುವ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಠಾಧೀಶ ಡಾ. ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು.

ಚಿಕ್ಕಮಗಳೂರು (ಮೇ.14):  ಪದವೀಧರರು ಸ್ವತಂತ್ರವಾಗಿ ಬದುಕುವುದನ್ನು ಕಲಿಯಬೇಕು. ಪಾಲಕರು ಹಾಗೂ ಸಮಾಜದ ಒಳಿತನ್ನು ಬಯಸುವ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಠಾಧೀಶ ಡಾ. ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು.

ನಗರದ ಎಐಟಿ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ನಡೆದ ಬಿಇ, ಎಂಟೆಕ್, ಎಂಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಆದಿಚುಂಚನಗಿರಿ ವಿಶ್ವವಿದ್ಯಾಲಯದಿಂದ ಪದವಿ ಪಡೆದು ಹೊಸ ಪ್ರಪಂಚ ಪ್ರವೇಶಿಸುತ್ತಿರುವ ಪದವೀಧರರ ನಿಜವಾದ ಜೀವನ ಈಗ ಆರಂಭವಾಗಲಿದೆ. ವಿದ್ಯಾರ್ಥಿಗಳು ಸ್ವತಂತ್ರವಾಗಿ ಬದುಕು ಕಟ್ಟಿಕೊಳ್ಳುವುದನ್ನು ಕಲಿತುಕೊಳ್ಳಬೇಕು. ನಿಮ್ಮ ಮೇಲೆ ಪೋಷಕರ ಸಾಕಷ್ಟು ನಿರೀಕ್ಷೆಯಿದೆ ಎಂದರು.

ಪದವಿ ಅಭ್ಯಾಸಿಸುವ ವೇಳೆಯಲ್ಲಿ ವಿದ್ಯಾರ್ಥಿಗಳು ಅನೇಕ ತುಂಟಾಟಗಳ ನಡುವೆಯು ಅಂತಿಮವಾಗಿ ಸಮಾಜದ ಮುಖ್ಯವಾಹಿನಿಗೆ ಧಾವಿಸಿದ್ದೀರಿ. ಇದೀಗ ಬದುಕು ಕಟ್ಟಿಕೊಳ್ಳುವ ಸಮಯವಾಗಿದೆ. ಕಳೆದ ಸಮಯ ಹಿಂತಿರುಗಿಬಾರದು. ಹಾಗಾಗಿ ಮುಂದಿನ ಭವಿಷ್ಯ ರೂಪಿಸುವ ಉದ್ಯೋಗದತ್ತ ದಾಪುಗಾಲು ಹಾಕಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದರೆ ಮನಸ್ಸಿಗೆ ತೃಪ್ತಿ: ಕಾಶಿ ಜಗದ್ಗುರು

ಶಿಕ್ಷಕರು ಹಾಗೂ ಪಾಲಕರ ಕನಸನ್ನು ಈಡೇರಿಸುವ ಮುಖ್ಯ ಜವಾಬ್ದಾರಿ ವಿದ್ಯಾರ್ಥಿಗಳ ಕೈಯಲ್ಲಿದೆ. ಹಲವಾರು ಕಂಪನಿಗಳಲ್ಲಿ ದೈಹಿಕ ಸಾಮರ್ಥ್ಯ, ಹಾವಭಾವ ನೋಡಿ ಉದ್ಯೋಗ ನೀಡುವುದಿಲ್ಲ, ಪ್ರತಿಭೆ ಎನ್ನುವುದು ಮನದಟ್ಟಾಗಿದ್ದರೆ ಕಂಪನಿಗಳು ತಾನಾಗಿಯೇ ಅವಕಾಶವನ್ನು ಕಲ್ಪಿಸಿಕೊಡಲಿವೆ ಎಂದರು.

ಇದೀಗ ರಾಷ್ಟ್ರವು ಯುದ್ಧದ ಕರಿಮೋಡದಿಂದ ನಿರಾಳವಾಗಿದೆ. ಗಡಿಯಲ್ಲಿ ಸೈನಿಕರ ನಿರಂತರ ಪರಿಶ್ರಮದಿಂದ ದೇಶ ಸುರಕ್ಷತವಾಗಿದೆ. ಅಲ್ಲದೇ ದೇಶಕ್ಕಾಗಿ ಪ್ರಾಣತೆತ್ತ ಯೋಧರು ದೇಶದ ಅಸ್ಮಿತೆಯ ಪ್ರತೀಕವಾಗಿರುವ ಕಾರಣ ದೊಡ್ಡದೊಂದು ನಮನ ಎಲ್ಲರೂ ಸಲ್ಲಿಸಬೇಕು ಎಂದು ಹೇಳಿದರು.

ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಸತತ ನಾಲ್ಕು ವರ್ಷಗಳಿಂದ ಕಾಲೇಜಿನಲ್ಲಿ ತಾಂತ್ರಿಕ ವ್ಯಾಸಂಗವನ್ನು ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಮುಂದಿನ ಭವಿಷ್ಯ ಉಜ್ವಲವಾಗಿರಲಿ. ಉದ್ಯೋಗಕ್ಕೆ ತೆರಳಿದರೂ ಜೀವನ ಭಾಷೆ ಕನ್ನಡವಾಗಿರಬೇಕು. ಆಂಗ್ಲ ಭಾಷೆ ಬದುಕಿನ ಒಂದು ಭಾಗವಾಗಿರಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮಾತನಾಡಿ, ಪದವಿ ಪೂರೈಸಿ ಮುಖ್ಯವಾಹಿನಿಗೆ ಬರುತ್ತಿರುವ ಹಾದಿ ಸುಲಭದ್ದಲ್ಲ. ಕಲ್ಲು-ಮುಳ್ಳಿನಿಂದ ಕೂಡಿರುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ವಿಶಿಷ್ಟ ಪ್ರತಿಭೆ ಎಂಬುದು ಜನನದಲ್ಲೇ ಇರಲಿದೆ. ಅನಾವರಣಗೊಳಿಸುವ ಕಾರ್ಯಕ್ಕೆ ಪಾಲಕರು ನೀರೆರೆದು ಪೋಷಿಸಬೇಕು ಎಂದು ಕಿವಿಮಾತು ಹೇಳಿದರು.

ಮೈಸೂರು ವಿಶ್ವವಿದ್ಯಾಲಯ ಕುಲಪತಿ ಎನ್.ಕೆ.ಲೋಕನಾಥ್ ಮಾತನಾಡಿ, ವಿದ್ಯಾಭ್ಯಾಸದ ಕಲಿಕೆಯ ಕ್ಷಣಗಳು ಅತ್ಯುತ್ತಮವಾಗಿದ್ದು ಹಲವಾರು ಅವಕಾಶ ಸಿಗಲಿರುವ ಕಾರಣ ಸೂಕ್ಷ್ಮವಾಗಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

 ಇದನ್ನೂ ಓದಿ: ಶಂಕರ ಪಂಚಮಿ ಉತ್ಸವ: ಜಗದ್ಗುರು ಶಂಕರರು ಗುರುಗಳಲ್ಲೇ ದೊಡ್ಡವರು: ರಾಘವೇಶ್ವರ ಭಾರತೀ ಶ್ರೀ

ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ, ಮಂಗಳೂರು ಶಾಖೆಯ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಟಿ.ರಾಜಶೇಖರ್, ಎಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಿ.ಟಿ.ಜಯದೇವ, ರಿಜಿಸ್ಟರ್ ಡಾ.ಸಿ.ಕೆ.ಸುಬ್ಬರಾಯ, ಆಡಳಿತ ಮಂಡಳಿ ಸದಸ್ಯ ಕೆ.ಮೋಹನ್, ಹಿರಿಯ ವೈದ್ಯ ಡಾ. ಜೆ.ಪಿ.ಕೃಷ್ಣೇಗೌಡ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಜಿ.ಎಂ. ಸತ್ಯನಾರಾಯಣ್, ವಿವಿಧ ವಿಭಾಗದ ಮುಖ್ಯಸ್ಥರಾದ ಡಾ.ವೀರೇಂದ್ರ, ಡಾ.ಸಂಪತ್ ಇದ್ದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಗಲಕೋಟೆ: ದಾಸೋಹ ಚಕ್ರವರ್ತಿ, ಬಂಡಿಗಣಿ ಮಠದ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ!
ಬಾರ್ ಆಗಿ ಮಾರ್ಪಟ್ಟ KSRTC ಬಸ್: ಪ್ರಯಾಣದ ಮಧ್ಯೆಯೇ ಮದ್ಯ ಸೇವನೆ!