
ಬೆಂಗಳೂರು (ಜ.29): ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಲಿವೆ. 2026-31ನೇ ಸಾಲಿನ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ ಅಧಿಕೃತ ಸೂಚನೆ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗಳು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಚುನಾವಣಾ ಸಿದ್ಧತೆಗಳಿಗೆ ಚಾಲನೆ ನೀಡುವಂತೆ ನಿರ್ದೇಶಿಸಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಇರುವ (2020-25ನೇ ಅವಧಿ) ಬಹುತೇಕ ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿಯು 2026ರ ಜನವರಿಯಿಂದ ಮಾರ್ಚ್ ತಿಂಗಳೊಳಗೆ ಪೂರ್ಣಗೊಳ್ಳಲಿದೆ. ನಿಯಮದ ಪ್ರಕಾರ ಅಧಿಕಾರಾವಧಿ ಮುಗಿಯುವ ಮುನ್ನವೇ ಚುನಾವಣೆ ಪ್ರಕ್ರಿಯೆ ನಡೆಯಬೇಕಿದ್ದು, 2025ರ ಡಿಸೆಂಬರ್ನಲ್ಲಿಯೇ ಸಾರ್ವತ್ರಿಕ ಚುನಾವಣೆ ನಡೆಯಬೇಕಿತ್ತು. ಈಗ ಕಾಲಮಿತಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಆಯೋಗ ಮುಂದಾಗಿದೆ.
ಯಾವುದೇ ಸಾರ್ವತ್ರಿಕ ಚುನಾವಣೆ ನಡೆಸುವ ಆರು ತಿಂಗಳು ಮುಂಚಿತವಾಗಿ ಮತದಾರರ ಪಟ್ಟಿ ಮುದ್ರಣ ಸೇರಿದಂತೆ ಇತರೆ ತಾಂತ್ರಿಕ ಸಿದ್ಧತೆಗಳನ್ನು ಆಯೋಗ ಮಾಡಿಕೊಳ್ಳಬೇಕಾಗುತ್ತದೆ. ಹೀಗಾಗಿ, ನಿಗಧಿತ ಕಾಲಮಿತಿಯಲ್ಲಿ ಮೀಸಲಾತಿ ಅಧಿಸೂಚನೆಯನ್ನು ಹೊರಡಿಸಿ, ಅದರ ಪ್ರತಿಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಒದಗಿಸುವಂತೆ ಸೂಚಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಅಡಿಯಲ್ಲಿ ಈ ಎಲ್ಲಾ ಸಿದ್ಧತೆಗಳು ನಡೆಯಲಿವೆ.
ಚುನಾವಣಾ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ಸಮಗ್ರ ವರದಿಯನ್ನು ಸರ್ಕಾರಕ್ಕೆ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ, ವಾರ್ಡ್ಗಳ ಮೀಸಲಾತಿ ಹಂಚಿಕೆ ಹಾಗೂ ಮತಗಟ್ಟೆಗಳ ಸಿದ್ಧತೆ ಬಗ್ಗೆ ಜಿಲ್ಲಾಡಳಿತಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕಿದೆ.
ಮುಖ್ಯಾಂಶಗಳು:
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ