
ಬೆಂಗಳೂರು (ಏ.02): ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಮನೆ ನಿರ್ಮಾಣ ಮಾಡುವವರು ದಶಕಗಳ ಎದುರಿಸುತ್ತಿದ್ದ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಪರಿಹಾರ ನೀಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಕಟ್ಟಡ ಉಪವಿಧಿಗಳ ತಿದ್ದುಪಡಿಗಾಗಿ ಕರಡು ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಕಟ್ಟಡ ಉಲ್ಲಂಘನೆಯ ಮಿತಿಯನ್ನು ಹಾಲಿ ಇರುವ ಶೇ. 5 ರಿಂದ ಶೇ. 15 ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ.
ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನದಂತೆ ಈ ಜನಪರ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಬೆಂಗಳೂರು ನಗರದಲ್ಲಿ ಭೂಮಿಯ ಬೆಲೆ ವಿಪರೀತವಾಗಿರುವುದರಿಂದ, ಅನೇಕ ಮಾಲೀಕರು ಅನಿವಾರ್ಯ ಕಾರಣಗಳಿಂದ ಅಥವಾ ತಿಳುವಳಿಕೆಯ ಕೊರತೆಯಿಂದ ಮಂಜೂರಾತಿ ನಕ್ಷೆಗಿಂತ (Sanction Plan) ಸ್ವಲ್ಪ ಹೆಚ್ಚುವರಿ ಕಟ್ಟಡ ನಿರ್ಮಾಣ ಮಾಡಿರುತ್ತಾರೆ. ಈ ಹಿಂದೆ ಶೇ. 5 ರಷ್ಟು ಉಲ್ಲಂಘನೆಗಳನ್ನು ಮಾತ್ರ ಸಕ್ರಮಗೊಳಿಸಲು ಅವಕಾಶವಿತ್ತು. ಶೇ. 5 ಕ್ಕಿಂತ ಹೆಚ್ಚು ಉಲ್ಲಂಘನೆಯಾದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (OC) ಸಿಗುತ್ತಿರಲಿಲ್ಲ. ಇದರಿಂದಾಗಿ ನೀರು ಮತ್ತು ವಿದ್ಯುತ್ ಸಂಪರ್ಕ ಪಡೆಯಲು ಸಾವಿರಾರು ಜನರು ಪರದಾಡುತ್ತಿದ್ದರು. ಈ ವಾಸ್ತವವನ್ನು ಮನಗಂಡ ಸರ್ಕಾರ ಈಗ ಈ ಮಿತಿಯನ್ನು ಶೇ. 15 ಕ್ಕೆ ಏರಿಸಿದೆ.
ಈ ಹೊಸ ತಿದ್ದುಪಡಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯಕ್ಕೆ ಅವಕಾಶ ನೀಡಲಾಗಿದೆ. ಏಪ್ರಿಲ್ 1 ರಂದು ಕರಡು ಅಧಿಸೂಚನೆ ಪ್ರಕಟವಾಗಿದ್ದು, ಅಧಿಸೂಚನೆ ಪ್ರಕಟವಾದ 30 ದಿನಗಳೊಳಗೆ, ಅಂದರೆ ಏಪ್ರಿಲ್ 30, 2026 ರೊಳಗೆ ಸಾರ್ವಜನಿಕರು ತಮ್ಮ ಆಕ್ಷೇಪಣೆ ಹಾಗೂ ಸಲಹೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.
ಬೆಂಗಳೂರನ್ನು ಐದು ನಗರ ಪಾಲಿಕೆಗಳನ್ನಾಗಿ ವಿಂಗಡಿಸಲಾಗಿದ್ದು, ಆಯಾ ವ್ಯಾಪ್ತಿಯ ಆಯುಕ್ತರ ಕಚೇರಿಗಳಲ್ಲಿ ಸಲಹೆಗಳನ್ನು ನೀಡಬಹುದು:
ಸಾರ್ವಜನಿಕರು ಈ ಕರಡು ಅಧಿಸೂಚನೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕೃತ ಅಂತರ್ಜಾಲ ತಾಣ https://updates.bbmpgov.in/public ನಲ್ಲಿ ವೀಕ್ಷಿಸಬಹುದಾಗಿದೆ. ಶೇ. 15 ರವರೆಗಿನ ಉಲ್ಲಂಘನೆಗೆ ದಂಡ ಪಾವತಿಸಿ ಕ್ರಮಬದ್ಧಗೊಳಿಸಲು ಈ ತಿದ್ದುಪಡಿ ಅನುವು ಮಾಡಿಕೊಡಲಿದೆ. ಆದರೆ, ಶೇ. 15 ಕ್ಕಿಂತ ಹೆಚ್ಚಿನ ಉಲ್ಲಂಘನೆ ಮಾಡುವವರ ವಿರುದ್ಧ ಭವಿಷ್ಯದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ. ಗಾಳಿ, ಬೆಳಕು ಮತ್ತು ಸುರಕ್ಷತೆಯ ಮಾನದಂಡಗಳನ್ನು ಗಮನದಲ್ಲಿಟ್ಟುಕೊಂಡು ಈ ತಿದ್ದುಪಡಿ ತರಲಾಗಿದ್ದು, ಬೆಂಗಳೂರಿನ ಲಕ್ಷಾಂತರ ಕಟ್ಟಡ ಮಾಲೀಕರಿಗೆ ಇದು ನೆಮ್ಮದಿ ನೀಡಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ