ಮದುವೆ ಕಾಗದ ಹಂಚಲು ಹೋದಾಗ ಟ್ರ್ಯಾಕ್ಟರ್ ಡಿಕ್ಕಿ: ಹಸೆಮಣೆ ಏರಬೇಕಾದ ಯುವಕ ಮಸಣಕ್ಕೆ

Published : Apr 09, 2026, 11:31 AM IST
Accident death

ಸಾರಾಂಶ

Groom died in Accident:ಮದ್ವೆ ಆಹ್ವಾನ ಪತ್ರಿಕೆ ನೀಡುವುದಕ್ಕೆಂದು ಹೋದ ಯುವಕ ಮಸಣ ಸೇರಿದಂತಹ ಆಘಾತಕಾರಿ ಘಟನೆ ಬೆಂಗಳೂರಿನ ಹುಳಿಮಾವು ಬಳಿ ನಡೆದಿದೆ. 28 ವರ್ಷದ ಅಕ್ಷತ್ ಮೃತಪಟ್ಟ ಯುವಕ.

ಮದುವೆ ಕಾಗದ ಹಂಚಲು ಹೋದಾಗ ಟ್ರ್ಯಾಕ್ಟರ್ ಡಿಕ್ಕಿ

ಬೆಂಗಳೂರು: ಮದ್ವೆ ಆಹ್ವಾನ ಪತ್ರಿಕೆ ನೀಡುವುದಕ್ಕೆಂದು ಹೋದ ಯುವಕ ಮಸಣ ಸೇರಿದಂತಹ ಆಘಾತಕಾರಿ ಘಟನೆ ಬೆಂಗಳೂರಿನ ಹುಳಿಮಾವು ಬಳಿ ನಡೆದಿದೆ. 28 ವರ್ಷದ ಅಕ್ಷತ್ ಮೃತಪಟ್ಟ ಯುವಕ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಡೆದಿತ್ತು. ಮದುವೆ ಆಹ್ವಾನ ಪತ್ರಿಕೆ ನೀಡಲು ಬಂದಿದ್ದ ಅಕ್ಷತ್ ಅವರು ಇಲ್ಲಿಗೆ ಬಂದಿದ್ದು, ಬ್ರಹ್ಮರಥೋತ್ಸವದ ಪಲ್ಲಕ್ಕಿಗಳನ್ನು ನೋಡುತ್ತಾ ನಿಂತಿದ್ದ ವೇಳೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಅವರು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.

ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ದುರಂತ

ಅಕ್ಷತ್ ಅವರ ಮದುವೆ ನಿಗದಿಯಾಗಿದ್ದು, ಮದುವೆ ಕಾಗದ ಹಂಚುವುದರಲ್ಲಿ ಅವರು ಬ್ಯುಸಿಯಾಗಿದ್ದರು. ಇದರ ನಡುವೆ ಕೋದಂಡರಾಮ ಬ್ರಹ್ಮರಥೋತ್ಸವಕ್ಕೆ ಬಂದಿದ್ದ ಅವರು ಅಲ್ಲಿ ಜಾತ್ರೆ ನೋಡಲು ನಿಂತಿದ್ದಾಗ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಇಂದು ಮುಂಜಾನೆ ಘಟನೆ ನಡೆದಿದ್ದು, ಇಷ್ಟೊಂದು ದೊಡ್ಡ ದುರ್ಘಟನೆ ನಡೆದ್ರೂ ಸ್ಥಳಕ್ಕೆ ದೇವಾಲಯದ ಟ್ರಸ್ಟಿಗಳು ಬಂದಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಟ್ರಾಫಿಕ್ ಚಲನ್ ಮೂಲಕ ಸಿಕ್ಕಿಬಿದ್ದ ಕಳ್ಳ: ಬೈಕ್ ಕಳವಾದ 3 ತಿಂಗಳ ಬಳಿಕ ಮನೆಗೆ ಬಂತು ಕಳ್ಳನ ಫೋಟೋ!

ಮುಂಜಾನೆ ಪಲ್ಲಕ್ಕಿಗಳನ್ನ ತೆರೆವುಗೊಳಿಸಲು ಪೊಲೀಸರ ಒತ್ತಡ ಹೆಚ್ಚಾದ ಚಾಲಕನಲ್ಲದವನು ಟ್ರ್ಯಾಕ್ಟರ್ ತೆಗೆಯಲು ಹೋದಾಗ ಈ ದುರಂತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ಗೋಪಾಲ್ ಬ್ಯಾಕೋಡ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಹಸೆಮಣೆ ಏರಬೇಕಾದ ಯುವಕನೇ ಈಗ ಅಪಘಾತದಿಂದಾಗಿ ಸಾವನ್ನಪ್ಪಿರುವುದರಿಂದ ಮದುವೆ ಸಂಭ್ರಮವಿರಬೇಕಾದ ಮನೆಯಲ್ಲಿ ಈಗ ಸೂತಕದ ಛಾಯೆ ಆವರಿಸಿದೆ.

ಇದನ್ನೂ ಓದಿ: ಬೇಸಿಗೆ ಸೆಖೆಗೆ ಮನೆ ಹೊರಗೆ ಮಲಗಿದ್ದವರ ಮೇಲೆ 'ಸೈಕೋ' ದಾಳಿ: ಆರು ಜನರ ತಲೆ ಒಡೆದ ಮಾನಸಿಕ ಅಸ್ವಸ್ಥ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

BREAKING: ಯೋಗೇಶ್ ಗೌಡ ಕೊಲೆ ಕೇಸ್‌ನಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ
ಪಠ್ಯದಲ್ಲಿ ಹಿಂದಿ ಕಲಿಕೆ ಕನ್ನಡಿಗರಿಗಿಂತ ವಲಸಿಗರಿಗೇ ಲಾಭ! ಉದ್ಯೋಗ ನೀಡದ ಭಾಷೆ ನಮಗೆ ಬೇಕೆ?