ಭದ್ರಾವತಿ: ಮದುವೆಯಾದ ಎರಡೇ ದಿನಕ್ಕೆ ವರ ಸಾವು!

Published : Dec 04, 2025, 11:34 AM IST
Groom Dies 2 Days After Marriage Due to Heart Attack

ಸಾರಾಂಶ

groom dies of heart attack in Bhadravati: ಭದ್ರಾವತಿಯಲ್ಲಿ ಮದುವೆಯಾದ ಕೇವಲ ಎರಡು ದಿನಕ್ಕೆ 30 ವರ್ಷದ ವರ ರಮೇಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ವಧುವಿನ ಮನೆಯಲ್ಲೇ ಈ ದುರಂತ ಸಂಭವಿಸಿದ್ದು, ರಾಜ್ಯದಲ್ಲಿ ಯುವಕರ ಹೃದಯಾಘಾತ ಸರಣಿ ಸಾವುಗಳ ಬಗ್ಗೆ ಆತಂಕ ಹೆಚ್ಚಿಸಿದೆ.

ಭದ್ರಾವತಿ (ಡಿ.4): ರಾಜ್ಯದಲ್ಲಿ ಯುವಕರೂ ಹೃದಯಾಘಾತದಿಂದ ಸಾವು ಸಂಭವಿಸುತ್ತಿರುವ ಆತಂಕಕಾರಿ ಸರಣಿ ಮುಂದುವರಿದಿದ್ದು, ಇದೀಗ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮದುವೆಯಾಗಿ ಕೇವಲ ಎರಡೇ ದಿನಕ್ಕೆ ವರ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಈ ದುರ್ಘಟನೆಯಿಂದಾಗಿ ಮದುವೆಯ ಸಂಭ್ರಮದಲ್ಲಿದ್ದ ಎರಡೂ ಕುಟುಂಬಗಳಲ್ಲಿ ತೀವ್ರ ಶೋಕ ಮನೆಮಾಡಿದೆ.

ಭದ್ರಾವತಿ ತಾಲೂಕಿನ ಹನುಮಂತಾಪುರ ನಿವಾಸಿ ರಮೇಶ್ (30) ಹೃದಯಾಘಾತದಿಂದ ಮೃತಪಟ್ಟ ವರ. ನವೆಂಬರ್ 28 ರಂದು ಹಸೆಮಣೆ ಏರಿದ್ದರು. ವಿವಾಹವಾದ ಎರಡೇ ದಿನ ಕಳೆಯುವಷ್ಟರಲ್ಲಿ ಈ ದುರಂತ ಸಂಭವಿಸಿದೆ.

ವಧುವಿನ ಮನೆಯಲ್ಲೇ ಹೃದಯಾಘಾತ:

ಮದುಮಗನಾಗಿ ರಮೇಶ್ ಅವರು ಶಿವಮೊಗ್ಗ ತಾಲೂಕು ಗಾಜನೂರು ಸಮೀಪದ ಬಂಡ್ರಿಯಲ್ಲಿರುವ ವಧುವಿನ ಮನೆಗೆ ಹೋದ ಸಂದರ್ಭದಲ್ಲಿ ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆದರೂ, ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದಾರೆ.

ಹೃದಯಾಘಾತ ಪ್ರಕರಣ ಹೆಚ್ಚಳ ಆತಂಕ:

ಇತ್ತೀಚೆಗೆ ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹೃದಯಾಘಾತದಿಂದ ಸಾಲು ಸಾಲು ಸಾವುಗಳು ವರದಿಯಾಗಿದ್ದವು. ಇದೀಗ ಭದ್ರಾವತಿಯಲ್ಲೂ ಈ ಮರಣ ಮೃದಂಗ ಮುಂದುವರಿದಿರುವುದು ಆತಂಕಕ್ಕೆ ಕಾರಣವಾಗಿದೆ. ಮೃತ ರಮೇಶ್ ಅವರ ಅಂತ್ಯಸಂಸ್ಕಾರವನ್ನು ಅವರು ವಾಸವಿದ್ದ ಹೊಸಕೊಪ್ಪ ಗ್ರಾಮದಲ್ಲಿ ಮಂಗಳವಾರ ನೆರವೇರಿಸಲಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾರ್ ಆಗಿ ಮಾರ್ಪಟ್ಟ KSRTC ಬಸ್: ಪ್ರಯಾಣದ ಮಧ್ಯೆಯೇ ಮದ್ಯ ಸೇವನೆ!
ಬೆಳಗಾವಿ ಅಧಿವೇಶನ: ವಿರೋಧ ಪಕ್ಷಗಳು ಅವಿಶ್ವಾಸ ಮಂಡಿಸಿದರೆ ಕಾಂಗ್ರೆಸ್ ಒಗ್ಗಟ್ಟಿನ ಹೋರಾಟ