Gruha Lakshmi Scheme: 2 ತಿಂಗಳ ಕಂತು ಬಾಕಿ ಉಳಿಸಿಕೊಂಡ ಸರ್ಕಾರ; ಗೃಹಲಕ್ಷ್ಮಿ ಹಣ ಬಿಡುಗಡೆ ಕೋರಿ ಮಹಿಳೆಯರಿಬ್ಬರಿಂದ ಕೋರ್ಟ್‌ ಮೊರೆ!

Kannadaprabha News   | Kannada Prabha
Published : May 22, 2026, 05:03 AM IST
Gruha Lakshmi Scheme Women Move Court Over Pending Two Month Installments

ಸಾರಾಂಶ

ಗೃಹಲಕ್ಷ್ಮೀ ಯೋಜನೆಯ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಿಂಬಾಕಿ ಹಣ ಬಿಡುಗಡೆಗೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 

ಬೆಂಗಳೂರು (ಮೇ.22): ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಿಂಬಾಕಿ ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. 

ಈ ಕುರಿತು ಗೃಹ ಲಕ್ಷ್ಮೀ ಯೋಜನೆಯಡಿ ಹಿಂಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ ಆರ್.‌ಗಂಗಾ ಮತ್ತು‌ ನಂದಿನಿ‌ ಲೇಔಟ್ ನಿವಾಸಿ ಜಿ.ಡಿ.‌ಪವಿತ್ರಾ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ನ್ಯಾ.ಸೂರಜ್ ಗೋವಿಂದ ರಾಜ್ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜ್ಯ ಪಂಚಾಯತ್ ರಾಜ್ ಇಲಾಖೆ,‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಮನವಿ ಏನು?:

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ 2023ರ ಆಗಸ್ಟ್‌ನಿಂದ ಮನೆಯೊಡತಿಗೆ ಮಾಸಿಕ 2 ಸಾವಿರ ರು. ಬಿಡುಗಡೆ ಮಾಡಲು ಆರಂಭಿಸಿದ್ದು, ಆಡಳಿತಾತ್ಮಕ ಕಾರಣದಿಂದ 2025ರ ಫೆಬ್ರವರಿ ತಿಂಗಳ ಹಣ ಬಿಡುಗಡೆ ಮಾಡಿರಲಿಲ್ಲ. ಹಾಗೆಯೇ ಮಾರ್ಚ್ ತಿಂಗಳ‌ ಹಣವನ್ನೂ ಪಾವತಿಸಿರಲಿಲ್ಲ. ಹಾಗಾಗಿ, ಈ ಹಿಂಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

2 ತಿಂಗಳ ಕಂತು ಬಾಕಿ ಉಳಿಸಿಕೊಂಡ ಸರ್ಕಾರ

ಈ ಬಗ್ಗೆ ಮಹಿಳೆಯರಿಬ್ಬರಿಂದ ಹೈಕೋರ್ಟ್‌ಗೆ ಅರ್ಜಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯ ಬಿಜೆಪಿಗೆ ಟಾನಿಕ್‌ ನೀಡಲು ದಿಲ್ಲಿ ನಾಯಕರ ಕಸರತ್ತು; ಮಾತುಕತೆ - ಹೇಳಿಕೆಗಷ್ಟೇ ಸೀಮಿತ ಆಗ್ತಿದ್ದೀರಿ, ನಿರ್ಣಾಯಕ ಹೋರಾಟ ಯಾಕಿಲ್ಲ?
ಕಾರವಾರಕ್ಕೆ 200 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ₹100 ಕೋಟಿ ಕೊಟ್ಟ ಸರ್ಕಾರ!