ವಿಮರ್ಶಕ ಡಾ.ಆಮೂರಗೆ 7 ಲಕ್ಷ ರು. ನೃಪತುಂಗ ಪ್ರಶಸ್ತಿ

Kannadaprabha News   | Asianet News
Published : Sep 10, 2020, 09:13 AM ISTUpdated : Sep 10, 2020, 09:31 AM IST
ವಿಮರ್ಶಕ ಡಾ.ಆಮೂರಗೆ 7 ಲಕ್ಷ ರು. ನೃಪತುಂಗ ಪ್ರಶಸ್ತಿ

ಸಾರಾಂಶ

ಸಮಗ್ರ ಸಾಹಿತ್ಯ ಕೃಷಿ ನಡೆಸಿರುವ ಹಿರಿಯ ಸಾಹಿತಿ ಡಾ.ಜಿ.ಎಸ್‌. ಆಮೂರ ಅವರನ್ನು ಸರ್ವಾನುಮತದಿಂದ ನೃಪತುಂಗ ಪ್ರಶಸ್ತಿಗೆ ಆಯ್ಕೆ ಮಾಡಿದೆ. 

ಬೆಂಗಳೂರು (ಸೆ.10):  2020ನೇ ಸಾಲಿನ ಬಿಎಂಟಿಸಿಯ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಖ್ಯಾತ ವಿಮರ್ಶಕ ಡಾ.ಜಿ.ಎಸ್‌.ಆಮೂರ ಭಾಜನರಾಗಿದ್ದಾರೆ. ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್‌ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿ ಸಮಗ್ರ ಸಾಹಿತ್ಯ ಕೃಷಿ ನಡೆಸಿರುವ ಹಿರಿಯ ಸಾಹಿತಿ ಡಾ.ಜಿ.ಎಸ್‌. ಆಮೂರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ. 

ಪ್ರಶಸ್ತಿಯು 7 ಲಕ್ಷದ 1ರು. ನಗದು, ಫಲಕ, ಪ್ರಶಸ್ತಿ ಪತ್ರ ಒಳಗೊಂಡಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಒಂದೂವರೆ ಕೋಟಿ ರು. ದತ್ತಿನಿಧಿಯನ್ನು ಸ್ಥಾಪಿಸಿದೆ. ಅದರಿಂದ ಬರುವ ಬಡ್ಡಿ ಹಣದಲ್ಲಿ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ ನೀಡಲಾಗುತ್ತದೆ.

ಮಯೂರವರ್ಮ ಸಾಹಿತ್ಯ ಪ್ರಶಸ್ತಿ:

45 ವರ್ಷದೊಳಗಿನ ಯುವ ಸಾಹಿತಿಗಳಿಗೆ ನೀಡುವ ‘ಮಯೂರವರ್ಮ ಸಾಹಿತ್ಯ ಪ್ರಶಸ್ತಿ’ಗೆ ಯುವ ಕವಿಗಳಾದ ಡಾ. ಧನಂಜಯ ಕುಂಬ್ಳೆ, ಅಕ್ಷತಾ ಕೃಷ್ಣಮೂರ್ತಿ, ಡಾ. ಸಂತೋಷ ಹಾನಗಲ್ಲ, ವನಿತಾ ಎನ್‌. ಶೇಟ್‌ ಹಾಗೂ ಆರ್‌. ಪ್ರಭಾಕರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 25 ಸಾವಿರ ರು. ನಗದು, ಫಲಕ, ಪ್ರಶಸ್ತಿ ಪತ್ರ ಒಳಗೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!