GST ಸರಳೀಕರಣ ಬಡವರಿಗೆ, ಮಧ್ಯಮ ವರ್ಗದವರಿಗೆ ಪ್ರಯೋಜನ: ಸಂಸದ ಕಾಗೇರಿ

Published : Sep 04, 2025, 10:29 PM IST
GST

ಸಾರಾಂಶ

ಜಿಎಸ್ಟಿ ದರ ಪರಿಷ್ಕರಣೆಯಿಂದ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. 

ಉತ್ತರ ಕನ್ನಡ (ಸೆ.4): ಭಾರತವು ಆರ್ಥಿಕವಾಗಿ ಸಶಕ್ತವಾಗುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಿಎಸ್ಟಿ ದರವನ್ನು ಹೊಸ ಮಾದರಿಯಲ್ಲಿ ಪರಿವರ್ತನೆಗೊಳಿಸಿ, ಸರಳೀಕರಣಗೊಳಿಸಿದೆ. ಇದರಿಂದ ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ಬಹಳ ಪ್ರಯೋಜನವಾಗಲಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಶಿರಸಿ ನಗರದ ದೀನದಯಾಳ ಸಭಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ವಿಸ್ತ್ರತ ಚರ್ಚೆ ನಡೆಸಿ, ಅದರ ಅನ್ವಯದಲ್ಲಿ ಹಣಕಾಸಿನ ಸಚಿವರು ಇದನ್ನು ಘೋಷಣೆ ಮಾಡಲಾಗಿದೆ. ದೂರದೃಷ್ಠಿ ಚಿಂತನೆಯ ಈ ತೀರ್ಮಾನವು ನಮ್ಮ ಭಾರತದ ಬಡವರಿಗೆ, ಮಧ್ಯಮವರ್ಗದವರಿಗೆ ಇದು ಬಹು ಅನುಕೂಲ ಆಗಲಿದೆ ಎಂದರು.

ತೆರಿಗೆ ಹೆಚ್ಚಳವನ್ನು ಎಲ್ಲ ಸರ್ಕಾರಗಳು ಮಾಡುತ್ತವೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಭಾರತದ ಏಳಿಗೆಗಾಗಿ ಜಿಎಸ್ಟಿ ಕಡಿಮೆ ಮಾಡಿದ್ದಾರೆ. ಈ ಸುಧಾರಣೆ ಕೇವಲ ಬಿಹಾರ ಚುನಾವಣೆಗೆ ಸಂಬಂಧ ಇಲ್ಲ‌. ಆರೆಂಟು ವರ್ಷಗಳಿಂದ‌ ನಡೆದೇ ಇತ್ತು. ಕಾಂಗ್ರೆಸ್ ಇಂತಹ ಆರೋಪ ಮಾಡಿದರೆ ಅಪ್ರಬುದ್ಧತೆಯ ಸಂಕೇತ ಎನ್ನಬೇಕಾಗುತ್ತದೆ ಎಂದರು‌.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್‌, ವಿಭಾಗ ಸಂಚಾಲಕ ಆರ್.ಡಿ.ಹೆಗಡೆ ಜಾನ್ಮನೆ, ಜಿಲ್ಲಾ ವಕ್ತಾರ ಸದಾನಂದ ಭಟ್ಟ, ನಗರಸಭೆ ಅಧ್ಯಕ್ಷೆ ಶರ್ಮಿಳಾ‌ ಮಾದನಗೇರಿ ಮತ್ತಿತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌