ಮಂತ್ರಾಲಯದ ಸುಬುಧೇಂದ್ರ ತೀರ್ಥರಿಗೆ ಗೌರವ ಡಾಕ್ಟರೇಟ್

Published : Nov 18, 2020, 04:27 PM IST
ಮಂತ್ರಾಲಯದ ಸುಬುಧೇಂದ್ರ ತೀರ್ಥರಿಗೆ  ಗೌರವ ಡಾಕ್ಟರೇಟ್

ಸಾರಾಂಶ

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಈ ಸಾಲಿನ ಗೌರವ ಡಾಕ್ಟರೇಟ್ ನೀಡಲು ಮುಂದಾಗಿದೆ.

ರಾಯಚೂರು, (ನ.18): ಗುಲಬರ್ಗಾ ವಿಶ್ವವಿದ್ಯಾಲಯದಿಂದ ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ.

ಸುಬುಧೇಂದ್ರ ತೀರ್ಥರ ಸಾಮಾಜಿಕ ಸೇವೆ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಅಪಾರ ಸೇವೆ ಪರಿಗಣಿಸಿ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ.

ಮಂತ್ರಾಲಯ ರಾಘವೇಂದ್ರ ಸ್ವಾಮಿ ಪವಾಡ; 'ಇಂದು ರಾಯರಿಗೆ ನನ್ನ ಮಾತು ಕೇಳಿಸಿದ ಸತ್ಯಘಟನೆ'!

ಶ್ರೀಗಳಿಗೆ ಡಾಕ್ಟರೇಟ್ ನೀಡುವಂತೆ ಸಿಂಡಿಕೇಟ್ ಸದಸ್ಯ ಡಾ. ಶರಣಬಸಪ್ಪ ಜೋಳದಹೆಡಗಿ ಅವರು ಕಳೆದ ಫೆಬ್ರುವರಿಯಲ್ಲಿ ಕುಲಪತಿಗೆ ಮನವಿ ಸಲ್ಲಿಸಿದ್ದರು. ವಿಶ್ವವಿದ್ಯಾಲಯದಿಂದ ಮಂತ್ರಾಲಯ ಶ್ರೀಗಳ ಹೆಸರು ಶಿಫಾರಸು ಮಾಡಿ ಸರ್ಕಾರಕ್ಕೆ ಕಳುಹಿಸಿರುವುದನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ.

ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರತಿಭಾ ಡಿ.ಹಬ್ಬು ಅವರು ವಿಶ್ವವಿದ್ಯಾಲಯಕ್ಕೆ ನವೆಂಬರ್ 11 ರಂದು ಪತ್ರ ರವಾನಿಸಿದ್ದು, ಇದೇ ನವೆಂಬರ್ 20 ರಂದು ನಡೆಯುವ 38ನೇ ಘಟಿಕೋತ್ಸವ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!