ವೈರಿಗಳಾಗಿದ್ದ ಬಳ್ಳಾರಿ ಈ ಶಾಸಕರೀಗ ಫ್ರೆಂಡ್ಸ್

Published : Jan 31, 2019, 12:35 PM ISTUpdated : Jan 31, 2019, 12:49 PM IST
ವೈರಿಗಳಾಗಿದ್ದ ಬಳ್ಳಾರಿ ಈ ಶಾಸಕರೀಗ ಫ್ರೆಂಡ್ಸ್

ಸಾರಾಂಶ

ವೈರಿಗಳಾಗಿದ್ದ ಬಳ್ಳಾರಿಯ ಈ ಇಬ್ಬರು ಶಾಸಕರು ಇದೀಗ ಫ್ರೆಂಡ್ಸ್ ಆಗಿದ್ದಾರೆ. ಇವರ ಗೆಳೆತನ ಹುಟ್ಟಲು ಕಾರಣವಾಗಿದ್ದ ರೆಸಾರ್ಟ್ ರಾಜಕಾರಣದ ವೇಳೆ ನಡೆದ ಗಲಭೆ. ಶಾಸಕ ಆನಂದ್ ಸಿಂಗ್ ಹಾಗೂ ಭೀಮಾನಾಯ್ಕ್ ನಡುವಿನ ವೈಮನಸ್ಯ ಈಗ ಬಗೆಹರಿದಿದೆ ಎನ್ನಲಾಗಿದೆ.

ಬಳ್ಳಾರಿ: ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ವಿರುದ್ಧ ಪರ್ಯಾಯ ವ್ಯಕ್ತಿ ಬೆಳೆಸುವ ಉದ್ದೇಶದಿಂದ ಭೀಮಾನಾಯ್ಕ ಶಾಸಕರಾಗಿರುವ ಹಗರಿಬೊಮ್ಮನಹಳ್ಳಿಯಲ್ಲಿ ಕಚೇರಿ ತೆರೆದು ರಾಜಕೀಯ ಚಟುವಟಿಕೆಯನ್ನು ಆರಂಭಿಸಿದ್ದ ಶಾಸಕ ಆನಂದ ಸಿಂಗ್‌ ಇದೀಗ ಕಚೇರಿ ತೆರವುಗೊಳಿಸಿದ್ದಾರೆ. 

ಈಚೆಗೆ ಈಗಲ್ಟನ್‌ ರೆಸಾರ್ಟ್‌ನಲ್ಲಿ ಕಂಪ್ಲಿ ಶಾಸಕ ಹಲ್ಲೆ ಪ್ರಕರಣದ ಬಳಿಕ ಆನಂದ ಸಿಂಗ್‌ ಈ ನಿರ್ಧಾರಕ್ಕೆ ಬಂದಿದ್ದು, ಸಿಂಗ್‌ ಹಾಗೂ ಭೀಮಾನಾಯ್ಕ ನಡುವಿನ ಸಂಧಾನ ಯಶಸ್ವಿಯಾದಂತಾಗಿದೆ. ಹಗರಿಬೊಮ್ಮನಹಳ್ಳಿಯಲ್ಲಿದ್ದ ಕಚೇರಿ ಹಾಗೂ ಆನಂದ ಸಿಂಗ್‌ ಅವರ ಬೃಹತ್‌ ಕಟೌಟ್‌ ಸಹ ತೆರವುಗೊಳಿಸಲಾಗಿದ್ದು ಇದರಿಂದ ಇಬ್ಬರ ನಡುವಿನ ಮುಸುಕಿನ ಗುದ್ದಾಟಕ್ಕೆ ತೆರೆ ಬಿದ್ದಂತಾಗಿದೆ. 

ಬಯಲಾಯ್ತು ಆನಂದ್ ಸಿಂಗ್-ಗಣೇಶ್ ಟೈಟ್ ಫೈಟ್ ಸೀಕ್ರೆಟ್

ಈಗಲ್ಟನ್‌ ರೆಸಾರ್ಟ್‌ನಲ್ಲಿ ಕಂಪ್ಲಿ ಶಾಸಕ ಗಣೇಶ್‌ ಹಾಗೂ ಆನಂದ ಸಿಂಗ್‌ ನಡುವೆ ಜಗಳ ಶುರುವಾದಾಗ ಪಕ್ಕದಲ್ಲಿಯೇ ಇದ್ದ ಭೀಮಾನಾಯ್ಕ ಮಧ್ಯಪ್ರವೇಶದಿಂದ ಆನಂದಸಿಂಗ್‌ ಮೇಲಾಗುತ್ತಿದ್ದ ಮತ್ತಷ್ಟು ಹಲ್ಲೆ ತಪ್ಪಿಸಿದ್ದರು. ಇದರಿಂದ ಆನಂದಸಿಂಗ್‌ ಅವರು ಭೀಮಾನಾಯ್ಕ ವಿರುದ್ಧ ಇನ್ನು ಹಗೆ ಸಾಧಿಸುವುದು ಸರಿಯಲ್ಲ ಎಂಬ ನಿರ್ಧಾರಕ್ಕೆ ಬಂದು ತೆರವುಗೊಳಿಸಿದ್ದಾರೆ ಎನ್ನಲಾಗಿದೆ.

ಇದರಿಂದ ವೈರಿಗಳಾಗಿದ್ದ ಬಳ್ಳಾರಿಯ ಈ ಇಬ್ಬರು ಶಾಸಕರ ಮುಸುಕಿನ ಗುದ್ದಾಟಕ್ಕೆ ತೆರೆ ಬಿದ್ದಂತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

HD Kumaraswamy Birthday: ಎಚ್‌ಡಿಕೆಗೆ  ₹3.50 ಲಕ್ಷದ 25 ಗ್ರಾಂನ ಚಿನ್ನದ ಸರ ಕೊಟ್ಟ ಅಭಿಮಾನಿ!
ಆಜಾನ್‌ ಚರ್ಚೆ ವೇಳೆ ದೀಪಾವಳಿ ಪಟಾಕಿ ವಿಚಾರ ಎತ್ತಿದ ಖಂಡ್ರೆ Congress-BJP ನಡುವೆ ಗದ್ದಲ