ಚೈತ್ರಾ ಕುಂದಾಪುರ ಡೀಲ್‌ ಕೇಸ್‌: ಟಿಕೆಟ್‌ ವಂಚನೆ ಬಹಿರಂಗಕ್ಕೂ ಮೊದಲೇ ದೂರು ನೀಡಿದ್ದ ಹಾಲಶ್ರೀ

Published : Sep 17, 2023, 10:26 AM IST
ಚೈತ್ರಾ ಕುಂದಾಪುರ ಡೀಲ್‌ ಕೇಸ್‌: ಟಿಕೆಟ್‌ ವಂಚನೆ ಬಹಿರಂಗಕ್ಕೂ ಮೊದಲೇ ದೂರು ನೀಡಿದ್ದ ಹಾಲಶ್ರೀ

ಸಾರಾಂಶ

ಹಾಲಶ್ರೀ ನೀಡಿದ್ದ ದೂರನ್ನು ಗಂಭೀರ ಸ್ವರೂಪವಲ್ಲದ ಕೃತ್ಯ (ಎನ್‌ಸಿ) ಎಂದು ಪರಿಗಣಿಸಿ ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದರು. ಇದಾದ ತಿಂಗಳ ಬಳಿಕ ಸ್ವಾಮೀಜಿ ವಿರುದ್ಧ ಗೋವಿಂದ ಬಾಬು ಪೂಜಾರಿ ವಂಚನೆ ಪ್ರಕರಣ ದಾಖಲಿಸಿದ್ದು, ಸದ್ಯ ಸ್ವಾಮೀಜಿ ತಲೆಮರೆಸಿಕೊಂಡಿದ್ದಾರೆ.

ಬೆಂಗಳೂರು(ಸೆ.17): ಬಿಜೆಪಿ ಟಿಕೆಟ್‌ ವಂಚನೆ ಕೃತ್ಯ ಬೆಳಕಿಗೆ ಬರುವ ಮುನ್ನವೇ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಆರೋಪಿಸಿ ಉದ್ಯಮಿ ಗೋವಿಂದ ಪೂಜಾರಿ ವಿರುದ್ಧವೇ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಬಳ್ಳಾರಿ ಜಿಲ್ಲೆ ಹಡಗಲಿಯ ಹಾಲಶ್ರೀ ಮಠದ ಅಭಿನವ ಹಾಲ ವೀರಪ್ಪಜ್ಜ ಸ್ವಾಮೀಜಿ ದೂರು ನೀಡಿದ್ದ ಸಂಗತಿ ತಡವಾಗಿ ಬಯಲಾಗಿದೆ.

ಆದರೆ ಹಾಲಶ್ರೀ ನೀಡಿದ್ದ ದೂರನ್ನು ಗಂಭೀರ ಸ್ವರೂಪವಲ್ಲದ ಕೃತ್ಯ (ಎನ್‌ಸಿ) ಎಂದು ಪರಿಗಣಿಸಿ ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದರು. ಇದಾದ ತಿಂಗಳ ಬಳಿಕ ಸ್ವಾಮೀಜಿ ವಿರುದ್ಧ ಗೋವಿಂದ ಬಾಬು ಪೂಜಾರಿ ವಂಚನೆ ಪ್ರಕರಣ ದಾಖಲಿಸಿದ್ದು, ಸದ್ಯ ಸ್ವಾಮೀಜಿ ತಲೆಮರೆಸಿಕೊಂಡಿದ್ದಾರೆ.

ಚೈತ್ರಾ ಟಿಕೆಟ್‌ ವಂಚನೆ ಕೇಸ್‌: ಬಿಜೆಪಿ ನಾಯಕನ ವೇಷಧಾರಿ ಕರೆದೊಯ್ದು ಮರುಸೃಷ್ಟಿದ ಪೊಲೀಸರು..!

ರಾಜರಾಜೇಶ್ವರಿ ನಗರ ಸಮೀಪದ ಕೆಂಚೇನಹಳ್ಳಿಯ ಪ್ರೀಮಿಯರ್‌ ಟೆಂಪಲ್ ಬೆಲ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ಹಾಲಶ್ರೀ ನೆಲೆಸಿದ್ದರು. ಜು.11ರಂದು ಆರ್‌.ಆರ್‌.ನಗರ ಠಾಣೆಗೆ ತೆರಳಿದ ಸ್ವಾಮೀಜಿ, ತಮ್ಮ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ ಎಂದು ಇಲ್ಲಸಲ್ಲದ ಆರೋಪ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ಈ ದೂರಿನಲ್ಲಿ ಸಾಮಾಜಿಕ ಕಾರ್ಯಕರ್ತ ಸೀನಪ್ಪ ಶೆಟ್ಟಿ, ಉಡುಪಿಯ ಕಾಂಗ್ರೆಸ್ ಪಕ್ಷದ ಸೇವಾ ದಳ (ಸಾಮಾಜಿಕ ಜಾಲತಾಣ)ದ ಸಂಚಾಲಕ ಹರ್ಷ ಮೆಂಡನ್‌, ದಿನೇಶ್ ನಾಯ್ಕ್ ಹಳ್ಳಿಹೊಳಿ ಹಾಗೂ ಗೋವಿಂದ ಪೂಜಾರಿ ಅವರ ಹೆಸರು ಉಲ್ಲೇಖಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಹಾಲಶ್ರೀ ಒತ್ತಾಯಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: Bengaluru - ಬೆಂಗಳೂರಿನಲ್ಲಿ 7ನೇ ಕ್ಲಾಸ್ ವಿದ್ಯಾರ್ಥಿ ಕಪಾಳಕ್ಕೆ ಹೊಡೆದ ಶಿಕ್ಷಕನ ಬಂಧನ