ಹಂಪಿ: ಗುಡ್ಡ ಹತ್ತಲು ಹೋಗಿ ಕಾಲು ಜಾರಿ ಬಿದ್ದ ಫ್ರಾನ್ಸ್ ಪ್ರಜೆ; ಎರಡು ದಿನಗಳ ಕಾಲ ನರಳಾಡಿದ್ದ ಪ್ರವಾಸಿಗನ ರಕ್ಷಣೆ!

Published : Dec 26, 2025, 06:10 PM IST
Hampi French Tourist Rescued After Being Stranded on Hill for Two Days

ಸಾರಾಂಶ

ವಿಶ್ವವಿಖ್ಯಾತ ಹಂಪಿಯಲ್ಲಿ, ಫ್ರಾನ್ಸ್ ಮೂಲದ ಪ್ರವಾಸಿಗರೊಬ್ಬರು ಗುಡ್ಡ ಹತ್ತುವಾಗ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡರು. ಸುಮಾರು ಎರಡು ದಿನಗಳ ಕಾಲ ನೋವಿನಿಂದ ನರಳಿದ ನಂತರ, ಸ್ಥಳೀಯ ರೈತರು ಮತ್ತು ಅಧಿಕಾರಿಗಳು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿಜಯನಗರ (ಡಿ.26): ವಿಶ್ವವಿಖ್ಯಾತ ಹಂಪಿಯ ಪ್ರವಾಸಿ ತಾಣದಲ್ಲಿ ಫ್ರಾನ್ಸ್ ಮೂಲದ ಪ್ರಜೆಯೊಬ್ಬರು ಗುಡ್ಡ ಹತ್ತಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಕಿಗೆ ಬಂದಿದೆ. ಹಂಪಿಯ ಅಷ್ಟಭುಜ ಸ್ನಾನದ ಕೊಳ್ಳದ ಹಿಂಭಾಗದ ಗುಡ್ಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪ್ರವಾಸಿಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಿರ್ಜನ ಪ್ರದೇಶಕ್ಕೆ ತೆರಳಿದ್ದಾಗ ಸಂಭವಿಸಿದ ಅವಘಡ

ಫ್ರಾನ್ಸ್ ಮೂಲದ ಬ್ರೋನೊ ರೋಜರ್ (52) ಎಂಬವರು ಕಳೆದ 24ನೇ ತಾರೀಖಿನಂದು ಸಾಯಂಕಾಲ 6 ಗಂಟೆ ಸುಮಾರಿಗೆ ಅಷ್ಟಭುಜ ಸ್ನಾನದ ಕೊಳ್ಳದ ಹಿಂಭಾಗದ ಗುಡ್ಡದ ಬಳಿ ತೆರಳಿದ್ದರು. ಈ ವೇಳೆ ಗುಡ್ಡ ಹತ್ತಲು ಪ್ರಯತ್ನಿಸಿದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ನಿರ್ಜನ ಪ್ರದೇಶವಾಗಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದರು ಅವರಿಗೆ ಸಹಾಯಕ್ಕಾಗಿ ಯಾರನ್ನೂ ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ.

ನೋವಿನಲ್ಲೇ ಎರಡು ದಿನ ಗುಡ್ಡದಲ್ಲೇ ಕಾಲ ಕಳೆದ ಬ್ರೋನೊ!

ಕಾಲು ಜಾರಿ ಬಿದ್ದ ರೋಜರ್ ಅವರಿಗೆ ಎದ್ದು ಓಡಾಡಲು ಸಾಧ್ಯವಾಗದಷ್ಟು ಗಂಭೀರ ಗಾಯವಾಗಿತ್ತು. ಹೀಗಾಗಿ ಅವರು ಸುಮಾರು ಎರಡು ದಿನಗಳ ಕಾಲ ಅದೇ ಗುಡ್ಡದ ಹಿಂಭಾಗದ ಬಳಿ ನೋವಿನಿಂದ ನರಳುತ್ತಾ ಕಾಲ ಕಳೆದಿದ್ದಾರೆ. ಕೊನೆಗೆ ಧೈರ್ಯಗುಂದದೆ, ಅಲ್ಲಿಂದ ಹತ್ತಿರದಲ್ಲಿದ್ದ ಬಾಳೆ ತೋಟವೊಂದಕ್ಕೆ ಹೇಗೋ ಕಷ್ಟಪಟ್ಟು ತೆವಳಿಕೊಂಡು ಬಂದಿದ್ದಾರೆ.

ರಕ್ಷಣೆ ಮಾಡಿದ ಸ್ಥಳೀಯ ರೈತರು ಮತ್ತು ಅಧಿಕಾರಿಗಳು

ಬಾಳೆ ತೋಟಕ್ಕೆ ತೆವಳಿಕೊಂಡು ಬಂದಿದ್ದ ವಿದೇಶಿ ಪ್ರಜೆಯನ್ನು ಗಮನಿಸಿದ ಸ್ಥಳೀಯ ರೈತರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪುರಾತತ್ವ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ರೋಜರ್ ಅವರನ್ನು ರಕ್ಷಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೊಪ್ಪಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೇಂಜರ್ ಡಿಸೆಂಬರ್: ಅಡಿಕೆ ತೋಟದಲ್ಲಿ ವಿದ್ಯುತ್ ಶಾಕ್, ಕೂಲಿ ಕಾರ್ಮಿಕ ಬಲಿ! ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದೌಡು
ನಮ್ಮ ಹತ್ರ ದುಡ್ಡಿಲ್ಲ ಎಂದ ಶಾಸಕ; 'ಜಾಗ ಕೊಡ್ರಪ್ಪ ಸಾಕು, ಪ್ರಾಜೆಕ್ಟ್ ನಾನು ಮಾಡ್ತೀನಿ' ಕೇಂದ್ರ ಸಚಿವ ಸೋಮಣ್ಣ ಖಡಕ್ ಕೌಂಟರ್!