
ಕೊಪ್ಪಳ(ಡಿ.3): ಹನುಮನ ಜನ್ಮಸ್ಥಳವೆಂದು ನಂಬಲಾದ ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಅವರ ಫೋಟೋ ಹಿಡಿದು ಬಂದಿರುವ ಹನುಮ ಮಾಲಾಧಾರಿಯೊಬ್ಬರು ಗಮನ ಸೆಳೆದಿದ್ದಾರೆ.
ಹೌದು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕೋಳಿವಾಡ ನಿವಾಸಿಯಾಗಿರುವ ರಾಜು ಎಂಬ ಹನುಮ ಭಕ್ತ ಈ ರೀತಿ ವಿವಾದಾತ್ಮಕ ಫೋಟೋ ಹಿಡಿದು ಅಂಜನಾದ್ರಿಗೆ ಆಗಮಿಸಿದ್ದಾರೆ. 9 ದಿನಗಳ ಕಾಲ ಹನುಮ ಮಾಲೆಯನ್ನು ಧರಿಸಿದ್ದ ರಾಜು, ಬಹಿರಂಗವಾಗಿ ತಾನು ಲಾರೆನ್ಸ್ ಬಿಷ್ಣೋಯಿಯವರ ಅಭಿಮಾನಿ ಎಂದು ಘೋಷಿಸಿಕೊಂಡಿದ್ದಾರೆ.
ಲಾರೆನ್ಸ್ ಬಿಷ್ಣೋಯಿ ಅವರಿಂದ ದೇಶ ಉಳಿಯುತ್ತದೆ" ಎಂಬ ಮನೋಭಾವ ತನಗಿದೆ ಎಂದು ರಾಜು ಹೇಳಿಕೊಂಡಿರುವುದು ಭಕ್ತಾದಿಗಳು ಮತ್ತು ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಯಾರು ಲಾರೆನ್ಸ್ ಬಿಷ್ಣೋಯ್?
ಲಾರೆನ್ಸ್ ಬಿಷ್ಣೋಯಿ ಭಾರತದ ಒಬ್ಬ ನಟೋರಿಯಸ್ ಗ್ಯಾಂಗ್ಸ್ಟರ್. ಹರಿಯಾಣ ಮೂಲದವನಾದ ಲಾರೆನ್ಸ್, ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದರೂ, ವಿದ್ಯಾರ್ಥಿ ರಾಜಕೀಯದ ದಿನಗಳಿಂದಲೇ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡವನು. ಇವನ ಮೇಲೆ ಕೊಲೆ, ಸುಲಿಗೆ ಸೇರಿದಂತೆ ನೂರಾರು ಕ್ರಿಮಿನಲ್ ಪ್ರಕರಣಗಳಿವೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಇವನ ಹೆಸರು ಕೇಳಿಬಂದಿತ್ತು, ಮತ್ತು ಇತ್ತೀಚೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿದ್ದರಿಂದ ಹಾಗೂ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಿಂದ ಹೆಚ್ಚು ಸುದ್ದಿಯಲ್ಲಿದ್ದಾರೆ.
ಪ್ರಸ್ತುತ ಜೈಲಿನಲ್ಲಿದ್ದರೂ ಸಹ ಇವರು ತಮ್ಮ ಸಹಚರರ ಮೂಲಕ ತಮ್ಮ ಅಪರಾಧ ಜಾಲವನ್ನು ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗುತ್ತದೆ. ಮೇಲಾಗಿ ಹಿಂದೂ ಧರ್ಮದ ವಿರುದ್ಧ ಹೇಳಿಕೆ ನೀಡುವ, ದೇಶ ವಿರೋಧಿ ಹೇಳಿಕೆ ನೀಡುವವರಿಗೆ ಬೆದರಿಕೆ ಹಾಕುವುದರಿಂ ಒಂದಷ್ಟು ಹಿಂದೂ ಯುವಕರಿಗೆ ರೋಲ್ ಮಾಡೆಲ್ ಆಗಿ ಕಾಣಿಸಿಕೊಂಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ