ಹೊಸ ವರ್ಷಾಚರಣೆಗೆ ಪ್ರವಾಸಿ ತಾಣಗಳು ಬುಕಿಂಗ್‌ ಶುರು!

Published : Dec 10, 2023, 10:56 AM IST
ಹೊಸ ವರ್ಷಾಚರಣೆಗೆ ಪ್ರವಾಸಿ ತಾಣಗಳು ಬುಕಿಂಗ್‌ ಶುರು!

ಸಾರಾಂಶ

ಹೊಸ ವರ್ಷದ ಹರ್ಷಾಚರಣೆ, ಕ್ರಿಸ್ ಮಸ್ ರಜೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭಾರಿ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಈಗಾಗಲೆ ಹೊಟೇಲ್, ರೆಸಾರ್ಟ್‌ಗಳು ಬುಕಿಂಗ್ ಆಗಿವೆ.

ಕಾರವಾರ (ಡಿ10) :  ಹೊಸ ವರ್ಷದ ಹರ್ಷಾಚರಣೆ, ಕ್ರಿಸ್ ಮಸ್ ರಜೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭಾರಿ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಈಗಾಗಲೆ ಹೊಟೇಲ್, ರೆಸಾರ್ಟ್‌ಗಳು ಬುಕಿಂಗ್ ಆಗಿವೆ.

ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಸಾಕಷ್ಟಿವೆ. ಆದರೆ ಗೋಕರ್ಣ ಹಾಗೂ ಮುರ್ಡೇಶ್ವರಕ್ಕೆ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಅದರಲ್ಲೂ ವೀಕೆಂಡ್ ಹಾಗೂ ಸಾಲು ಸಾಲಾಗಿ ರಜೆ ಬಂದಲ್ಲಿ ಪ್ರವಾಸಿಗರಿಂದ ಈ ಎರಡು ತಾಣಗಳು ಭರ್ತಿಯಾಗುತ್ತವೆ. ಈ ಬಾರಿ ಹೊಸ ವರ್ಷಾಚರಣೆಗೆ ಜಿಲ್ಲೆಯ ಪ್ರವಾಸಿ ತಾಣಗಳು ಭರ್ತಿಯಾಗುವ ನಿರೀಕ್ಷೆ ಇದೆ. ಏಕೆಂದರೆ ಈಗಾಗಲೆ ಗೋಕರ್ಣ ಹಾಗೂ ಮುರ್ಡೇಶ್ವರಗಳಲ್ಲಿ ಹೊಟೇಲ್, ರೆಸಾರ್ಟ್, ಕಾಟೇಜಗಳ ಮುಂಗಡ ಬುಕಿಂಗ್ ಭರದಿಂದ ನಡೆಯುತ್ತಿವೆ. ಮುರ್ಡೇಶ್ವರದಲ್ಲಿ ಸ್ಕೂಬಾ ಡೈವಿಂಗ್ ಪ್ರಮುಖ ಆಕರ್ಷಣೆಯಾಗಿದೆ. ಅದರೊಟ್ಟಿಗೆ ಈಚೆಗೆ ಪ್ಯಾರಾಸೇಲಿಂಗ್ ಹಾಗೂ ಸೀ ವಾಕ್ (ತೇಲುವ ಜೆಟ್ಟಿ) ಕೂಡ ಸೇರ್ಪಡೆಯಾಗಿದೆ. ಮುರ್ಡೇಶ್ವರದ ಓಶಿಯನ್ ಅಡ್ವೆಂಚರ್ಸ್ ಈ ಪ್ರವಾಸಿ ಆಕರ್ಷಣೆಯನ್ನು ಆರಂಭಿಸಿದೆ. ಪ್ರವಾಸಿಗರಿಂದ ಈಗಾಗಲೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

2024 ನಿಮಗೆ ಹೇಗಿರುತ್ತೆ? ಸಂಖ್ಯಾಶಾಸ್ತ್ರ ಹೀಗೆ ಹೇಳ್ತಿದೆ ನೋಡಿ

ಗೋಕರ್ಣದ ಮುಖ್ಯ ಕಡಲತೀರ, ಓಂಬೀಚ್, ಕುಡ್ಲೆ ಬೀಚ್, ಹಾಫ್ ಮೂನ್ ಬೀಚ್‌ಗಳಲ್ಲಿ ಜನಸಂದಣಿ ಆಗುವ ನಿರೀಕ್ಷೆ ಇದೆ. ದಾಂಡೇಲಿ, ಜೋಯಿಡಾದ ಕಾಡು, ರಿವರ್ ರ್‍ಯಾಪ್ಟಿಂಗ್ ಕೂಡ ಪ್ರವಾಸಿಗರಿಗೆ ಪ್ರಮುಖ ಆಕರ್ಷಣೆಯಾಗಿದೆ.

ಡಿ. 23ರಿಂದ ಸಾಲಾಗಿ ರಜೆ ಬಂದಿರುವುದರಿಂದ ಪ್ರವಾಸಿಗರು 23ರಿಂದಲೆ ಬುಕಿಂಗ್ ಮಾಡುತ್ತಿದ್ದಾರೆ. ಕ್ರಿಸ್ ಮಸ್ ರಜೆ ಬಂದಿರುವುದು ಪ್ರವಾಸಿಗರ ಸಂಖ್ಯೆ ಇನ್ನಷ್ಟು ಹೆಚ್ಚಲು ಕಾರಣವಾಗಲಿದೆ. ಗೋವಾದಲ್ಲಿ ರೆಸಾರ್ಟ್‌, ಹೊಟೇಲ್‌ಗಳು ಸಿಗದೆ ಇದ್ದವರು ಜಿಲ್ಲೆಯಲ್ಲಿ ವಾಸ್ತವ್ಯ ಮಾಡುತ್ತಾರೆ. ಈ ಕಾರಣದಿಂದಲೂ ಜಿಲ್ಲೆಯಲ್ಲಿ ಜನಜಂಗುಳಿ ಹೆಚ್ಚಲಿದೆ.

ಹೊಸವರ್ಷಕ್ಕೆ ಕೆಲವೇ ದಿನಗಳು ಬಾಕಿ; ಬಿಬಿಎಂಪಿ ಮುಚ್ಚಿಸಿದ್ದ ಅನಧಿಕೃತ ಪಬ್ ತೆರೆಯಲು ರಾಜಕೀಯ ಒತ್ತಡ?

ದಾಂಡೇಲಿ, ಯಾಣ, ವಿಭೂತಿ ಜಲಪಾತ, ಮಾಗೋಡ, ಉಂಚಳ್ಳಿ ಫಾಲ್ಸ್‌ಗಳು, ಸಹಸ್ರಲಿಂಗ, ಉಳವಿ, ಸಿಂಥೇರಿ ರಾಕ್ಸ್ ಹೀಗೆ ವಿವಿಧ ಪ್ರವಾಸಿ ತಾಣಗಳಲ್ಲೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಹೊಸ ವರ್ಷಾಚರಣೆಗೆ ಪ್ರವಾಸಿ ತಾಣಗಳು ಸಜ್ಜಾಗುತ್ತಿವೆ. ಪ್ರವಾಸಿಗರಿಗಾಗಿ ವಿವಿಧ ರೀತಿಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ.

ಸ್ಕೂಬಾ ಡೈವಿಂಗ್‌ಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬುಕಿಂಗ್ ಮಾಡುತ್ತಿದ್ದಾರೆ. ಪ್ಯಾರಾಸೇಲಿಂಗ್ ಹಾಗೂ ಸೀ ವಾಕ್ ಪ್ರವಾಸಿಗರನ್ನು ಆಕರ್ಷಿಸುತ್ತಿದೆ ನೇತ್ರಾಣಿ ಅಡ್ವೆಂಚರ್ಸ್‌ ಗಣೇಶ ಹರಿಕಂತ್ರ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!