ಬೆಳಗಾವಿ: ಈದ್‌ ಮೆರಣಿಗೆಯಲ್ಲಿ ಹರ ಹರಮಹಾದೇವ, ಅಲ್ಲಾಹು ಅಕ್ಬರ್‌ ಘೋಷಣೆ!

Published : Sep 23, 2024, 10:08 AM IST
ಬೆಳಗಾವಿ: ಈದ್‌ ಮೆರಣಿಗೆಯಲ್ಲಿ ಹರ ಹರಮಹಾದೇವ, ಅಲ್ಲಾಹು ಅಕ್ಬರ್‌ ಘೋಷಣೆ!

ಸಾರಾಂಶ

ಬೆಳಗಾವಿಯಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಹರ ಹರ ಮಹಾದೇವ ಘೋಷಣೆ ಕೇಳುತ್ತಿದ್ದಂತೆಯೇ ಮುಸ್ಲಿಂ ಯುವಕರು ಅಲ್ಲಾಹು ಅಕ್ಟರ್‌ ಎಂದು ಪ್ರತಿಯಾಗಿ ಘೋಷಣೆ ಕೂಗಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಬೆಳಗಾವಿ (ಸೆ.23): ಬೆಳಗಾವಿಯಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಹರ ಹರ ಮಹಾದೇವ ಘೋಷಣೆ ಕೇಳುತ್ತಿದ್ದಂತೆಯೇ ಮುಸ್ಲಿಂ ಯುವಕರು ಅಲ್ಲಾಹು ಅಕ್ಟರ್‌ ಎಂದು ಪ್ರತಿಯಾಗಿ ಘೋಷಣೆ ಕೂಗಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಬೆಳಗಾವಿಯ ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆಗೆ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ವಕೀಲರು ಕಾಲೇಜು ರಸ್ತೆ ಮಾರ್ಗವಾಗಿ ತೆರಳುತ್ತಿದ್ದರು. ಈ ವೇಳೆ ಈದ್‌ ಮಿಲಾದ್ ಮೆರವಣಿಗೆಯಲ್ಲಿ ಟಿಪ್ಪು ಸುಲ್ತಾನ ಫೋಟೋ ಪ್ರದರ್ಶಿಸಿದರು. ಆಗ ವಕೀಲರು ಹರ ಹರ ಮಹಾದೇವ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಮೆರವಣಿಗೆಯಲ್ಲಿದ್ದ ಮುಸ್ಲಿಂ ಯುವಕರು ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿದರು. ಇದರಿಂದಾಗಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳದಲ್ಲಿದ್ದ ಪೊಲೀಸರು ಮುಸ್ಲಿಂ ಯುವಕರನ್ನು ಸಮಾಧಾನಗೊಳಿಸಿ ಅಲ್ಲಿಂದ ಮೆರ‍ವಣಿಗೆಯನ್ನು ಮುಂದೆ ಸಾಗಿಸಿದರು.

 

ಗಣೇಶೋತ್ಸವದಲ್ಲಿ 'ಡಿಜೆ'ಗೆ ಅವಕಾಶ ನಿರಾಕರಣೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಪಂಚಮಸಾಲಿ ವಕೀಲರ ಸಮಾವೇಶದ ನಿರ್ಣಯ:2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮಾಜದಿಂದ ಏಳನೇ ಹಂತದ ಹೋರಾಟಕ್ಕೆ ರಾಜ್ಯ ಪಂಚಮಸಾಲಿ ವಕೀಲರ ಮಹಾಪರಿಷತ್‌ ಸಮಾವೇಶದಲ್ಲಿ ನಿರ್ಣಯಗೊಳ್ಳಲಾಗಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯಸ್ವಾಮೀಜಿ ಅವರು ಸಮಾವೇಶದ ನಿರ್ಣಯಗಳನ್ನು ಘೋಷಿಸಿದರು. 

ಬೆಂಕಿ ಹಚ್ಚೋದು ಬಿಟ್ರೆ ಅವನಿಗೆ ಏನೂ ಗೊತ್ತಿಲ್ಲ..' ಪ್ರಮೋದ್ ಮುತಾಲಿಕ್ ವಿರುದ್ಧ ಏಕವಚನದಲ್ಲಿ ಹರಿಹಾಯ್ದ ಶಾಸಕ ಅಬ್ಬಯ್ಯ!

ಹಿಂದುಳಿದ ‌ಆಯೋಗದಿಂದ ಪೂರ್ಣಪ್ರಮಾಣದ ‌ವರದಿ ಪಡೆದು 2ಎ ಮೀಸಲಾತಿ ನೀಡಬೇಕು. ಪಂಚಮಸಾಲಿ ‌ಸೇರಿ ಎಲ್ಲ ಲಿಂಗಾಯತರನ್ನು ಕೇಂದ್ರದ ಒಬಿಸಿಗೆ ಸೇರ್ಪಡೆ ಕ್ರಮ ವಹಿಸಬೇಕು. ಸಂಪುಟ ‌ಸಭೆಯಲ್ಲಿ ನಿರ್ಣಯಿಸಿ ಕೇಂದ್ರ ಸರ್ಕಾರಕ್ಕೆ ಈ ನಿಟ್ಟಿನಲ್ಲಿ ‌ಕ್ರಮವಹಿಸಬೇಕು. ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನದೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲವಾದರೆ ಚಳಿಗಾಲ ಅಧಿವೇಶನದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!