ಚಿಕ್ಕವಯಸ್ಸಿನಲ್ಲೇ ಸಾಧನೆ ಮಾಡಿದ ಬಾಲಕಿ; ವಿಶ್ವ ಚೆಸ್ ಚಾಂಪಿಯನ್ ಗೆದ್ದ ಹಾಸನದ ಕುವರಿ ಚಾರ್ವಿ!

Published : Jan 20, 2024, 11:54 PM IST
ಚಿಕ್ಕವಯಸ್ಸಿನಲ್ಲೇ ಸಾಧನೆ ಮಾಡಿದ ಬಾಲಕಿ; ವಿಶ್ವ ಚೆಸ್ ಚಾಂಪಿಯನ್ ಗೆದ್ದ ಹಾಸನದ ಕುವರಿ ಚಾರ್ವಿ!

ಸಾರಾಂಶ

ಹಾಸನ ಮೂಲದ ಕು.ಚಾರ್ವಿ ಎ. ಅವರು 8 ವರ್ಷದೊಳಗಿನವರ ವಿಶ್ವ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ವಿಜಯಶಾಲಿಯಾಗಿ  “ವಿಶ್ವ ಚೆಸ್ ಚಾಂಪಿಯನ್” ಪದಕ ಗೆದ್ದಿದ್ದಾರೆ. ಅವರು ಜಾರ್ಜಿಯಾದ ಬಟುಮಿಯಲ್ಲಿ ನಡೆದ ಪ್ರತಿಷ್ಠಿತ “2022 ಚಾಂಪಿಯನ್ ಶಿಪ್” ನಲ್ಲಿ ಮೊದಲ ಸ್ಥಾನದಲ್ಲಿ ಗೆದ್ದು  ಜಾಗತಿಕ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. 

ಹಾಸನ (ಜ.20) ಹಾಸನ ಮೂಲದ ಕು.ಚಾರ್ವಿ ಎ. ಅವರು 8 ವರ್ಷದೊಳಗಿನವರ ವಿಶ್ವ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ವಿಜಯಶಾಲಿಯಾಗಿ  “ವಿಶ್ವ ಚೆಸ್ ಚಾಂಪಿಯನ್” ಪದಕ ಗೆದ್ದಿದ್ದಾರೆ. ಅವರು ಜಾರ್ಜಿಯಾದ ಬಟುಮಿಯಲ್ಲಿ ನಡೆದ ಪ್ರತಿಷ್ಠಿತ “2022 ಚಾಂಪಿಯನ್ ಶಿಪ್” ನಲ್ಲಿ ಮೊದಲ ಸ್ಥಾನದಲ್ಲಿ ಗೆದ್ದು  ಜಾಗತಿಕ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. 

ಈ ಹಿಂದೆ, ಶ್ರೀಲಂಕಾದಲ್ಲಿ ನಡೆದ 2022 ರ ಚಾಂಪಿಯನ್ಶಿಪ್ನಲ್ಲಿ ಕು.ಚಾರ್ವಿ ಯು-8 ಕಾಮನ್ವೆಲ್ತ್ ಚೆಸ್ ಚಾಂಪಿಯನ್ ಪ್ರಶಸ್ತಿಯನ್ನು ಸಹ ಪಡೆದುಕೊಂಡಿದ್ದಾರೆ. 2022 ರಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ನಡೆದ ಏಷ್ಯನ್ ಯೂತ್ ಚೆಸ್ ಚಾಂಪಿಯನ್ಶಿಪ್ನಲ್ಲಿ ಐದು ಚಿನ್ನದ ಪದಕಗಳನ್ನು ಮತ್ತು ಒಂದು ಬೆಳ್ಳಿಯನ್ನು ಗೆದ್ದಿದ್ದಾರೆ.

ಒಂದೇ ಬಾರಿಗೆ 21 ನೂತನ ಉತ್ಪನ್ನಗಳು ಮಾರುಕಟ್ಟೆಗೆ ಬಿಡುಗಡೆ, KSDL ಸಾಧನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

2021 ಮತ್ತು 2022 ರಲ್ಲಿ ನಡೆದ ವಿವಿಧ ಚಾಂಪಿಯನ್ಶಿಪ್ಗಳಲ್ಲಿನ ಅಂಡರ್-7, ಅಂಡರ್-8, ಮತ್ತು ಅಂಡರ್-10 ರಾಷ್ಟ್ರೀಯ ಚೆಸ್ ಚಾಂಪಿಯನ್ ಆಗಿ ಅವರು ಹೊರಹೊಮ್ಮಿದ್ದಲ್ಲದೆ, ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿಯೂ ತಮ್ಮ ಪ್ರಾಬಲ್ಯವನ್ನು ಸಣ್ಣ ಪ್ರಾಯದಲ್ಲೇ ಸಾಬೀತುಪಡಿಸಿದ್ದಾರೆ.

ಅವರು ಪ್ರಸ್ತುತ ಒಟ್ಟು ನಾಲ್ಕು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಮತ್ತು ಮೂರು ರಾಷ್ಟ್ರೀಯ ಪ್ರಶಸ್ತಿಗಳನ್ನು ಹೊಂದಿದ್ದಾರೆ, ಇದು ಗಮನಾರ್ಹ ಸಾಧನೆಯಾಗಿದೆ. 2022 ರಲ್ಲಿ, ಅವರು ಆರು ಪ್ರಶಸ್ತಿಗಳನ್ನು ಗಳಿಸಿದ್ದಲ್ಲದೆ, ಕ್ರೀಡಾ ಜಗತ್ತಿನಲ್ಲಿ ದಾಖಲೆಯನ್ನು ಸ್ಥಾಪಿಸಿದರು. ಇದಲ್ಲದೆ, ಅವರು ಪ್ರಸ್ತುತ ಅಂಡರ್-8 ಮತ್ತು ಅಂಡರ್-10 ನ ಬಾಲಕಿಯರ ವಿಭಾಗದಲ್ಲಿ ಭಾರತದ ನಂ. 1 ಶ್ರೇಯಾಂಕದ ಚೆಸ್ ಆಟಗಾರ್ತಿಯಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದ ಚಾರ್ವಿ ಸದ್ಯ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ.

ಈ ಬಾರಿ ಅಭಿಮಾನಿಗಳೊಂದಿಗೆ ಬರ್ತಡೇ ಆಚರಿಸಿಕೊಳ್ಳಲ್ಲ ಎಂದ ನಿಖಿಲ್ ಕುಮಾರಸ್ವಾಮಿ! ಕಾರಣ ಇಲ್ಲಿದೆ

ವರದಿ: ಕೆ.ಎಂ.ಹರೀಶ್, ಏಷ್ಯಾನೆಟ್ ಸುವರ್ಣ ನ್ಯೂಸ್, ಹಾಸನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೊಸದಾಗಿ 545 ಪಿಎಸ್‌ಐ ಶೀಘ್ರ ಸೇವೆಗೆ ನಿಯೋಜನೆ: ಗೃಹ ಸಚಿವ ಪರಮೇಶ್ವರ್‌
Karnataka News Live: ಮಾಟಗಾತಿಯ ಮಾತು ಕೇಳಿ ಗಂಡು ಮಗುವಿಗಾಗಿ ಪತ್ನಿಯ ತಲೆ ಕೂದಲು ಕತ್ತರಿಸಿದ ಪತಿ