ಮುನಿರತ್ನ ವಿರುದ್ಧ ಎಸ್‌ಐಟಿ ತನಿಖೆ; ಶಿವಲಿಂಗೇಗೌಡ ಆಡಿಯೋ ಪ್ರಕರಣದಲ್ಲಿ ಏಕಿಲ್ಲ? ಬಿಜೆಪಿ ಮುಖಂಡ ಕಿಡಿ

Published : Dec 17, 2024, 11:10 PM IST
ಮುನಿರತ್ನ ವಿರುದ್ಧ ಎಸ್‌ಐಟಿ ತನಿಖೆ; ಶಿವಲಿಂಗೇಗೌಡ ಆಡಿಯೋ ಪ್ರಕರಣದಲ್ಲಿ ಏಕಿಲ್ಲ? ಬಿಜೆಪಿ ಮುಖಂಡ ಕಿಡಿ

ಸಾರಾಂಶ

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ರಚಿಸಿದ ಸರ್ಕಾರ, ಶಿವಲಿಂಗೇಗೌಡ ಹಣ ಹಂಚಿಕೆ ಆಡಿಯೋ ಬಗ್ಗೆ ಏಕೆ ಮೌನವಾಗಿದೆ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಪ್ರಶ್ನಿಸಿದ್ದಾರೆ. ಮತದಾರರಿಗೆ ಹಣ ಹಂಚಿಕೆ ಬಗ್ಗೆ ಶಿವಲಿಂಗೇಗೌಡ ಮಾತನಾಡಿರುವ ಆಡಿಯೋ ಬಗ್ಗೆಯೂ ಎಸ್‌ಐಟಿ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.

ವರದಿ: ಕೆ.ಎಂ.ಹರೀಶ್, ಏಷ್ಯಾನೆಟ್ ಸುವರ್ಣ ನ್ಯೂಸ್, ಹಾಸನ

ಹಾಸನ (ಡಿ.17): ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರು ಎಂದು ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ, ಅರಸೀಕೆರೆ ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಅವರು ಕಳೆದ ಲೋಕಸಭೆ ಚುನಾವಣೆ ವೇಳೆ ಹಣದ ಹಂಚಿಕೆ ಬಗ್ಗೆ ಆಪ್ತರ ಜೊತೆ ಮಾತನಾಡಿದ್ದ ಆಡಿಯೋ ಎಲ್ಲೆಡೆ ವೈರಲ್ ಆಗಿದ್ದರೂ, ಆ ಬಗ್ಗೆಯೂ ಎಸ್‌ಐಟಿ ರಚಿಸಿ ತನಿಖೆ ಮಾಡುವುದಿರಲಿ, ಸರ್ಕಾರ  ಏಕೆ ತುಟಿ ಬಿಚ್ಚುತ್ತಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಪ್ರಶ್ನಿಸಿದ್ದಾರೆ.

ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರು ಮುನಿರತ್ನ ಸದನದಲ್ಲಿ ಕೂರಬಾರದು ಎಂದು ಮಾತನಾಡಿದ್ದಾರೆ. ಹೊರಗೆ ಕಳಿಸದಿದ್ದರೆ ಧರಣಿ ಮಾಡುವೆ ಎಂದಿದ್ದಾರೆ. ಮುನಿರತ್ನ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಅಂತೆಯೇ ಆಡಳಿತ ಪಕ್ಷದ ಶಾಸಕರು ಆಡಿರುವ ಮಾತಿನ ಬಗ್ಗೆ ಏಕೆ ಯಾವುದೇ ತನಿಖೆ ನಡೆಯುತ್ತಿಲ್ಲ ಎಂದು ಕೇಳಿದರು. ಶಿವಲಿಂಗೇಗೌಡ ಅವರು, ಮತದಾರರಿಗೆ ಕೋಟಿ ಕೋಟಿ ಹಣ ಹಂಚಿಕೆ ಬಗ್ಗೆ ಮಾತನಾಡುವ ವೇಳೆ ಸಿಎ, ಡಿಸಿಎಂ ಹೆಸರನ್ನೂ ಪ್ರಸ್ತಾಪ ಮಾಡಿದ್ದಾರೆ.ಕೂಡಲೇ ಎಸ್‌ಐಟಿ ರಚಿಸಿ ಕೆ.ಎಂ.ಶಿವಲಿಂಗೇಗೌಡ ಆಡಿಯೋ ಪ್ರಕರಣವನ್ನೂ ತನಿಖೆಗೆ ಒಪ್ಪಿಸಬೇಕಲ್ಲವೇ ಎಂದು ಆಗ್ರಹಿಸಿದರು.

'ನನ್ನ ಜೀವ ಹೋದ್ರೂ ಮುಡಾ ಹಗರಣ ತಾರ್ಕಿಕ ಅಂತ್ಯಕ್ಕೆ ತರುತ್ತೇನೆ'; ಸರ್ಕಾರದ ವಿರುದ್ಧ ತೊಡೆ ತಟ್ಟಿದ ಸ್ನೇಹಮಯಿ ಕೃಷ್ಣ!

ನಾನು ಚುನಾವಣಾ ಆಯೋಗ ಸೇರಿದಂತೆ ಎಲ್ಲರಿಗೂ ದೂರು ನೀಡಿದ್ದೇನೆ. ಆದರೂ ಕೆಎಂಶಿ ವಿರುದ್ಧ ಇಲ್ಲಿಯ ತನಕ ಕ್ರಮ ಕೈಗೊಂಡಿಲ್ಲ ಏಕೆ. ಎಸ್‌ಐಟಿಯನ್ನು ವಿಪಕ್ಷ ನಾಯಕರನ್ನು ಜೈಲಿಗೆ ಕಳಿಸಿ, ನಿಮ್ಮ ಮನೆ ಜೀತಕ್ಕೆ ಬಳಸಿಕೊಳ್ಳುತ್ತಿದ್ದಿರಾ, ನೀವೇನೂ ಸಾಚಾಗಳಾ ಎಂದು ವಾಗ್ದಾಳಿ ನಡೆಸಿದರು. ರಾಮನಗರ ಶಾಸಕನ ಅಶ್ಲೀಲ ವಿಡಿಯೋ ಪ್ರಕರಣ ಏನಾಯ್ತು, ನೀವು ಮಾಡಬಾರದ್ದನ್ನು ಮಾಡಿದರೂ ಏನೂ ಶಿಕ್ಷೆ ಇಲ್ಲವೇ ಎಂದರು. 

ಸ್ನೇಹಮಯಿ ಕೃಷ್ಣ ನಾಪತ್ತೆ: ಸಿಎಂ ವಿರುದ್ಧ ದೂರು ನೀಡಿದ್ದಕ್ಕೆ ಸೇಡು ತೀರಿಸಿಕೊಂಡಿತಾ ಸರ್ಕಾರ?

ಹೊಳೆನರಸೀಪುರ ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಕಾರ್ಯಒತ್ತಡದ ಮಾತನಾಡಿದರೆ ಅವರಿಗೆ ನೋಟಿಸ್ ಕೊಡುತ್ತೀರಿ,ವಾಲ್ಮೀಕಿ ನಿಗಮ ಹಗರಣದಲ್ಲಿ ಅಧಿಕಾರಿಗಳು ಸೂಸೈಡ್ ಮಾಡಿಕೊಂಡಿದ್ದಾರೆ. ಇನ್ನು ಎಷ್ಟು ಜನರ ಬಲಿ ಪಡೆಯುತ್ತೀರಿ ಎಂದು ಕೇಳಿದ ಅವರು, ಕೂಡಲೇ ಶಿವಲಿಂಗೇಗೌಡ ಆಡಿಯೋ ಬಗ್ಗೆ ಶೀಘ್ರ ತನಿಖೆ ನಡೆಸಿ ಎಂದು ಆಗ್ರಹಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ