ಹಾಸನ : ಮದುವೆ ಮಾಡಿಸಲಿಲ್ಲ ಎಂದು ಹೆತ್ತಮ್ಮನನ್ನೇ ಕೊಂದ ಪಾಪಿ ಮಗ

Published : Apr 01, 2026, 03:35 PM IST
son killed mother in Hassan

ಸಾರಾಂಶ

ಮದುವೆ ಮಾಡಿಸಲಿಲ್ಲ ಎಂಬ ಕಾರಣಕ್ಕೆ ಮಾನಸಿಕ ಅಸ್ವಸ್ಥನಾಗಿದ್ದ ಮಗನೊಬ್ಬ ತನ್ನ ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಜಗಳದ ವೇಳೆ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದಿದ್ದು, ಚಿಕಿತ್ಸೆ ಫಲಕಾರಿಯಾಗದೆ ತಾಯಿ ಸಾವನ್ನಪ್ಪಿದ್ದಾರೆ.

ತನಗೆ ಮದುವೆ ಮಾಡಿಸಲಿಲ್ಲ ಎಂದು ಅಮ್ಮನನ್ನೇ ಕೊಂದ ಮಗ

ಹಾಸನ: ತನಗೆ ಮದುವೆ ಮಾಡಿಸಲಿಲ್ಲ ಎಂದು ಮಗನೋರ್ವ ತನಗೆ ಜನ್ಮ ನೀಡಿದ ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿದಂತಹ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. 65 ವರ್ಷದ ಗಂಗಮ್ಮ ಕೊಲೆಯಾದ ಮಹಿಳೆ 40 ವರ್ಷದ ಉಮಾಶಂಕರ್ ಕೊಲೆ ಮಾಡಿದ ಪಾಪಿ ಮಗ.

ಅಪಘಾತದಿಂದಾಗಿ ತಲೆಗೆ ಪೆಟ್ಟಾಗಿತ್ತು:

ಮಗ ಉಮಾಶಂಕರ್‌ಗೆ ಕಳೆದ‌ ಎರಡು ವರ್ಷದ‌ ಹಿಂದೆ ಅಪಘಾತವಾಗಿತ್ತು ಅಪಘಾತದ ಬಳಿಕ ಆತ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ. ಕಳೆದ ಒಂದು ವರ್ಷದ ಹಿಂದೆ ಕುಂಭಮೇಳಕ್ಕೆ ತೆರಳಿ ವಾಪಾಸ್ ಆಗುವಾಗ ಅಪಘಾತದಲ್ಲಿ ಉಮಾಶಂಕರ್ ತಲೆಗೆ ಪೆಟ್ಟು ಬಿದ್ದ ನಂತರ ಉಮಾಶಂಕರ್ ಒಮ್ಮೊಮ್ಮೆ ಬುದ್ಧಿಭ್ರಮಣೆಯಾದವನಂತೆ ವರ್ತಿಸುತ್ತಿದ್ದ. ಪದೇ ಪದೇ ಮದುವೆ ಮಾಡಿಸುವಂತೆ ತಾಯಿ ಜೊತೆ ಜಗಳವಾಡುತ್ತಿದ್ದ. ಆದರೆ ಸರಿ ಇರುವವರಿಗೆ ಇಂದಿನ ಕಾಲದಲ್ಲಿ ಹುಡುಗಿ ಸಿಗಲ್ಲ, ಹೀಗಿರುವಾಗ ಬುದ್ಧಿಭ್ರಮಣೆಯಾದವರಿಗೆ ಯಾರು ಹೆಣ್ಣು ಕೊಡುತ್ತಾರೆ.

ಇದನ್ನೂ ಓದಿ: ಎಕ್ಸ್‌ಪ್ರೆಸ್ ರೈಲಿನ ಶೌಚಾಲಯದ ಬಾಗಿಲು ತೆರೆದ ಪ್ರಯಾಣಿಕನಿಗೆ ಆಘಾತ: ನಡುಗುತ್ತಾ ಅಳುತ್ತಿತ್ತು ನವಜಾತ ಶಿಶು

ಹೀಗಿರುವಾಗ ಮಾ.26 ರಂದು ಮನೆಯಲ್ಲಿ ತಾಯಿ ಗಂಗಮ್ಮನ ಜೊತೆ ಮಗ ಉಮಾಶಂಕರ್ ತನಗೆ ಮದುವೆ ಮಾಡುವಂತೆ ಮತ್ತೆ ಜಗಳ ತೆಗೆದಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿದ್ದು, ಮೊದಲು ಉಮಾಶಂಕರ ಕೈಯಿಂದ ತಾಯಿ ಗಂಗಮ್ಮನ ತಲೆಗೆ ಬಲವಾಗಿ ಹೊಡೆದಿದ್ದಾನೆ. ಹೊಡೆತದ ರಭಸಕ್ಕೆ ಗಂಗಮ್ಮಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ನಂತರ ಆರೋಪಿ ಉಮಾಶಂಕರ್ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಗಂಗಮ್ಮ ಅವರನ್ನು ಹಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಾ.30ರ ಮಧ್ಯರಾತ್ರಿ ಗಂಗಮ್ಮ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ರವಣಬೆಳಗೊಳ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ: ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟೋಲ್ ದರ ಹೆಚ್ಚಳ ಟೋಲ್‌ಗಳಲ್ಲಿ ನಗದು ಸ್ವೀಕಾರ ಇಲ್ಲ: ಯುಪಿಐ ಮೂಲಕವೇ ಪೇಮೆಂಟ್
ಸಿದ್ದಗಂಗಾ ಮಠದ ವೇದಿಕೆಯಲ್ಲಿ ಪ್ರೊಟೊಕಾಲ್ ಗೊಂದಲ, ಸಿದ್ದಲಿಂಗ ಶ್ರೀಗಳಿಗೆ ವೇದಿಕೆಯಲ್ಲಿ ಕೊನೆಯ ಸೀಟು! ಆಗಿದ್ದೇನು?