
ಮಂಗಳೂರು [ನ.09] : ಮುಜರಾಯಿ ಇಲಾಖೆ ರಾಜ್ಯದ 100 ಎ ದರ್ಜೆಯ ದೇವಸ್ಥಾನಗಳಲ್ಲಿ ಸರ್ಕಾರ ವತಿಯಿಂದ ಏರ್ಪಡಿಸುವ ಸಾಮೂಹಿಕ ವಿವಾಹ ವೇಳೆ ನೀಡುವ ಮಾಂಗಲ್ಯಕ್ಕೆ ಹಟ್ಟಿ ಗೋಲ್ಡ್ನಿಂದ ಚಿನ್ನ ಖರೀದಿಸಲು ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ನಡೆಸುವ ಸಾಮೂಹಿಕ ವಿವಾಹದ ವೇಳೆ ವಧುವಿಗೆ ಸುಮಾರು 40 ಸಾವಿರ ರು. ವೆಚ್ಚದಲ್ಲಿ 8 ಗ್ರಾಂ ಚಿನ್ನವನ್ನು ನೀಡಲು ತೀರ್ಮಾನಿಸಲಾಗಿದೆ. ಈ ಚಿನ್ನ ಹಟ್ಟಿ ಗೋಲ್ಡ್ನಲ್ಲಿ ಖರೀದಿಸಲು ಯೋಚಿಸಲಾಗುತ್ತಿದೆ ಎಂದರು.
ಡಿಕೆಶಿ ಬಿಡುಗಡೆಯಿಂದ ಎಲೆಕ್ಷನ್ ಮೇಲೆ ನೋ ಎಫೆಕ್ಟ್ ಎಂದ ಸಚಿವ...
ವಧುವಿಗೆ 40 ಸಾವಿರ, ವರನಿಗೆ 10 ಸಾವಿರ ಹಾಗೂ ಮದುವೆಗೆ ಖರ್ಚಿಗೆ 5 ಸಾವಿರ ಸೇರಿದಂತೆ ಒಂದು ಜೋಡಿಗೆ 55 ಸಾವಿರ ವೆಚ್ಚವನ್ನು ಸರ್ಕಾ ರದ ವತಿಯಿಂದ ಮಾಡಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ