
ಮೈಸೂರು (ಸೆ.15):ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರದ ಪರವಾಗಿ ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರಿಗೆ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಭಾನುವಾರ ಅಧಿಕೃತವಾಗಿ ಆಹ್ವಾನ ನೀಡಿದರು. ಸರ್ಕಾರದಿಂದ ಪ್ರತಿ ವರ್ಷ ನೀಡಲಾಗುವ ಗೌರವಧನದ ಚೆಕ್ ನೀಡಿದರು.
ಮೈಸೂರು ಅರಮನೆಯಲ್ಲಿರುವ ನಿವಾಸದಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾದ ಸಚಿವರು, ಸಾಂಪ್ರದಾಯಿಕವಾಗಿ ಫಲ ತಾಂಬೂಲ ಹಾಗೂ ಆಮಂತ್ರಣ ಪತ್ರಿಕೆ ನೀಡಿ ದಸರಾ ಮಹೋತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸಿದರು.
ದಸರಾ ಮಹೋತ್ಸವಕ್ಕೆ ರಾಜವಂಶಸ್ಥರನ್ನು ಆಹ್ವಾನಿಸಿದ್ದೇವೆ: ಮಹದೇವಪ್ಪ
ಭೇಟಿ ಬಳಿಕ ಮಾತನಾಡಿದ ಸಚಿವರು, ದಸರಾ ಮಹೋತ್ಸವಕ್ಕೆ ಸಂಪ್ರದಾಯದಂತೆ ರಾಜವಂಶಸ್ಥರನ್ನು ಆಹ್ವಾನಿಸಿದ್ದೇವೆ. ಪ್ರಮೋದಾದೇವಿ ಒಡೆಯರ್ ಅವರು ಎಂದಿನಂತೆ ಉತ್ಸಾಹ, ಸಂತೋಷದಿಂದ ದಸರಾಗೆ ಸಹಕಾರ ನೀಡುವುದಾಗಿ ಹೇಳಿದ್ದಾರೆ.
ಅರಮನೆ ಆವರಣದಲ್ಲಿ ಕಳೆದ ವರ್ಷ ಆಸನಗಳ ಸಂಖ್ಯೆಯನ್ನು ಹೆಚ್ಚು ಮಾಡಿದ್ದರಿಂದ ಮಳೆ ಬಂದಾಗ ಕಿರಿಕಿರಿ ಉಂಟಾಗಿತ್ತು. ಹೀಗಾಗಿ, ಆಸನಗಳ ಸಂಖ್ಯೆಯನ್ನು ಕಡಿಮೆ ಮಾಡುವಂತೆ ರಾಜವಂಶಸ್ಥರು ಜಿಲ್ಲಾಡಳಿತಕ್ಕೆ ಸಲಹೆ ನೀಡಿದ್ದಾರೆ. ಅದನ್ನು ನಾವು ಸ್ವೀಕರಿಸಿದ್ದೇವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ