ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಮುನ್ನ ಎಚ್ಡಿ ದೇವೇಗೌಡ ದೇಗುಲಕ್ಕೆ

Published : May 13, 2023, 03:02 AM IST
ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಮುನ್ನ ಎಚ್ಡಿ ದೇವೇಗೌಡ ದೇಗುಲಕ್ಕೆ

ಸಾರಾಂಶ

ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳುವ ಮುನ್ನಾದಿನ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ನಗರದ ಲಕ್ಷ್ಮೇ ವೆಂಕಟೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಿದರು.

ಬೆಂಗಳೂರು (ಮೇ13) : ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳುವ ಮುನ್ನಾದಿನ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ನಗರದ ಲಕ್ಷ್ಮೇ ವೆಂಕಟೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಿದರು.

ಶುಕ್ರವಾರ ಜೆ.ಪಿ.ನಗರದಲ್ಲಿನ ದೇವಾಲಯಕ್ಕೆ ತೆರಳಿ ಪೂಜೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿ ವರ್ಷ ನನ್ನ ಆರೋಗ್ಯಕ್ಕೆ ಪೂಜೆ ನೆರವೇರಿಸಲಾಗುತ್ತದೆ. ಕಳೆದ ಐದು ವರ್ಷಗಳಿಂದ ಲಕ್ಷ್ಮೇ ನರಸಿಂಹ, ಯೋಗಾನರಸಿಂಹ, ವೆಂಕಟೇಶ್ವರನಿಗೆ ತಪ್ಪದೇ ಪೂಜೆ ನಡೆಸಲಾಗುತ್ತದೆ ಎಂದರು ಹೇಳಿದರು.

Karnataka assembly election: ಜೆಡಿಎಸ್ ಶಾಸಕರ ಹಿಡಿದಿಡಲು ಗೌಡ, ಎಚ್‌ಡಿಕೆ ತಂತ್ರ!

ಈ ಇಳಿವಯಸ್ಸಿನಲ್ಲಿಯೂ ಏನಾದರೂ ಹೋರಾಟ ಮಾಡಲು ಮತ್ತು ಪ್ರಾದೇಶಿಕ ಪಕ್ಷ ಉಳಿಸಲು ಶ್ರಮ ಹಾಕಲು ಈ ಮಹಾನುಭವ ನೀಡಿದ ಶಕ್ತಿಯೇ ಕಾರಣ. ಹೀಗಾಗಿ ಪೂಜೆ ಮಾಡಲಾಗುತ್ತಿದೆ. ಇದರಲ್ಲಿ ಮತ್ತೇನು ವಿಶೇಷತೆ ಇಲ್ಲ ಎಂದರು.

ಜೆಡಿಎಸ್‌ ಶಾಸಕರ ಹಿಡಿದಿಡುವ ಹೊಣೆ ಜಿಟಿಡಿಗೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ಸಾಧ್ಯತೆ ಇದೆ ಎಂದು ಸಮೀಕ್ಷೆಗಳ ವರದಿ ಬರುತ್ತಿದ್ದಂತೆ ತಮ್ಮ ಪಕ್ಷದವರನ್ನು ರಾಷ್ಟ್ರೀಯ ಪಕ್ಷಗಳು ಹೈಜಾಕ್‌ ಮಾಡಬಹುದು ಎಂಬ ಭೀತಿಯಿಂದ ಜೆಡಿಎಸ್‌ ತನ್ನವರನ್ನು ಹಿಡಿದಿಟ್ಟುಕೊಳ್ಳಲು ಕಾರ್ಯತಂತ್ರ ರೂಪಿಸಲು ಮುಂದಾಗಿದೆ.

ಈ ಸಂಬಂಧ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ರಾಜಕೀಯ ರಣತಂತ್ರ ರೂಪಿಸಲು ಕಾರ್ಯಪ್ರವೃತ್ತರಾಗಿದ್ದಾರೆ. ಶನಿವಾರ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಶಾಸಕ ಜಿ.ಟಿ.ದೇವೇಗೌಡ ಅವರೊಂದಿಗೆ ಸುಮಾರು ಒಂದು ತಾಸಿಗಿಂತ ಹೆಚ್ಚು ಕಾಲ ಸಮಾಲೋಚನೆ ನಡೆಸಿದರು. ಹಳೇ ಮೈಸೂರು ಭಾಗ ಜೆಡಿಎಸ್‌ನ ಭದ್ರಕೋಟೆ ಎನ್ನಿಸಿಕೊಂಡಿದೆ. ಈ ಭಾಗದಲ್ಲಿ ಜೆಡಿಎಸ್‌ನಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಆಯ್ಕೆಯಾಗಿ ಬರುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇವರನ್ನು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಸರ್ಕಾರ ರಚಿಸಲು ಸೆಳೆಯುವ ಸಾಧ್ಯತೆ ಇದೆ. ಹೀಗಾಗಿ ಹಳೇ ಮೈಸೂರು ಭಾಗದಲ್ಲಿ ಗೆದ್ದು ಬರುವ ಶಾಸಕರನ್ನು ಹಿಡಿದಿಟ್ಟುಕೊಳ್ಳುವಂತೆ ದೇವೇಗೌಡ ಅವರು ಜಿ.ಟಿ.ದೇವೇಗೌಡ ಅವರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಈ ನಡುವೆ, ಪಕ್ಷದ ಮುಂದಾಳತ್ವದಲ್ಲಿ ಸರ್ಕಾರ ರಚನೆಯಾದರೆ, ಜೆಡಿಎಸ್‌ ಪ್ರಬಲವಾಗಿರುವ ಹಳೇ ಮೈಸೂರು ಭಾಗದಲ್ಲಿ ಯಾವ ರೀತಿ ಸ್ಥಾನಮಾನಗಳನ್ನು ಹಂಚಿಕೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆಯೂ ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ. ಶನಿವಾರ ಫಲಿತಾಂಶ ಪ್ರಕಟವಾಗಲಿದ್ದು, ನಂತರ ಮುಂದಿನ ನಡೆಯ ಬಗ್ಗೆ ಯಾವ ತೀರ್ಮಾನ ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. ಸುಮಾರು ಒಂದು ತಾಸಿಗಿಂತ ಹೆಚ್ಚು ಸಮಯ ಸಮಾಲೋಚನೆ ನಡೆಸಿದ ಬಳಿಕ ಜಿ.ಟಿ.ದೇವೇಗೌಡ ತೆರಳಿದರು.

ಕುಮಾರಸ್ವಾಮಿಗೆ ಪಂಚರತ್ನ ಯೋಜನೆ ಬಲ: ದೇವೇಗೌಡ

ಇದೇ ವೇಳೆ ಶನಿವಾರ ರಾಜ್ಯದ 224 ಕ್ಷೇತ್ರಗಳ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ನಗರದ ಜೆ.ಪಿ.ನಗರದ ತಿರುಮಲಗಿರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!