'ಚೆಲ್ಲಾಟ ನಿಲ್ಲಿಸಿ, ಬೆಂಗಳೂರಿಗರು ಬದುಕುಳಿಯಲು 20 ದಿನ ಲಾಕ್‌ಡೌನ್ ಘೋಷಿಸಿ'

Published : Jun 23, 2020, 09:10 AM ISTUpdated : Jun 23, 2020, 02:14 PM IST
'ಚೆಲ್ಲಾಟ ನಿಲ್ಲಿಸಿ, ಬೆಂಗಳೂರಿಗರು ಬದುಕುಳಿಯಲು 20 ದಿನ ಲಾಕ್‌ಡೌನ್ ಘೋಷಿಸಿ'

ಸಾರಾಂಶ

ದಿನೇ ದಿನೇ ಹೆಚ್ಚಾಗುತ್ತಿದೆ ಕೊರೋನಾ ಅಟ್ಟಹಾಸ| ಬೆಂಗಳೂರಿನ ನಾಲ್ಕು ವಾರ್ಡ್‌ಗಳು ಸೀಲ್‌ಡೌನ್| ಸೀಲ್‌ಡೌನ್ ಬೇಡ ಬೆಂಗಳೂರಿನಾದ್ಯಂತ ಇಪ್ಪತ್ತು ದಿನ ಲಾಕ್‌ಡೌನ್ ಘೋಷಿಸಿ ಎಂದ ಮಾಜಿ ಸಿಎಂ

ಬೆಂಗಳೂರು(ಜೂ.23): ರಾಜ್ಯಾದ್ಯಂತ ಅದರಲ್ಲೂ ಬೆಂಗಳೂರಿನಲ್ಲಿ ಕರೋನಾ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಹೀಗಿರುವಾಗ ರಾಜ್ಯ ಸರ್ಕಾರ ನಾಲ್ಕು ವಾರ್ಡ್‌ಗಳನ್ನು ಸೀಲ್‌ಡೌನ್ ಮಾಡಿದೆ. ಆದರೀಗ ಸರ್ಕಾರದ ಈ ನಡೆಗೆ ವಿರೋಧ ವ್ಯಕ್ತವಾಗಿದ್ದು, ಬೆಂಗಳೂರಿಗರು ಬದುಕುಳಿಯಬೇಕಾದರೆ 20 ದಿನ ಲಾಕ್‌ಡೌನ್ ಘೋಷಿಸುವಂತೆ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಹೌದು ಈ ಸಂಬಂಧ ಪೋಸ್ಟ್ ಮಾಡಿರುವ ಎಚ್‌ಡಿಕೆ ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯಕ್ಕಿಂತ ಆರ್ಥಿಕತೆ ಮುಖ್ಯವಲ್ಲ.‌

"

19,400 ಮಂದಿಗೆ ಸೋಂಕು, 503 ಸೋಂಕಿತರು ಸಾವು!

ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ.

ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು.' ಎಂದು ಬರೆದಿದ್ದಾರೆ.

ಸದ್ಯ ಕೊರೋನಾ ನಿಯಂತ್ರಿಸಲು ಸರ್ಕಾರ ಕೂಡಾ ಎಲ್ಲಾ ರೀತಿಯ ಪ್ರಯತ್ನ ಮುಂದುವರೆಸಿದೆ. ಹೀಗಿರುವಾಗ ಮಾಜಿ ಸಿಎಂ ಈ ಸಲಹೆಯನ್ನು ಅನುಸರಿಸುತ್ತಾ? ಅಥವಾ ಬೇರೆ ಯಾವುದಾದರೂ ಕ್ರಮ ಕೈಗೊಳ್ಳುತ್ತಾ ಕಾದು ನೊಡಬೇಕು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್