ಪ್ರಜ್ವಲ್‌ ಪ್ರಕರಣದ ಹಿಂದೆ ಕುಮಾರಸ್ವಾಮಿ ಕೈವಾಡವಿದೆ: ಡಿಕೆ ಸುರೇಶ್ ಗಂಭೀರ ಆರೋಪ

Published : May 01, 2024, 01:25 PM ISTUpdated : May 01, 2024, 02:12 PM IST
ಪ್ರಜ್ವಲ್‌ ಪ್ರಕರಣದ ಹಿಂದೆ ಕುಮಾರಸ್ವಾಮಿ ಕೈವಾಡವಿದೆ: ಡಿಕೆ ಸುರೇಶ್ ಗಂಭೀರ ಆರೋಪ

ಸಾರಾಂಶ

ಪ್ರಜ್ವಲ್‌ ರೇವಣ್ಣ ಎಂದು ಹೇಳಲಾಗುತ್ತಿರುವ ರಾಸಲೀಲೆ ಪ್ರಕರಣದ  ಹಿಂದೆ ಕುಮಾರಸ್ವಾಮಿ ಇದ್ದಾರೆ ಎಂದು ಡಿಕೆ ಸುರೇಶ್  ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು (ಮೇ.1): ಪ್ರಜ್ವಲ್‌ ರೇವಣ್ಣ ಎಂದು ಹೇಳಲಾಗುತ್ತಿರುವ ರಾಸಲೀಲೆ ಪ್ರಕರಣ  ದಿನಕ್ಕೊಂದು ತಿರುವು ಪಡೆಯುತ್ತಿದ್ದು, ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. 

ಈ ಪ್ರಕರಣದ ಹಿಂದೆ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಹೆಚ್‌ಡಿಕೆ ನೀಡಿರುವ ಹೇಳಿಕೆಗೆ ವಿರುದ್ಧವಾಗಿ ಮಾತನಾಡಿರುವ ಡಿಕೆ ಸುರೇಶ್ ಅವರು ಈ ಪ್ರಕರಣದ ಹಿಂದೆ ಕುಮಾರಸ್ವಾಮಿ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪ್ರಜ್ವಲ್​​ ರಾಸಲೀಲೆಯ 2800 ವಿಡಿಯೋಗಳ ಗುಟ್ಟು ರಟ್ಟಾಗಿದ್ದೇಗೆ?​

 

ಕಾನೂನಿನ ಕುಮಾರಸ್ವಾಮಿಗೆ ಡಿ‌ಕೆ‌ಶಿ‌ ನೆನಪಿಸಿಕೊಳ್ಳದಿದ್ದರೆ ನಿದ್ದೆ ಊಟ ಸೇರಲ್ಲ. ನಮ್ಮ ಹತ್ರ ಮೊದಲೇ ಇದ್ದಿದ್ರೆ ಚುನಾವಣೆ ಮುಂಚೆ ಬಿಡ್ತಾ ಇದ್ವಿ. ಈ ಪ್ರಕರಣದಲ್ಲಿ ವ್ಯವಸ್ಥಿತವಾಗಿ ನುಣುಚಿಕೊಳ್ಳುವ ಪ್ರಯತ್ನ ಮಾಡ್ತಾ ಇದ್ದಾರೆ. ಹೆಣ್ಣುಮಕ್ಕಳ ಸಮಸ್ಯೆ ಮುಖ್ಯ, ಯಾರು ಬಿಡುಗಡೆ ಮಾಡಿದ್ರು ಅಂತ ಅಲ್ಲ. ಕುಮಾರಸ್ವಾಮಿ ದಿನಕ್ಕೊಂದು ಸ್ಟೇಟಮೆಂಟ್ ಕೊಡ್ತಾ ಇರ್ತಾರೆ. ಅವರು ಡಿಕೆಶಿ ಮೇಲೆ ಯಾವ ಆರೋಪ ಬಿಟ್ಟಿದ್ದಾರೆ. ಎಲ್ಲ ಆರೋಪ ಡಿಕೆಶಿ ‌ಮೇಲೆ ಮಾಡ್ತಾರೆ. ಕುಮಾರಸ್ವಾಮಿ ಅವರ ಉಳಿಯುವಿಗೋಸ್ಕರ ಡಿಕೆಶಿ ಹೆಸರು ಬಳಸುತ್ತಿದ್ದಾರೆ. ಇದರ ಹಿಂದೆ ಕುಮಾರಸ್ವಾಮಿ ಕೈವಾಡ ಇದೆ. ಹಾಸನ ನಾಯಕರ ಕೈವಾಡ ಇದೆ. ಈ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇತ್ತು ಎಂದು  ಡಿ‌ಕೆ ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.

Prajwal Revanna: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಮಹಾನಾಯಕನ ಕೈವಾಡ ಇದೆ ಎಂದ ಹೆಚ್‌ಡಿಕೆ

 

ಮುಂಚೆಯಿಂದ ಈ ಸುದ್ದಿ ಇತ್ತು. ವಿಡಿಯೋ ಬಿಡುಗಡೆ ಆಗಿರಲಿಲ್ಲ. ವಿಡಿಯೋ ಬಿಡುಗಡೆ ಆದಮೇಲೆ ಚರ್ಚೆ ಆಗುತ್ತಿದೆ. ಸುಮ್ಮನೆ ಪ್ರಜ್ವಲ್ ರೇವಣ್ಣ ಅಮಾನತ್ತು‌ ಮಾಡಿದ್ದಾರೆ. ಅದು ಕುಟುಂಬದ ಪಾರ್ಟಿ, ಯಾವಾಗ ಬೇಕಾದ್ರು ಮತ್ತೆ ತೆಗೆದುಕೊಳ್ಳುತ್ತಾರೆ. ಬೇಡವಾದಾಗ ಪಾರ್ಟಿಯಿಂದ ಬಿಡ್ತಾರೆ ಎಂದು ಡಿ‌ಕೆ ಸುರೇಶ್ ಹೇಳಿದ್ದಾರೆ.

ಕಾನೂನಿನ ಚೌಕಟ್ಟಿನಲ್ಲಿ ಎಲ್ಲರ ಮೇಲೆ ಕ್ರಮ ಆಗಲಿ. ನೂಲಿನಂತೆ ಸೀರೆ ಅಂತಾರೆ. ಒಬ್ಬರದ್ದೆ ವಿಡಿಯೋ ಇಲ್ಲ ಇದು. ಹಾಸನದಲ್ಲಿ ಒಂದು ರೌಂಡ್ ಹೊಡೆಯಿರಿ. ಏನೆಲ್ಲ ಚರ್ಚೆಯಾಗುತ್ತಿದೆ ನಿಮಗೆ ಗೊತ್ತಾಗುತ್ತೆ. ಇದಕ್ಕೆ ವಿಶೇಷವಾಗಿ ಕಾನೂನು ಬರಬೇಕು. ಬ್ಲಾಕ್ ಮೇಲ್ ಮಾಡುವುದು, ವಿಡಿಯೋ ಬಿಡುಗಡೆ ಮಾಡುವುದು. ಇದಕ್ಕೆಲ್ಲ ವಿಶೇಷ ಕಾನೂನಿನ ಅವಶ್ಯಕತೆ ಇದೆ ಎಂದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಆಲೂಗಡ್ಡೆಗೆ ಮೊಳಕೆ ಬಂದರೆ ತಿನ್ನಬಹುದಾ? ತಜ್ಞರ ಎಚ್ಚರಿಕೆ ಏನು, ಯಾವುದು- ಯಾರಿಗೆ ಅಪಾಯ?