ಬಿಎಸ್‌ವೈಗೆ ಅಭಿನಂದಿಸಿದ ಎಚ್‌ಡಿಕೆ: ಕಾರಣ ಏನು..?

Kannadaprabha News   | Asianet News
Published : Jan 10, 2021, 07:42 AM IST
ಬಿಎಸ್‌ವೈಗೆ ಅಭಿನಂದಿಸಿದ ಎಚ್‌ಡಿಕೆ: ಕಾರಣ ಏನು..?

ಸಾರಾಂಶ

ಆತ್ಮನಿರ್ಭರಕ್ಕೂ ಮೊದಲೇ ನಾನು ಕಾಂಪೀಟ್‌ ವಿತ್‌ ಚೀನಾ ಎಂದಿದ್ದೆ | ಕೊಪ್ಪಳದ ಆಟಿಕೆ ಕ್ಲಸ್ಟರ್‌ ನನ್ನ ಯೋಜನೆ: ಎಚ್‌ಡಿಕೆ ಹೇಳಿಕೆ | ಮೋದಿಗಿಂತ ಮೊದಲೇ ನನ್ನ ಸರ್ಕಾರದಲ್ಲಿ ಸ್ವಾವಲಂಬಿ ಕಲ್ಪನೆ

ಬೆಂಗಳೂರು(ಜ.10): ಆತ್ಮನಿರ್ಭರಕ್ಕೂ ಮೊದಲೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆಯನ್ನು ಹೊಂದಿದ್ದು, ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕೆಂಬ ಉದ್ದೇಶದಿಂದ ಮುಖ್ಯಮಂತ್ರಿಯಾಗಿದ್ದ ವೇಳೆ ಕಾಂಪೀಟ್‌ ವಿತ್‌ ಚೀನಾ ರೂಪಿಸಲಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಕಾಂಪೀಟ್‌ ವಿತ್‌ ಚೀನಾ ಭಾಗವಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌ ರಚಿಸಿ 500 ಕೋಟಿ ರು. ಹಣ ನೀಡಲಾಗಿತ್ತು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಆ ಕ್ಲಸ್ಟರ್‌ಗೆ ಮರು ಚಾಲನೆ ನೀಡಿದ್ದಾರೆ.

ಸರ್ಕಾರಿ ಆಸ್ಪತ್ರೆಗೆ ಬೆಂಕಿ: 10 ನವಜಾತ ಶಿಶುಗಳ ದಾರುಣ ಸಾವು!

ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆ ಅಡಿಯಲ್ಲಿ ಆಟಿಕೆ ಉತ್ಪಾದನಾ ಘಟಕ ಆರಂಭಿಸುತ್ತಿರುವುದಾಗಿ ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ, ಕೇಂದ್ರ ಸರ್ಕಾರ ಆತ್ಮನಿರ್ಭರ ಕಲ್ಪನೆ ಜಾರಿಗೆ ತರುವುದಕ್ಕೂ ಮೊದಲೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆಯನ್ನು ಹೊಂದಿತ್ತು. ಅದರ ಭಾಗವಾಗಿಯೇ ಚೀನಾಕ್ಕೆ ಸಡ್ಡು ಹೊಡೆಯುವ ಯೋಜನೆಗಳನ್ನು ರೂಪಿಸಿತ್ತು ಎಂದು ಹೇಳಿದ್ದಾರೆ.

ಏಳು ಲಕ್ಷ ಕೋಟಿ ರು. ಮೊತ್ತದ ಜಾಗತಿಕ ಆಟಿಕೆ ಮಾರುಕಟ್ಟೆಯಲ್ಲಿ ಚೀನಾ ಪ್ರಬಲ ಹಿಡಿತ ಹೊಂದಿದೆ. ಇದರಲ್ಲಿ ಅಲ್ಪ ಪಾಲು ಕಸಿದರೂ ನಮ್ಮವರಿಗೆ ಉದ್ಯೋಗ ನೀಡಬಹುದು, ಆದಾಯ ಕೊಡಿಸಬಹುದು ಎಂಬುದು ನನ್ನ ಸರ್ಕಾರದ ದೂರದೃಷ್ಟಿಯಾಗಿತ್ತು. ಅದಕ್ಕೆ ಮರುಚಾಲನೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನೆಗಳು ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ