ಹೃದಯ ಶಸ್ತ್ರಚಿಕಿತ್ಸೆ: ಚೆನ್ನೈ ಆಸ್ಪತ್ರೆಯಿಂದ ಇಂದು ಕುಮಾರಸ್ವಾಮಿ ಡಿಸ್ಟಾರ್ಜ್

Published : Mar 24, 2024, 07:40 AM IST
ಹೃದಯ ಶಸ್ತ್ರಚಿಕಿತ್ಸೆ: ಚೆನ್ನೈ ಆಸ್ಪತ್ರೆಯಿಂದ ಇಂದು ಕುಮಾರಸ್ವಾಮಿ ಡಿಸ್ಟಾರ್ಜ್

ಸಾರಾಂಶ

ಬೆಂಗಳೂರಿಗೆ ಆಗಮಿಸಿದ ಬಳಿಕ ಕೆಲ ದಿನ ವಿಶ್ರಾಂತಿ ಪಡೆಯುವ ಸಾಧ್ಯತೆ ಇದ್ದು, ನಂತರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆಸ್ಪತ್ರೆಯಿಂದ ಆಗಮಿಸುತ್ತಿದ್ದಂತೆ ಜೆಡಿಎಸ್‌ಗೆ ಲಭ್ಯವಾಗಿರುವ ಮೂರು ಸ್ಥಾನಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ. 

ಬೆಂಗಳೂರು(ಮಾ.24):  ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು ಚೆನ್ನೈ ಆಸ್ಪತ್ರೆಯಿಂದ ಭಾನುವಾರ ಡಿಸ್ಟಾರ್ಜ್ ಆಗಲಿದ್ದಾರೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯಾಗಿದೆ. ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್‌ ಮತ್ತು ಅಮೆರಿಕದಿಂದ ಆಗಮಿಸಿದ ವೈದ್ಯರ ತಂಡದಿಂದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರ ಮಾಡಿ ಕುಮಾರಸ್ವಾಮಿ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ.

ಇಂದು(ಭಾನುವಾರ) ಬೆಳಗ್ಗೆ ಡಿಸ್ಟಾರ್ಜ್ ಆಗುವ ಕುಮಾರಸ್ವಾಮಿ ಅವರು ಬೆಳಗ್ಗೆ 7.30ಕ್ಕೆ ವಿಶೇಷವಿಮಾನದ ಮೂಲಕ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದನೇರವಾಗಿ ಜೆ.ಪಿ.ನಗರದ ನಿವಾಸಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆ 2024: ಮಂಡ್ಯದಿಂದ ಲೋಕಸಭೆಗೆ ಕುಮಾರಸ್ವಾಮಿ ಸ್ಪರ್ಧೆ ಖಚಿತ..!

ಬೆಂಗಳೂರಿಗೆ ಆಗಮಿಸಿದ ಬಳಿಕ ಕೆಲ ದಿನ ವಿಶ್ರಾಂತಿ ಪಡೆಯುವ ಸಾಧ್ಯತೆ ಇದ್ದು, ನಂತರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆಸ್ಪತ್ರೆಯಿಂದ ಆಗಮಿಸುತ್ತಿದ್ದಂತೆ ಜೆಡಿಎಸ್‌ಗೆ ಲಭ್ಯವಾಗಿರುವ ಮೂರು ಸ್ಥಾನಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!