ಕೊರೋನಾ ಕಾಟ:' ಕ್ಯಾಬ್ ಚಾಲಕರ ಲೋನ್ ಪಾವತಿಗೆ ವಿನಾಯಿತಿ ನೀಡಿ’

Suvarna News   | Asianet News
Published : Mar 20, 2020, 12:09 PM ISTUpdated : Mar 20, 2020, 12:43 PM IST
ಕೊರೋನಾ ಕಾಟ:' ಕ್ಯಾಬ್ ಚಾಲಕರ ಲೋನ್ ಪಾವತಿಗೆ ವಿನಾಯಿತಿ ನೀಡಿ’

ಸಾರಾಂಶ

ಕೊರೋನಾ ವೈರಸ್ ಭೀತಿ ಹೆಚ್ಚುತ್ತಿರುವಂತೆಯೇ ಭಾರತದಲ್ಲಿ ಸಾವಿನ ಸಂಕ್ಯೆ ಐದಕ್ಕೇರಿದೆ. ಕರ್ನಾಟಕದಲ್ಲಿ ಸೋಂಕು ಬಾಧಿಸತರ ಸಂಖ್ಯೆ 15ಕ್ಕೆ ಏರಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಲೋನ್ ಮರುಪಾವತಿಗೆ ಜನಸಾಮಾನ್ಯರಿಗೆ ಸಮಯಾವಕಾಶ ಕಲ್ಪಿಸುವಂತೆ ಕೇಳಿದ್ದಾರೆ.

ಬೆಂಗಳೂರು[ಮಾ.20]: ಕೊರೋನಾ ವೈರಸ್ ಭೀತಿ ಹೆಚ್ಚುತ್ತಿರುವಂತೆಯೇ ಭಾರತದಲ್ಲಿ ಸಾವಿನ ಸಂಕ್ಯೆ ಐದಕ್ಕೇರಿದೆ. ಕರ್ನಾಟಕದಲ್ಲಿ ಸೋಂಕು ಬಾಧಿಸತರ ಸಂಖ್ಯೆ 15ಕ್ಕೆ ಏರಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಲೋನ್ ಮರುಪಾವತಿಗೆ ಜನಸಾಮಾನ್ಯರಿಗೆ ಸಮಯಾವಕಾಶ ಕಲ್ಪಿಸುವಂತೆ ಕೇಳಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಈಗಾಗಲೇ ಕೊರೋನಾ ವೈರಸ್ ಹರಡದಂತೆ ನೋಡಿಕೊಳ್ಳಲು ಹಲವು ಕ್ರಮಗಳನ್ನು ಅನುಸರಿಸಲಾಗಿದೆ. ಕೊರೋನಾ ವೖರಸ್ ಭೀತಿ ಹೆಚ್ಚುತ್ತಿರುವಂತೆಯೇ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

ನಡುಕ ಹುಟ್ಟಿಸಿರುವ ಕೊರೋನಾಗೆ ತಾಯತ ಮಾರಾಟ!

ಕೊರೊನಾ ವೈರಸ್‌ನಿಂದ ಎದುರಾದ ನಿರ್ಬಂಧಗಳಿಂದ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ