ಹತ್ಯೆಯಾದ ಮೂರೂ ಯುವಕರ ಮನೆಗೆ ಎಚ್‌ಡಿಕೆ ಭೇಟಿ, ಸೂಕ್ತ ತನಿಖೆಗೆ ಸರ್ಕಾರಕ್ಕೆ ಒತ್ತಾಯ

Published : Aug 01, 2022, 03:37 PM ISTUpdated : Aug 01, 2022, 03:42 PM IST
ಹತ್ಯೆಯಾದ ಮೂರೂ ಯುವಕರ ಮನೆಗೆ ಎಚ್‌ಡಿಕೆ ಭೇಟಿ, ಸೂಕ್ತ ತನಿಖೆಗೆ ಸರ್ಕಾರಕ್ಕೆ ಒತ್ತಾಯ

ಸಾರಾಂಶ

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಇಂದು ಮಂಗಳೂರು ಪ್ರವಾಸ ಕೈಗೊಂಡಿದ್ದು, ಹತ್ಯೆಯಾದ ಮೂವರ ನಿವಾಸಕ್ಕೂ ಭೇಟಿ ನೀಡಿದ್ದಾರೆ.  

ಮಂಗಳೂರು (ಆ. 01): ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಇಂದು ಮಂಗಳೂರು ಪ್ರವಾಸ ಕೈಗೊಂಡಿದ್ದು, ಹತ್ಯೆಯಾದ ಮೂವರ ನಿವಾಸಕ್ಕೂ ಭೇಟಿ ನೀಡಿದ್ದಾರೆ.  ಬೆಳ್ಳಾರೆಯ ಮಸೂದ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ 5 ಲಕ್ಷ ರೂ ಪರಿಹಾರವನ್ನೂ ನೀಡಿದ್ದಾರೆ.

ಬಳಿಕ ಮಾತನಾಡಿ, ಸಿಎಂ ಸಾಹೇಬ್ರು ಬೊಮ್ಮಾಯಿ ಮನೆಗೆ ಭೇಟಿ ನೀಡಿ ಮಸೂದ್ ಮನೆಗೆ ಬರಲಿಲ್ಲ ಯಾಕೆ..? ಇಲ್ಲಿ ಸಿಎಂ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ಈ ಪ್ರಕರಣದ ತನಿಖೆ ನಡೆದು ಸತ್ಯಾಸತ್ಯತೆ ಹೊರ ಬರಲಿ ಎಂದು ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿಎಂ ಪ್ರತಿಕ್ರಿಯಿಸಿದ್ದಾರೆ. ಸದ್ಯದಲ್ಲೇ ಫಾಸಿಲ್ ಹಾಗೂ ಮಸೂದ್ ಮನೆಗೆ ಭೇಟಿ ನೀಡುತ್ತೇನೆ ಎಂದು ಸಿಎಂ ವಿವಾದಕ್ಕೆ ತೆರೆ ಎಳೆದಿದ್ದಾರೆ. 

ಪ್ರವೀಣ್ ಮನೆಗೆ ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಜೊತೆ 5 ಲಕ್ಷ ರೂ ಪರಿಹಾರ ನೀಡಿದ್ದಾರೆ. ಪ್ರವೀಣ್ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ಆಗಬೇಕು. ಕಾಟಾಚಾರಕ್ಕೆ ತನಿಖೆ ಆಗಬಾರದು' ಎಂದು ಒತ್ತಾಯಿಸಿದ್ದಾರೆ. 

ಮಂಗಳೂರಿನಲ್ಲಿ ಕಳೆದ ಹದಿನೈದು, ಇಪ್ಪತ್ತು ವರ್ಷಗಳಿಂದ ಎರಡು ಕೋಮುಗಳ ನಡುವೆ ಸಾಮರಸ್ಯದ ಕೊರತೆ ಇದೆ. ಇದನ್ನು ಸರಿಪಡಿಸುವುದು ಸರ್ಕಾರದ ಕೆಲಸ. ಆದರೆ ಸಮಾಜದಲ್ಲಿ ಕೋಮು ಭಾವನೆ ಮೂಡುವ ವಾತಾವರಣ ನಿರ್ಮಾಣ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!