
ಬೆಂಗಳೂರು[ಫೆ.06]: ರಾಹುಕಾಲ, ಗುಳಿಕಕಾಲ, ಜ್ಯೋತಿಷ್ಯದ ಬಗ್ಗೆ ಅಪಾರ ನಂಬಿಕೆ ಹೊಂದಿರುವ ಸಚಿವ ಎಚ್.ಡಿ.ರೇವಣ್ಣ ಅವರೇ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಜೆಟ್ ಮಂಡಿಸುವ ವೇಳೆಯನ್ನು ಸಹ ನಿಗದಿ ಮಾಡಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು 2019-20ನೇ ಸಾಲಿನ ಬಜೆಟ್ನನ್ನು ಫೆ.8ರಂದು ಮಧ್ಯಾಹ್ನ 12.30ಕ್ಕೆ ಮಂಡಿಸಲಿದ್ದಾರೆ. ಇದಕ್ಕೂ ಮೊದಲಿನ ವೇಳೆ ರಾಹುಕಾಲ ಆಗಿರುವುದರಿಂದ ಬಜೆಟ್ ಮಂಡನೆ ಸೂಕ್ತ ಅಲ್ಲ ಎಂದು ರೇವಣ್ಣ ಅವರ ಸಲಹೆ ಮೇರೆಗೆ 12.30ಕ್ಕೆ ಬಜೆಟ್ ಮಂಡಿಸಲು ಮುಂದಾಗಿದ್ದಾರೆ ಎಂದು ಗೊತ್ತಾಗಿದೆ.
ಬಜೆಟ್ ಮಂಡನೆ ಸಾಮಾನ್ಯವಾಗಿ 11 ಗಂಟೆ ನಂತರ ನಿಗದಿಯಾಗುತ್ತಿತ್ತು, ಆದರೆ ರಾಹುಕಾಲ ಇರುವ ಕಾರಣ 12.30ರ ನಂತರವೇ ಆಯವ್ಯಯ ಮಂಡಿಸಬೇಕೆಂದು ರೇವಣ್ಣ ಅವರು ಸಲಹೆ ನೀಡಿದರೆಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ